ಐಎಸ್ಐಗಾಗಿ ಬೇಹುಗಾರಿಕೆ: ಪೋಖ್ರಾನ್ ಕ್ಯಾಂಪ್ನ ತರಕಾರಿ ಸರಬರಾಜುದಾರ ಬಂಧನ
ನವದೆಹಲಿ, ಜು.15: ಪೋಖ್ರಾನ್ ಆರ್ಮಿ ಬೇಸ್ ಕ್ಯಾಂಪ್ನಲ್ಲಿ ತರಕಾರಿಗಳನ್ನು ಸರಬರಾಜು ಮಾಡುತ್ತಿದ್ದ ತರಕಾರಿ ಸರಬರಾಜುದಾರನನ್ನು ಸೈನ್ಯದ ವ್ಯಕ್ತಿಯೊಬ್ಬರಿಂದ ಹಣ ನೀಡಿ ಸೂಕ್ಷ್ಮ ದಾಖಲೆಗಳನ್ನು ಪಡೆದುಕೊಂಡು ಪಾಕಿಸ್ತಾನದ ಐಎಸ್ಐ (ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್) ಗೆ ಸೋರಿಕೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.
''34 ವರ್ಷದ ತರಕಾರಿ ಸರಬರಾಜುದಾರ ಹಬೀಬ್ ಖಾನ್ ರಾಜಸ್ಥಾನದ ಬಿಕಾನೆರ್ ಜಿಲ್ಲೆಯವನಾಗಿದ್ದಾನೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಪೋಖ್ರಾನ್ನ ದೆಹಲಿ ಪೊಲೀಸ್ ಅಪರಾಧ ಶಾಖೆ ತಂಡವು ಮಂಗಳವಾರ ಬಂಧಿಸಲಾಗಿದೆ,'' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
''ಕಳೆದ ಕೆಲವು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಪೋಖ್ರಾನ್ ಸೇನೆಯ ಮೂಲ ಶಿಬಿರಕ್ಕೆ ತರಕಾರಿಗಳನ್ನು ಪೂರೈಸುತ್ತಿದ್ದ,'' ಎಂದು ದೆಹಲಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

''ಗುಪ್ತಚರ ಘಟಕ ಹಂಚಿಕೊಂಡಿರುವ ಮಾಹಿತಿಯ ಆಧಾರದ ಮೇಲೆ, ದೆಹಲಿ ಪೊಲೀಸರ ಅಪರಾಧ ಶಾಖೆ ತಂಡ ಮಂಗಳವಾರ ಪೋಖ್ರಾನ್ನಿಂದ ಶಂಕಿತನನ್ನು ಬಂಧಿಸಿದೆ,'' ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.
ಬಂಧಿತ ಶಂಕಿತನು ಬೇಸ್ ಕ್ಯಾಂಪ್ನಲ್ಲಿದ್ದ ಸೇನಾ ಅಧಿಕಾರಿಯಿಂದ ಸೂಕ್ಷ್ಮ ದಾಖಲೆಗಳನ್ನು ಪಡೆದಕೊಂಡಿದ್ದಾನೆ. ಬಳಿಕ ಆ ದಾಖಲೆಗಳನ್ನು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಗೆ ಒದಗಿಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇನ್ನು ಓರ್ವ ಸೇನಾಧಿಕಾರಿ ಒದಗಿಸಿದ ಪ್ರತಿ ದಾಖಲೆಗೆ ಹಣವನ್ನು ತೆಗೆದುಕೊಳ್ಳುತ್ತಿದ್ದರು ಎಂದು ಕೂಡಾ ಈ ತನಿಖೆಯಿಂದ ತಿಳಿದು ಬಂದಿದೆ. ಆದರೆ, ಈ ಬಗ್ಗೆ ತನಿಖೆ ನಡೆಯುತ್ತಿದೆ. ಸತ್ಯಾಂಶವನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿರುವ ಪೊಲೀಸರು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.
(ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications