ಅತ್ಯಾಚಾರ ಪ್ರಕರಣ : ದೇವಮಾನವ ಡಾಟಿ ಮಹಾರಾಜ್ ವಿರುದ್ಧ ಚಾರ್ಜ್ ಶೀಟ್
ನವದೆಹಲಿ, ಅಕ್ಟೋಬರ್ 01: ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಡಾಟಿ ಮಹಾರಾಜ್ ವಿರುದ್ಧ ದೆಹಲಿ ಪೊಲೀಸರು, ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದೆಹಲಿ ಪೊಲೀಸರು, ಸಾಕೇತ್ ಕೋರ್ಟಿನಲ್ಲಿ ಇಂದು ಬಾಬಾ ಡಾಟಿ ಮಹಾರಾಜ್ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದರು.
ತಮ್ಮ ಆಶ್ರಮದಲ್ಲಿದ್ದ ಯುವತಿ ಮೇಲೆ ಡಾಟಿ ಮಹಾರಾಜ್ ಹಾಗೂ ಆತನ ಸಹಚರರು ಅತ್ಯಾಚರ ಎಸಗಿದ ಆರೋಪವಿದೆ. ಫತೇಪುರ್ ಬೆರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಾಟಿ ಮಹಾರಾಜ್ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್ 376, 377, 354 ಮತ್ತು 34ರ ಅಡಿಯಲ್ಲಿ ಕೇಸ್ ಹಾಕಲಾಗಿದೆ.
ಡಾಟಿ ಮಹಾರಾಜ್ ಅವರು ಎರಡು ವರ್ಷಗಳ ಹಿಂದೆ ತಮ್ಮ ಶನಿಧಾಮ್ ಆಶ್ರಮದಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು. ಭಯದಿಂದ ನಾನು ದೂರು ನೀಡಲು ಹಿಂಜರಿದಿದ್ದೆ ಎಂದು ದೂರು ನೀಡಿರುವ ಮಹಿಳೆ ಹೇಳಿದ್ದಾರೆ.

ಜೂನ್ 07ರಂದು ದೂರು ದಾಖಲಾಗಿದ್ದು, ಜೂನ್ 11ರಂದು ಎಫ್ಐಆರ್ ಹಾಕಲಾಗಿತ್ತು. ಜೂನ್ 22ರಂದು ಡಾಟಿ ಮಹಾರಾಜ್ ಅವರನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸಿದ್ದರು. ಸುಮಾರು 8 ಗಂಟೆಗಳ ಕಾಲ ವಿಚಾರಣೆ ನಡೆಸಿದರೂ ಇದು ನನ್ನ ವಿರುದ್ಧ ನಡೆದಿರುವ ಸಂಚು ಎಂದೇ ಮಹಾರಾಜ್ ಅವರು ಪ್ರತಿಪಾದಿಸಿದ್ದರು.
ದೆಹಲಿ ಹಾಗೂ ಎನ್ ಸಿಆರ್ ಭಾಗದಲ್ಲಿ ಜನಪ್ರಿಯತೆ ಗಳಿಸಿರುವ ಡಾಟಿ ಮಹಾರಾಜ್ ಅವರು ಗುರುವಾರ ಹಾಗೂ ಶನಿವಾರದಂದು ನಡೆಸುವ ಸತ್ಸಂಗ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಹಲವು ಟಿವಿ ಶೋಗಳು, ವೆಬ್ ಸೈಟ್, ಸಾಮಾಜಿಕ ಜಾಲ ತಾಣಗಳಲ್ಲಿ ಪ್ರವಚನ ನೀಡುತ್ತಾ ಬಂದಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications