ಗೊತ್ತಾ? ಪ್ರಧಾನಿ ಮೋದಿ ರಾಹುಲ್ ಗಾಂಧಿಗೆ ಮೇಷ್ಟ್ರಂತೆ!
Recommended Video

ನವದೆಹಲಿ, ಡಿಸೆಂಬರ್ 12: "ನಿಜ ಹೇಳಬೇಕೆಂದರೆ, ಪ್ರಧಾನಿ ನರೇಂದ್ರ ಮೋದಿಯವರು ನನಗೆ ಪಾಠ ಕಲಿಸಿದ್ದಾರೆ, 'ಏನನ್ನು ಮಾಡಬಾರದು ಎಂಬ ಪಾಠವನ್ನು ಮೋದಿ ನನಗೆ ಕಲಿಸಿಕೊಟ್ಟಿದ್ದಾರೆ" ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಜೆಪಿ ಆಡಳಿತವಿದ್ದ ಛತ್ತೀಸ್ ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಅಮೋಘ ಜಯ ಸಾಧಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ತಮ್ಮ ಸಂತಸವನ್ನು ಹಂಚಿಕೊಂಡರು.
'2014 ರ ನಂತರದ ಪ್ರಯಾಣ ನಿಜಕ್ಕೂ ಅತ್ಯುತ್ತಮವಾಗಿತ್ತು. ಹಲವು ತೊಡಕುಗಳಿದ್ದವು, ಕಹಿ ಇತ್ತು. ಆದರೂ ಉತ್ತಮ ಪ್ರಯಾಣ' ಎಂದು ಅವರು ಹೇಳಿದರು.
ತೆಲಂಗಾಣ, ಮಿಜೋರಾಂ, ಛತ್ತೀಸ್ ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಫಲಿತಾಂಶ ಡಿ.11 ರಂದು ಹೊರಬಿದ್ದಿದೆ.

ಏನನ್ನು ಮಾಡಬಾರದು ಎಂಬುದನ್ನು ಕಲಿಸಿದ್ದಾರೆ!
"ನರೇಂದ್ರ ಮೋದಿ ಅವರು ನನಗೆ ಮೇಷ್ಟ್ರು. ಅವರು ನನಗೆ ಪಾಠ ಕಲಿಸಿದ್ದಾರೆ. ಏನನ್ನು ಮಾಡಬೇಕು ಎಂಬುದನ್ನಲ್ಲ, ಬದಲಾಗಿ ಏನನ್ನು ಮಾಡಬಾರದು ಎಂಬುದನ್ನು ಕಲಿಸಿದ್ದಾರೆ. ನರೇಂದ್ರ ಮೋದಿ ಅವರಿಗೆ 2014 ರಲ್ಲಿ ಬಹುದೊಡ್ಡ ಅವಕಾಶ ನೀಡಲಾಗಿತ್ತು. ಆದರೆ ಅವರು ಈ ದೇಶದ ಜನರ ಹೃದಯ ಬಡಿತ ಆಲಿಸುವಲ್ಲಿ ವಿಫಲರಾದರು. ಅವರಲ್ಲಿ ದುರಹಂಕಾರವಿತ್ತು" - ರಾಹುಲ್ ಗಾಂಧಿ

2014 ರ ಚುನಾವಣೆ ನನಗೆ ಮಹತ್ವದ್ದು
"ನಾನು ಯಾವತ್ತಿಗೂ ನನ್ನ ತಾಯಿಯ ಬಳಿ ಹೇಳುತ್ತಿದ್ದೆ. 2014 ರ ಚುನಾವಣೆ ನನಗೆ ಅತ್ಯಂತ ಮಹತ್ವದ್ದು ಎಂದು. ಈ ಚುನಾವಣೆಯಿಂದ ನಾನು ಸಾಕಷ್ಟು ಕಲಿತೆ. ಮನುಷ್ಯನಿಗೆ ಅತ್ಯಗತ್ಯವಾದ ಗುಣ ನಮ್ರತೆ ಎಂಬುದನ್ನು ನಾನು ಕಲಿತೆ" - ರಾಹುಲ್ ಗಾಂಧಿ

ಜನರು ಮೋದಿಯನ್ನು ಆರಿಸಿದ್ದು ಏಕೆ?
"ಪ್ರಧಾನಿ ನರೇಂದ್ರ ಮೋದಿಯವರನ್ನು ಜನರು ಆರಿಸಿದ್ದು ನಿರುದ್ಯೋಗ, ಭ್ರಷ್ಟಚಾರವನ್ನು ಹೋಗಲಾಡಿಸುತ್ತಾರೆ ಎಂಬ ಅವರ ಮಾತನ್ನು ನಂಬಿ. ಆದರೆ ಇದೀಗ ಪ್ರಧಾನಿಯೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬುದು ತಿಳಿದು ಅವರಿಗೆ ಭ್ರಮನಿರಸನವಾಗಿದೆ. ಈ ವೈಫಲ್ಯ ಅದರದೇ ಈ ಫಲಿತಾಂಶ"- ರಾಹುಲ್ ಗಾಂಧಿ

ಕಾರ್ಯಕರ್ತರಿಗೆ ನಮನ
"ಈ ಗೆಲುವಿಗೆ ಕಾರಣ ಕಾಂಗ್ರೆಸ್ ಕಾರ್ಯಕರ್ತರು. ಅವರಿಗೆ ನನ್ನ ಕೃತಜ್ಞತೆಗಳು. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಗೊಂದಲ ಏಳಬಹುದು, ಭಿನ್ನಾಭಿಪ್ರಾಯ ಮೂಡಬಹುದು ಎಂಬುದು ಸುಳ್ಳು. ಅದೊಂದು ದೊಡ್ಡ ಸಮಸ್ಯೆಯಾಗಲಾರದು ಎಂದುಕೊಂಡಿದ್ದೇನೆ"- ರಾಹುಲ ಗಾಂಧಿ
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications