Breaking: PNB ವಂಚನೆ ಪ್ರಕರಣದ ಆರೋಪಿ ಉದ್ಯಮಿ ಮೆಹುಲ್ ಚೋಕ್ಸಿ ಬಂಧನ
ನವದೆಹಲಿ, ಮೇ 26: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಬಹು ಕೋಟಿ ವಂಚನೆ ಪ್ರಕರಣದ ಆರೋಪಿ ಹಾಗೂ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೆರಿಬಿಯನ್ ರಾಷ್ಟ್ರದ ಡೊಮಿನಿಕಾದಿಂದ ಕ್ಯೂಬಾಗೆ ಪಲಾಯನ ಮಾಡುತ್ತಿದ್ದ ಸಂದರ್ಭದಲ್ಲಿ 62 ವರ್ಷದ ಮೆಹುಲ್ ಚೋಕ್ಸಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. 2018ರಲ್ಲಿ ದೇಶವನ್ನು ತೊರೆದ ಆರೋಪಿ ಕೆರಿಬಿಯನ್ ರಾಷ್ಟ್ರಕ್ಕೆ ಪಲಾಯನ ಮಾಡಿದ್ದನು.
14,000 ಕೋಟಿ ರೂಪಾಯಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ಭಾರತದ ಕೇಂದ್ರೀಯ ತನಿಖಾ ತಂಡ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಯನ್ನು ಹಸ್ತಾಂತರಿಸುವಂತೆ ಪ್ರಯತ್ನಿಸುತ್ತಿರುವ ನಡುವೆ ಆರೋಪಿ ನಾಪತ್ತೆಯಾಗಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳೀಯ ಪೊಲೀಸರ ವಶದಲ್ಲಿ ಮೆಹುಲ್ ಚೋಕ್ಸಿ:
ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿ ಬೋಟ್ ಮೂಲಕ ಡೊಮಿನಿಕಾಗೆ ತಲುಪಿದ್ದನು. ಆತನ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿರುವ ಹಿನ್ನೆಲೆ ಆರೋಪಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದು, ಆತನನ್ನು ವಶದಲ್ಲಿ ಇರಿಸಿಕೊಂಡಿದ್ದಾರೆ.
ಮೆಹುಲ್ ಚೋಕ್ಸಿ ಪ್ರಕರಣಕ್ಕೆ ಬಲ:
ಆರೋಪಿ ಮೆಹುಲ್ ಚೋಕ್ಸಿ ಅನ್ನು ಅಂಟಿಗುವಾನ್ ಪ್ರಾಧಿಕಾರದ ಅಧಿಕಾರಿಗಳಿಗೆ ಒಪ್ಪಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಆರೋಪಿಯು ತಲೆ ಮರೆಸಿಕೊಂಡು ಪಲಾಯನ ಮಾಡುತ್ತಿರುವ ಬಗ್ಗೆ ಹಾಗೂ ಸ್ಥಳೀಯ ಪೊಲೀಸರು ಆತನನ್ನು ಬಂಧಿಸಿರುವ ಬಗ್ಗೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೂಲದಿಂದ ತಿಳಿದು ಬಂದಿದೆ. ಪಲಾಯನಕ್ಕೆ ಯತ್ನಿಸಿರುವುದು ಬಲವಾದ ಅಪರಾಧ ಆಗಲಿದ್ದು, ಆಂಟಿಗುವಾನ್ ನ್ಯಾಯಾಲಯದಲ್ಲಿ ಪ್ರಕರಣದ ತೀವ್ರತೆಯನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications