ಕಾಂಗ್ರೆಸ್ ಮತ್ತೊಂದು ಬೂಟಾಟಿಕೆ; ಶಶಿ ತರೂರ್ ಹಳೇ ಟ್ವೀಟ್ ಹಂಚಿಕೊಂಡ ಜಾವಡೇಕರ್
ನವದೆಹಲಿ, ಫೆಬ್ರುವರಿ 06: ಧಾನ್ಯಗಳ ಶೇಖರಣೆಯಲ್ಲಿ ಖಾಸಗಿ ವಲಯದ ಅಗತ್ಯವಿರುವ ಉಲ್ಲೇಖ ಹೊಂದಿದ್ದ, ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಹಳೆಯ ಟ್ವೀಟ್ ಒಂದನ್ನು ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, "ಕಾಂಗ್ರೆಸ್ ಈಗ ಇದಕ್ಕೆ ತದ್ವಿರುದ್ಧವಾಗಿ ಯೋಚಿಸುತ್ತಿದೆ" ಎಂದು ಟ್ವೀಟ್ ಮಾಡಿದ್ದಾರೆ. ಶಶಿ ತರೂರ್ ಅವರದ್ದು ಬರೀ ಬೂಟಾಟಿಕೆ ಎಂದು ಆರೋಪಿಸಿದ್ದಾರೆ.
2010ರ ಜನವರಿ 23ರಂದು ಶಶಿ ತರೂರ್ ಆ ಟ್ವೀಟ್ ಮಾಡಿದ್ದು, ಅದರಲ್ಲಿ, ಪ್ರತಿ ವರ್ಷ ಭಾರತ ಸೂಕ್ತ ಧಾನ್ಯ ಶೇಖರಣೆ ಹಾಗೂ ವಿತರಣೆ ವ್ಯವಸ್ಥೆಯಿಲ್ಲದೇ ಅಧಿಕ ಮಟ್ಟದಲ್ಲಿ ಗೋಧಿಯನ್ನು ವ್ಯರ್ಥ ಮಾಡುತ್ತಿದೆ. ಆಸ್ಟ್ರೇಲಿಯಾ ಬೆಳೆಯುವಷ್ಟು ಧಾನ್ಯವನ್ನು ವಾರ್ಷಿಕ ನಾವು ವ್ಯರ್ಥ ಮಾಡುತ್ತಿದ್ದೇವೆ. ಧಾನ್ಯ ಸಂಗ್ರಹಣೆ ವಿಷಯದಲ್ಲಿ ಖಾಸಗಿ ವಲಯದ ನಿಜವಾದ ಅಗತ್ಯವಿದೆ ಎಂದು ಬರೆದುಕೊಂಡಿದ್ದರು.
ಈ ಟ್ವೀಟ್ ಸ್ಕ್ರೀನ್ ಶಾಟ್ ತೆಗೆದು ಹಂಚಿಕೊಂಡಿರುವ ಪ್ರಕಾಶ್ ಜಾವಡೇಕರ್, "ಕಾಂಗ್ರೆಸ್ ಬೂಟಾಟಿಕೆಯ ಮತ್ತೊಂದು ಮುಖ ಇದು. 2010ರ ಈ ಟ್ವೀಟ್ ನೋಡಿ. ಈಗ ಕಾಂಗ್ರೆಸ್ ಎಷ್ಟು ವಿರೋಧವಾಗಿ ಮಾತನಾಡುತ್ತಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಶಶಿ ತರೂರ್, "ನನ್ನ ಹಳೆ ಟ್ವೀಟ್ ನಲ್ಲಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ತೆಗೆದುಹಾಕಬೇಕು ಎಂದು ನಾನೇನಾದರೂ ಉಲ್ಲೇಖಿಸಿದ್ದೇನೆಯೇ? ರೈತರ ಬೇಡಿಕೆ ಏನು ಎಂಬುದಾದರು ನಿಮಗೆ ತಿಳಿದಿದೆಯೇ? ಮಾಹಿತಿ ಹಾಗೂ ಪ್ರಸಾರ ಸಚಿವರೇ ನೀವು ಈ ರೀತಿ ತಪ್ಪು ಮಾಹಿತಿಯನ್ನು ಹರಡುವುದನ್ನು ನಿಲ್ಲಿಸಿದರೆ ಒಳ್ಳೆಯದು" ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಮೂರು ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಈಚೆಗೆ ಗಣರಾಜ್ಯೋತ್ಸವ ದಿನದಂದು ರೈತರ ಮೆರವಣಿಗೆ ಸಂದರ್ಭ ನಡೆದ ಹಿಂಸಾಚಾರದ ವೇಳೆ ಯುವಕನೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡುವ ಟ್ವೀಟ್ ಮಾಡಿದ್ದಕ್ಕಾಗಿ ಸಂಸದ ಶಶಿ ತರೂರ್ ಮೇಲೆ ಪ್ರಕರಣ ದಾಖಲಿಸಲಾಗಿತ್ತು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications