Get Updates
Get notified of breaking news, exclusive insights, and must-see stories!

ಚುನಾವಣಾ ಚಾಣಕ್ಯ ಕಾಂಗ್ರೆಸ್ ಸೇರ್ಪಡೆ?: ಗಾಂಧಿಗಳ ಜೊತೆ ಭೇಟಿ ಸೃಷ್ಟಿಸಿದ ಅನುಮಾನ

ನವದೆಹಲಿ, ಜು.14: ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಪ್ರಶಾಂತ್ ಕಿಶೋರ್ ಚರ್ಚೆ ನಡೆಸಿದ ಒಂದು ದಿನದ ನಂತರ, ಚುನಾವಣಾ ಚಾಣಕ್ಯ ಭಾರತದ ಪ್ರಮುಖ ವಿರೋಧ ಪಕ್ಷಕ್ಕೆ ಸೇರುತ್ತಾರೆಯೇ ಎಂಬ ಬಗ್ಗೆ ಊಹಾಪೋಹಗಳು ತೀವ್ರಗೊಂಡಿವೆ.

ಮೂವರೂ ಗಾಂಧಿಗಳು ಮಂಗಳವಾರ ರಾಹುಲ್ ಗಾಂಧಿ ನಿವಾಸದಲ್ಲಿ ಪ್ರಶಾಂತ್ ಕಿಶೋರ್ ಜೊತೆ ಚರ್ಚೆಯ ಭಾಗವಾಗಿದ್ದರು. ಮೂವರು ಗಾಂಧಿಗಳು ಹಾಗೂ ಪ್ರಶಾಂತ್ ಕಿಶೋರ್ ಕಾಂಗ್ರೆಸ್‌ ಪಕ್ಷವನ್ನು ಬಲಾಡ್ಯಗೊಳಿಸುವ ಹಾಗೂ ಮುಂದಿನ ಚುನಾವಣೆಗಳನ್ನು ಸಿದ್ಧಪಡಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಮೂಲಗಳ ಪ್ರಕಾರ ಇದು ಮೊದಲ ಬಾರಿಗೆ ನಡೆದದ್ದಲ್ಲ. ಈ ನಡುವೆ ಈ ಸಭೆಯು ಪಂಜಾಬ್ ಅಥವಾ ಉತ್ತರ ಪ್ರದೇಶದ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಾಗಿಲ್ಲ ಎಂದು ಮೂಲಗಳು ತಿಳಿಸಿದೆ. ಆದರೆ 2024 ರ ಚುನಾವಣಾ ಹೋರಾಟಕ್ಕೆ ಕಾಂಗ್ರೆಸ್ ಅನ್ನು ಸಿದ್ಧಪಡಿಸುವಲ್ಲಿ ಪ್ರಶಾಂತ್‌ ಕಿಶೋರ್ ಮಹತ್ವದ ಪಾತ್ರವನ್ನು ವಹಿಸುವುದರ ಬಗ್ಗೆ ನಡೆಸಲಾಗಿದೆ ಎನ್ನಲಾಗಿದೆ.

 ನಿವೃತ್ತಿ ಘೋಷಣೆ ಮಾಡಿದ್ದ ಪ್ರಶಾಂತ್‌

ನಿವೃತ್ತಿ ಘೋಷಣೆ ಮಾಡಿದ್ದ ಪ್ರಶಾಂತ್‌

ಈ ಹಿಂದೆ ಎನ್‌ಡಿಟಿವಿ ಜೊತೆಗೆ ಮಾತನಾಡಿದ್ದ ಕಿಶೋರ್, "ನಾನು ಏನು ಮಾಡುತ್ತಿದ್ದೇನೆ ಅದನ್ನು ಮುಂದುವರಿಸಲು ನಾನು ಬಯಸುವುದಿಲ್ಲ. ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಇನ್ನು ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಜಾಗವನ್ನು ತ್ಯಜಿಸಲು ಬಯಸುತ್ತೇನೆ," ಎಂದು ಹೇಳುವ ಮೂಲಕ ನಿವೃತ್ತಿ ಘೋಷಣೆ ಮಾಡಿದ್ದರು. ಇದಕ್ಕೂ ಒಂದು ದಿನ ಮುಂಚೆ ಪ್ರಶಾಂತ್‌ ಚುನಾವಣಾ ಪ್ರಚಾರ ಮಾಡಿದ್ದ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಹಾಗೂ ತಮಿಳುನಾಡಿನ ಎಂ.ಕೆ.ಸ್ಟಾಲಿನ್ ಗೆಲುವು ಆಗಿತ್ತು.

 ಚಹಾ ತೋಟಗಾರಿಕೆ ನಡೆಸಬೇಕು ಎಂದಿದ್ದ ಪ್ರಶಾಂತ್‌

ಚಹಾ ತೋಟಗಾರಿಕೆ ನಡೆಸಬೇಕು ಎಂದಿದ್ದ ಪ್ರಶಾಂತ್‌

ಇನ್ನು ಮತ್ತೆ ರಾಜಕೀಯಕ್ಕೆ ಸೇರುತ್ತಾರೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಶಾಂತ್‌ ಕಿಶೋರ್‌, "ನಾನು ವಿಫಲ ರಾಜಕಾರಣಿ. ನಾನು ಏನು ಮಾಡಬೇಕು ಎಂಬುದನ್ನು ನಾನು ಹಿಂತಿರುಗಿ ನೋಡಬೇಕು," ಎಂದು ಹೇಳಿದ್ದರು. ಹಾಗೆಯೇ ತನ್ನ ಕುಟುಂಬದೊಂದಿಗೆ ಅಸ್ಸಾಂಗೆ ಹೋಗಿ ಅಲ್ಲಿ, "ಚಹಾ ತೋಟಗಾರಿಕೆ" ಮಾಡುವ ಬಗ್ಗೆಯೂ ಪ್ರಶಾಂತ್‌ ಮಾತನಾಡಿದ್ದರು.

 ಕಾಂಗ್ರೆಸ್‌ ಹಾಗೂ ಕಿಶೋರ್‌

ಕಾಂಗ್ರೆಸ್‌ ಹಾಗೂ ಕಿಶೋರ್‌

ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇ ಕಿಶೋರ್‌ ರಾಜಕೀಯಕ್ಕೆ ಮತ್ತೆ ಕಾಲಿಡುವ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಆದರೆ ಈ ಹಿಂದೆ ಕಾಂಗ್ರೆಸ್ ಜೊತೆ ಕಿಶೋರ್‌ನ ಅನುಭವವೂ ತೃಪ್ತಿಕರವಾಗಿಲ್ಲ. 2017 ರಲ್ಲಿ ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆಗೆ ಸಮಾಜವಾದಿ ಪಕ್ಷದೊಂದಿಗೆ ಒಪ್ಪಂದ ಮಾಡಿಕೊಂಡರೂ ಮೈತ್ರಿ ವಿಫಲವಾಯಿತು, ಬಿಜೆಪಿ ಜಯಗಳಿಸಿತು. ಕಾಂಗ್ರೆಸ್ ಕಾರ್ಯತಂತ್ರವನ್ನು ರೂಪಿಸಿದ ಕಿಶೋರ್‌ ಪಂಜಾಬ್‌ನಲ್ಲಿ ಪಕ್ಷದ ಗೆಲುವಿನಿಂದ ಮಾತ್ರ ಸಮಾಧಾನವನ್ನು ಪಡೆದುಕೊಳ್ಳಬೇಕಾಯಿತು.

 ಕಾಂಗ್ರೆಸ್‌ ಬದಲಾಗಬೇಕು ಎಂದಿದ್ದ ಚುನಾವಣಾ ತಂತ್ರಜ್ಞ

ಕಾಂಗ್ರೆಸ್‌ ಬದಲಾಗಬೇಕು ಎಂದಿದ್ದ ಚುನಾವಣಾ ತಂತ್ರಜ್ಞ

ಅಂದಿನಿಂದ ಭಾರತದ ಹಳೆಯ ಪಕ್ಷ ಮತ್ತು ಅದರ ಕಾರ್ಯವೈಖರಿಯನ್ನು ಹೆಚ್ಚಾಗಿ ಟೀಕಿಸಿದ್ದಾರೆ. ಮೇ ತಿಂಗಳಲ್ಲಿ ಕಾಂಗ್ರೆಸ್ "100 ವರ್ಷಗಳ ಹಳೆಯ ರಾಜಕೀಯ ಪಕ್ಷವಾಗಿದೆ ಮತ್ತು ಅದು ತನ್ನದೇ ಆದ ಕಾರ್ಯನಿರ್ವಹಿಸುವ ವಿಧಾನಗಳನ್ನು ಹೊಂದಿದೆ. ಪ್ರಶಾಂತ್ ಕಿಶೋರ್ ಅಥವಾ ಇತರರು ಸೂಚಿಸಿದ ಮಾರ್ಗಗಳಲ್ಲಿ ಕೆಲಸ ಮಾಡಲು ಅದು ಸಿದ್ದವಿಲ್ಲ. ನನ್ನ ಕಾರ್ಯವೈಖರಿಯ ಪ್ರಕಾರ ಕಾಂಗ್ರೆಸ್‌ ಕಾರ್ಯನಿರ್ವಹಿಸಲು ಸಾಧ್ಯವಾಗಿಲ್ಲ. ಈ ಸಮಸ್ಯೆಯನ್ನು ಅರ್ಥೈಸಿ ಸಮಸ್ಯೆ ಕಂಡುಕೊಳ್ಳಬೇಕು. ಕಾಂಗ್ರೆಸ್ ಎಲ್ಲಿ ತಪ್ಪಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು," ಎಂದು ಹೇಳಿದ್ದರು.

(ಒನ್‌ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+