ಮೋದಿ ಭೇಟಿ ಮಾಡಿದ ಬೆಂಗಳೂರು ವಿದ್ಯಾರ್ಥಿನಿಯರು
ನವದೆಹಲಿ, ಆಗಸ್ಟ್, 05 : ಬೆಂಗಳೂರಿನ ನ್ಯೂ ಹಾರಿಜಾನ್ ಪಬ್ಲಿಕ್ ಶಾಲೆಯ (ಎನ್ ಎಚ್ ಪಿಎಸ್) ವಿದ್ಯಾರ್ಥಿನಿಯರು ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ,ಶುಭಾಷಯ ಸ್ವೀಕರಿಸಿದ್ದು, ಮೋದಿ ಅವರಿಂದ ಹಲವಾರು ಪ್ರಶ್ನೆಗಳಿಗೆ ಉತ್ತರ ಪಡೆದು ಹರ್ಷಚಿತ್ತರಾಗಿದ್ದಾರೆ.
ಎನ್ಎಚ್ ಪಿಎಸ್ ನ 9 ನೇ ತರಗತಿ ವಿದ್ಯಾರ್ಥಿನಿಯರು ಮೋದಿ ಅವರ ಸ್ವಚ್ಛ ಭಾರತ ಅಭಿಯಾನದಿಂದ ಪ್ರೇರೇಪಿತರಾಗಿ ಒಣ ಕಸ ಮಾರಾಟ ಮತ್ತು ಖರೀದಿ ಮಾಡುವುದರ ಬಗ್ಗೆ ಸೆಲೆಕ್ಸೋ (Sellixo ) ಎಂಬ ಹೊಸ ಅಪ್ಲಿಕೇಶನ್ ತಯಾರಿಸಿದ್ದರು. ಬಳಿಕ ಫ್ರಾನ್ಇಸ್ಕೋದಲ್ಲಿ ನಡೆದ ಟೆಕ್ನೋವೇಶನ್ ಚಾಲೆಂಜ್ 2015 ಸ್ಫರ್ಧೆಯಲ್ಲಿ ಭಾಗವಹಿಸಿದ್ದ ಇವರು ಜೂನ್ 25 ರಂದು ನಡೆದ ಫೈನಲ್ನಲ್ಲಿ ಮೊದಲ ಬಹುಮಾನ ಗಳಿಸಿದ್ದರು.[ಬೆಂಗಳೂರು ವಿದ್ಯಾರ್ಥಿನಿಯರ ಜಗಮೆಚ್ಚಿದ ಸಾಧನೆ]

ಈ ಪ್ರಯುಕ್ತ ವಿದ್ಯಾರ್ಥಿನಿಯರನ್ನು ಭೇಟಿ ಮಾಡಿದ ಮೋದಿ ಅವರು 'ನಮ್ಮ ರಾಷ್ಟ್ರದ ಕೀರ್ತಿ ಪತಾಕೆಯನ್ನು ಹಾರಿಸಿ, ರಾಷ್ಟ್ರದ ಖ್ಯಾತಿಯನ್ನು ಹೆಚ್ಚಿಸಿದ್ದೀರಿ. ನಿಮ್ಮನ್ನು ಕಂಡು ನನಗೆ ಹೆಮ್ಮೆ ಎನಿಸುತ್ತಿದೆ. ನೀವೇ ನಮ್ಮ ದೇಶದ ನಿಜವಾದ ಆದರ್ಶ ವ್ಯಕ್ತಿಗಳು, ನಿಮ್ಮ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ' ಎಂದು ಶುಭ ಹಾರೈಸಿದ್ದಾರೆ.
ಬಳಿಕ 10 ನಿಮಿಷಗಳ ಕಾಲ ವಿದ್ಯಾರ್ಥಿನಿಯರೊಂದಿಗೆ ಸಂವಾದ ಕೈಗೊಂಡ ನರೇಂದ್ರ ಮೋದಿ ಅವರು ಹೊಸದಾಗಿ ತಯಾರಿಸಿದ ಆಪ್ಲೀಕೇಶನ್ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವುದರ ಜೊತೆಗೆ ಇದರ ವಿಶೇಷ ಲಕ್ಷಣಗಳನ್ನು ಪಟ್ಟಿಮಾಡಿಕೊಂಡಿದ್ದಾರೆ ಹಾಗೂ ಇವರ ಸ್ವಚ್ಛ ಭಾರತ ಅಭಿಯಾನ, ಡಿಜಿಟಲ್ ಇಂಡಿಯಾ ಹಾಗೂ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಗಳ ಕುರಿತಾಗಿ ತಮ್ಮ ಕಲ್ಪನೆಗಳನ್ನು ವ್ಯಕ್ತಪಡಿಸಿದ್ದಾರೆ.
ಎನ್ಎಚ್ ಪಿಎಸ್ ನ ವಿದ್ಯಾರ್ಥಿನಿಯರನ್ನು ಭೇಟಿ ಮಾಡಲು ಕುತೂಹಲ ವ್ಯಕ್ತಪಡಿಸಿದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವೆ ಸ್ಮೃತಿ ಇರಾನಿ ವಿದ್ಯಾರ್ಥಿನಿಯರ ಸಾಧನೆಯನ್ನು ಮೆಚ್ಚಿ ಈ ವಿದ್ಯಾರ್ಥಿನಿಯರು ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೂ ಮಾದರಿಯಾಗಿದ್ದಾರೆ. ಗ್ರಾಮೀಣ ಬಾಲಕಿಯರು ಇವರಂತೆ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶದ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಆಶಿಸಿದ್ದಾರೆ.
ಮೋದಿ ಅವರ ಆಗಮನ ಕಂಡು ಸಂತಸಗೊಂಡ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ವಿದ್ಯಾರ್ಥಿನಿಯರು, ಬೋಧನಾ ಸಿಬ್ಬಂದಿಗಳು 'ಈ ದಿನ ನಮ್ಮ ಬದುಕಿನಲ್ಲಿ ಮರೆಯಲಾಗದ ನೆನಪು. ದಿಸ್ ಡೇ ಇಸ್ ಗ್ರೇಟ್ ಡೇ' ಎಂದು ಹೇಳಿದ್ದಾರೆ. ಅಲ್ಲದೇ ಮುಂದಿನ ಒಂದು ವರ್ಷದಲ್ಲಿ ಹೊಸ ಅಪ್ಲೀಕೇಶನ್ ನ್ನು ಇನ್ನಷ್ಟು ಅಭಿವೃದ್ದಿ ಪಡಿಸಿ ಉಪಯೋಗವಾಗುವಂತೆ ಮಾಡಲಿದ್ದೇವೆ ಎಂದು ವಿದ್ಯಾರ್ಥಿನಿಯರು ಮೋದಿ ಅವರಿಗೆ ಭರವಸೆ ನೀಡಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications