ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಆ ಎರಡು ನಿಗೂಢ ಪತ್ರಗಳು
ನವದೆಹಲಿ, ಆಗಸ್ಟ್ 29: ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವ ಮಾಹಿತಿಯನ್ನು ಒಳಗೊಂಡ ಎರಡು ಪತ್ರಗಳು ಪೊಲೀಸರ ಕೈ ಸೇರಿರುವ ಆಘಾತಕಾರಿ ವಿಷಯ ಹೊರಬಿದ್ದಿದೆ.
ಈ ಪತ್ರದ ಕುರಿತು ಇದಕ್ಕೂ ಮುನ್ನವೂ ಒಮ್ಮೆ ಚರ್ಚೆಯಾಗಿತ್ತು. ಆದರೆ ವಿಚಾರವಾದಿಗಳ ಬಂಧನದ ನಂತರ ಈ ಪತ್ರಗಳು ಇದೀಗ ಮತ್ತಷ್ಟು ಮಹತ್ವ ಪಡೆದಿದೆ.
ಒಂದು ಪತ್ರ 2016 ರಲ್ಲೇ ಬರೆದಿದ್ದಾಗಿದ್ದರೆ, ಇನ್ನೊಂದು 2017 ರದ್ದು. 2016 ರ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಗೃಹಮಂತ್ರಿ ರಾಜನಾಥ್ ಸಿಂಗ್ ಅವರ ಹತ್ಯೆಯ ಕುರಿತು ಉಲ್ಲೇಖಿಸಲಾಗಿದೆ. ಅದಕ್ಕಾಗಿ ಮಾವೋವಾದಿಗಳಲು ಸಂಚು ರೂಪಿಸುತ್ತಿರುವದೂ ಈ ಪತ್ರದ ಮೂಲಕ ತಿಳಿದುಬಂದಿದೆ.

2017 ರ ಪತ್ರದಲ್ಲಿ ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲಿಯೇ ನರೇಂದ್ರ ಮೋದಿ ಅವರನ್ನೂ ಹತ್ಯೆಗೈಯ್ಯುವ ಬಗ್ಗೆ ಚರ್ಚೆ ನಡೆದಿದೆ! ಎರಡನೇ ಪತ್ರದ ಆರಂಭದಲ್ಲಿ 'ಕಾಮ್ರೆಡ್ ಪ್ರಕಾಶ್' ಎಂದು ಸಂಬೋಧನೆ ಮಾಡಿದ್ದು ಸಹ ವಿವಾದ ಸೃಷ್ಟಿಸಿತ್ತು.
'ಕಾಮ್ರೆಡ್ ಪ್ರಕಾಶ್' ಎಂದು ಸಂಬೋಧಿಸಿದ ಪತ್ರದ ಕುರಿತು ಇತ್ತೀಚೆಗಷ್ಟೇ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಮೋದಿ ಹತ್ಯೆಗೆ ಮಾವೋವಾದಿಗಳು ಸಂಚು ರೂಪಿಸಿರುವುದು ಪತ್ರದ ಮೂಲಕ ತಿಳಿದಿರುವುದು ಮತ್ತು ಮಹಾರಾಷ್ಟ್ರದಲ್ಲಿ ಕಳೆದ ಜನವರಿಯಲ್ಲಿ ನಡೆದ ಭೀಮಾ ಕೊರೆಗಾಂವ್ ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ವಿಚಾರವಾದಿಗಳನ್ನು ಬಂಧಿಸಲಾಗಿದ್ದು, ವಿಚಾರವಾದಿಗಳ ಬಂಧನವನ್ನು ದೇಶದಾದ್ಯಂತ ಹಲವರು ಖಂಡಿಸಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications