'ಪ್ರಿಯಾಂಕಾ ಗಾಂಧಿ ಕರೆ ತನ್ನಿ ಕಾಂಗ್ರೆಸ್ ಉಳಿಸಿ'
ನವದೆಹಲಿ, ಫೆ.10: ದೆಹಲಿಯಲ್ಲಿ ಮತ್ತೊಮ್ಮೆ ದೇಶದ ಪುರಾತನ ಪಕ್ಷ ಕಾಂಗ್ರೆಸ್ಸಿಗೆ ಮುಖಭಂಗವಾಗಿದೆ. ಆಮ್ ಆದ್ಮಿ ಪಕ್ಷದ ಆರ್ಭಟಕ್ಕೆ ತತ್ತರಿಸಿರುವ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದರೂ ಅದು ಇತಿಹಾಸ ಪುಟದಲ್ಲಿ ದಾಖಲೆಯಾಗಲಿದೆ. ಮುಂಜಾನೆಯೇ ಕಾಂಗ್ರೆಸ್ ಸೋಲಿನ ಟ್ರೆಂಡ್ ಕಂಡ ಕಾರ್ಯಕರ್ತರು ಎಐಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಎಲ್ಲರ ಬಾಯಿಂದ 'ಪ್ರಿಯಾಂಕಾ ಲಾವೊ ಕಾಂಗ್ರೆಸ್ ಬಚಾವೋ' ಎಂಬ ವಾಕ್ಯ ಒಕ್ಕೊರಲಲ್ಲಿ ಕೇಳಿ ಬರುತ್ತಿತ್ತು.
ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಒಂದು ಕಾಲದಲ್ಲಿ ಸ್ಪೀಕರ್ ಆಗಿದ್ದ ಅಜಯ್ ಮಾಕೇನ್ ಅವರು ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಅಭೂತಪೂರ್ವ ಸಾಧನೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಭ ಕೋರಿದ್ದಾರೆ. [ನೆಲಕಚ್ಚಿದ ಕಮಲ, ಎಎಪಿಗೆ ಅಭೂತಪೂರ್ವ ಜಯ]

ಕಾಂಗ್ರೆಸ್ ಗೆ ಬಂದಿರುವ ಅಧೋಗತಿಯನ್ನು ಕಂಡು ಕೋಪಗೊಂಡ ಕಾರ್ಯಕರ್ತರು ಎಐಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಹಿರಿಯ ನಾಯಕರನ್ನು ಮನೆಗೆ ಕಳಿಸುವಂತೆ ಆಗ್ರಹಿಸಿದರು.
Priyanka Lao Party bachao slogans go up, outside Congress HQ in Delhi #DelhiPollResults pic.twitter.com/XWIyiQe0mo
— ANI (@ANI_news) February 10, 2015 ಪ್ರಿಯಾಂಕಾ ಗಾಂಧಿ ವಾಧ್ರರನ್ನು ಸಕ್ರಿಯ ರಾಜಕೀಯಕ್ಕೆ ಕರೆತಂದು ಕಾಂಗ್ರೆಸ್ ಉಳಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ.
My congratulations to Mr.Arvind Kejriwal &AAP on their victory, ppl of Delhi have chosen AAP&we respect that: Congress VP Rahul Gandhi
— ANI (@ANI_news) February 10, 2015 ಜಗದೀಶ್ ಶರ್ಮ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಮತ್ತೊಮ್ಮೆ ಪ್ರಿಯಾಂಕಾ ಗಾಂಧಿ ಪರ ಪ್ರತಿಭಟನೆ ನಡೆಸಿದ್ದಾರೆ. ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದಾಗಲೂ ಇದೇ ರೀತಿ ಪ್ರತಿಭಟನೆ ನಡೆಸಲಾಗಿತ್ತು. ನಂತರ ಹರ್ಯಾಣ, ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಸೋಲು ಕಂಡಿದ್ದನ್ನು ಇಲ್ಲಿ ಸ್ಮರಿಸಬಹುದು. [ಅಹಂಕಾರವೇ ಬಿಜೆಪಿ-ಕಾಂಗ್ರೆಸ್ ಸೋಲಿಗೆ ಕಾರಣ]
ಲೋಕಸಭೆ ಚುನಾವಣೆ ವೇಳೆಯಲ್ಲಿ ಅಮೇಥಿ ಹಾಗೂ ರಾಯ್ ಬರೇಲಿಯಲ್ಲಿ ಭರ್ಜರಿ ಭಾಷಣ ಮಾಡುವ ಕೊನೆಗಳಿಗೆಯಲ್ಲಿ ಎಲ್ಲರ ಗಮನ ತನ್ನತ್ತ ಸೆಳೆಯುವಲ್ಲಿ ಪ್ರಿಯಾಂಕಾ ಗಾಂಧಿ ವಾಧ್ರಾ ಯಶಸ್ವಿಯಾಗಿದ್ದರು. ಅದರೆ, ಕಾಂಗ್ರೆಸ್ ಸೋಲು ಕಂಡಿತ್ತು. ಪಕ್ಷದ ಸಾರಥ್ಯವನ್ನು ಪ್ರಿಯಾಂಕಾ ಗಾಂಧಿ ಕೈಗೆ ಕೊಟ್ಟುಬಿಡಿ, ಪ್ರಿಯಾಂಕಾ ಸಕ್ರಿಯ ರಾಜಕೀಯಕ್ಕೆ ಬರಲು ಇದುವೇ ಸಕಾಲ ಎಂದು ಮನವಿ ಮಾಡಿದ್ದರು. (ಐಎಎನ್ಎಸ್)
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications