ಪ್ರಣವ್ ಮುಖರ್ಜಿ ಮಹಾನ್ ಮುತ್ಸದ್ಧಿ: ಮಾಜಿ ರಾಷ್ಟ್ರಪತಿ ಅಗಲಿಕೆಗೆ ಪ್ರಧಾನಿ ಮೋದಿ ಶೋಕ
ನವದೆಹಲಿ, ಆಗಸ್ಟ್ 31: ಆರೋಗ್ಯ ಸಮಸ್ಯೆಗಳಿಂದಾಗಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೋಮವಾರ ಕೊನೆಯುಸಿರೆಳೆದರು. ಅವರ ಸಾವಿಗೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
Recommended Video
ಪ್ರಧಾನಿ ನರೇಂದ್ರ ಮೋದಿ, ಹಿರಿಯ ನಾಯಕ ಪ್ರಣವ್ ಮುಖರ್ಜಿ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. 'ಭಾರತ ರತ್ನ ಶ್ರೀ ಪ್ರಣವ್ ಮುಖರ್ಜಿ ಅವರ ನಿಧನಕ್ಕೆ ಭಾರತ ದುಃಖಿಸುತ್ತಿದೆ. ಅವರು ನಮ್ಮ ದೇಶದ ಅಭಿವೃದ್ಧಿ ಪಥದಲ್ಲಿ ಅಳಿಸಲಾಗದ ಗುರುತನ್ನು ಮೂಡಿಸಿ ಹೋಗಿದ್ದಾರೆ' ಎಂದು ಪ್ರಧಾನಿ ಸ್ಮರಿಸಿದ್ದಾರೆ.
'ಒಬ್ಬ ಶ್ರೇಷ್ಠ ವಿದ್ವಾಂಸ, ಒಬ್ಬ ಮಹಾನ್ ಮುತ್ಸದ್ಧಿ, ಇಡೀ ರಾಜಕೀಯ ವ್ಯವಸ್ಥೆ ಮತ್ತು ಸಮಾಜದ ಎಲ್ಲ ವರ್ಗಗಳೂ ಅವರನ್ನು ಮೆಚ್ಚಿಕೊಂಡಿದ್ದವು' ಎಂದು ಮೋದಿ ತಮ್ಮ ಸಂತಾಪ ಸಂದೇಶದ ಟ್ವೀಟ್ನಲ್ಲಿ ತಿಳಿಸಿದ್ದಾರೆ.

ಹಲವು ದಶಕಗಳ ತಮ್ಮ ರಾಜಕೀಯ ಬದುಕಿನಲ್ಲಿ ಪ್ರಣವ್ ಮುಖರ್ಜಿ ಅವರು ಮಹತ್ವದ ಆರ್ಥಿಕ ಮತ್ತು ರಕ್ಷಣಾ ಸಚಿವಾಲಯಗಳಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುವ ಕೊಡುಗೆಗಳನ್ನು ನೀಡಿದ್ದಾರೆ. ಅವರೊಬ್ಬ ಅದ್ಭುತ ಸಂಸದೀಯ ಪಟು. ಸದಾ ಚೆನ್ನಾಗಿ ತಯಾರಿ ಮಾಡಿಕೊಂಡಿರುತ್ತಿದ್ದ, ಅಪ್ರತಿಮವಾಗಿ ಅಭಿವ್ಯಕ್ತಗೊಳಿಸುತ್ತಿದ್ದ ಜತೆಗೆ ತಮಾಷೆಯ ವ್ಯಕ್ತಿತ್ವದವರು.
ಭಾರತದ ರಾಷ್ಟ್ರಪತಿಯಾಗಿ ಪ್ರಣವ್ ಮುಖರ್ಜಿ ಅವರು ರಾಷ್ಟ್ರಪತಿ ಭವನವು ಜನಸಾಮಾನ್ಯರಿಗೆ ಮತ್ತಷ್ಟು ಸುಲಭ ಪ್ರವೇಶಕ್ಕೆ ಸಿಗುವಂತೆ ಮಾಡಿದರು. ಅವರು ರಾಷ್ಟ್ರಪತಿ ಭವನವನ್ನು ಕಲಿಕೆಯ, ಆವಿಷ್ಕಾರದ, ಸಂಸ್ಕೃತಿ, ವಿಜ್ಞಾನ ಮತ್ತು ಸಾಹಿತ್ಯದ ಕೇಂದ್ರವನ್ನಾಗಿಸಿದರು. ಪ್ರಮುಖ ನೀತಿ ವಿಷಯಗಳಲ್ಲಿನ ಅವರ ವಿವೇಕಯುತ ಸಲಹೆಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.

2014ರಲ್ಲಿ ನನಗೆ ನವದೆಹಲಿ ಹೊಸತು. ಮೊದಲ ದಿನದಿಂದಲೂ ಪ್ರಣವ್ ಮುಖರ್ಜಿ ಅವರ ಮಾರ್ಗದರ್ಶನ, ಬೆಂಬಲ ಮತ್ತು ಆಶೀರ್ವಾದದ ಹಾರೈಕೆ ಸಿಕ್ಕಿತು. ಅವರೊಂದಿಗಿನ ಸಮಾಲೋಚನೆಗಳನ್ನು ಎಂದಿಗೂ ನೆನೆಸಿಕೊಳ್ಳುತ್ತೇನೆ. ಅವರ ಕುಟುಂಬ, ಸ್ನೇಹಿತರು, ಅನುಯಾಯಿಗಳು ಮತ್ತು ಭಾರತದೆಲ್ಲಡೆಗಿನ ಬೆಂಬಲಿಗರಿಗೆ ನನ್ನ ಸಂತಾಪಗಳು ಎಂದು ಮೋದಿ ಹೇಳಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications