ಕಾಂಗ್ರೆಸ್ಸಿಗರು ಸಂಸತ್ನಲ್ಲಿ ಚರ್ಚಿಸುವ ಬದಲು ಚಿಕನ್ ತಿನ್ನಲು ಬಂದಿದ್ದಾರಾ?: ಜೋಶಿ ಕಿಡಿ
ನವದೆಹಲಿ ಜುಲೈ 29: ಸಂಸತ್ತಿಗೆ ಕಾಂಗ್ರೆಸ್ ನಾಯಿಕರು ಚರ್ಚಿಸಲು ಬಂದಿದ್ದಾರಾ? ಅಥವಾ ಚಿಕನ್ ತಿನ್ನಲು ಬಂದಿದ್ದಾರಾ? ಎಂದು ಕಲಾಪದ ವೇಳೆ ಗಲಾಟೆ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ.
ಶುಕ್ರವಾರ ಸುದ್ದಿಗಾರರ ಜತೆಗೆ ಕಾಂಗ್ರೆಸ್ ನಾಯಕ ಕುರಿತು ಮಾತನಾಡಿದ ಅವರು, ದೆಹಲಿಯ ಸಂಸತ್ತಿನ ಅಧಿವೇಶನವನ್ನು ಸುಗಮವಾಗಿ ನಡೆಸಲು ಬಿಡುತ್ತಿಲ್ಲ. ಕಲಾಪದಲ್ಲಿ ಯಾವ ಚರ್ಚೆಗಳಿಗೆ ಅವಕಾಶ ನೀಡದೇ ಗದ್ದಲ ಎಬ್ಬಿಸಿ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸುತ್ತಿರುವ ಕಾಂಗ್ರೆಸ್ ಸಂಸದರ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ಹೊರಹಾಕಿದರು.
ಅಧಿವೇಶನದಲ್ಲಿ ಅಭಿವೃದ್ಧಿ ಮತ್ತು ಸಮಸ್ಯೆಗಳು ಮೇಲೆ ಚರ್ಚೆಗೆ ಅವಕಾಶ ಕೊಡದ ಕಾಂಗ್ರೆಸ್ ಸಂಸದರು ಸಂಸತ್ತಿಗೆ ಬಂದಿರುವುದು ಏಕೆ? ಎಂಬುದನ್ನು ದೇಶದ ಜನರಿಗೆ ತಿಳಿಸಬೇಕು. ಇವರು ಸಂಸತ್ತಿನಲ್ಲಿ ಚರ್ಚೆ ನಡೆಸಲು ಬಂದಿದ್ದಾರೋ ಅಥವಾ ಗಾಂಧಿ ಪ್ರತಿಮೆ ಕೆಳಗೆ ಕುಳಿತು ಚಿಕನ್ ತಿನ್ನಲು ಬಂದಿದ್ದಾರೋ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕರು ಸಂಸತ್ತಿಗೆ ಬಂದ ಉದ್ದೇಶ ಏನೆಂಬುದನ್ನು ದೇಶದ ಜನರಿಗೆ ತಿಳಿಸಬೇಕು ಎಂದು ಅವರು ಪ್ರತಿಭಟನಾ ನಿರತ ಕೈ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
ಅಹಿಂಸಾವಾದಿ ಗಾಂಧಿ ಪ್ರತಿಮೆ ಬಳಿ ಮಾಂಸ ಸೇವನೆ
ಗಾಂಧಿಜಿಯವರು ಅಹಿಂಸೆಯಲ್ಲಿ ಅಚಲ ನಂಬಿಕೆಯುಳ್ಳ ಮಹಾತ್ಮರು. ಮಹಾತ್ಮ ಗಾಂಧೀಜಿಯವರ ಪ್ರತಿಮೆ ಕೆಳಗೆ ಕುಳಿತು ಕಾಂಗ್ರೆಸ್ ಸಂಸದರು ಕೋಳಿ ಮಾಂಸ ತಿನ್ನುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ದೇಶದ ಮಹಾನ್ ವ್ಯಕ್ತಿಗಳನ್ನು ಅವಮಾನಿಸುವುದು ಕಾಂಗ್ರೆಸ್ ಗೆ ಅಭ್ಯಾಸವಾಗಿದೆ ಎಂದು ಪ್ರಲ್ಹಾದ್ ಜೋಶಿ ಕೈ ಸಂಸದರ ವಿರುದ್ಧ ಹರಿಹಾಯ್ದರು.

ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆಯೂ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಕಾಂಗ್ರೆಸ್ನ ಅಧಿರ್ ರಂಜನ್ ಚೌಧರಿ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರಾಷ್ಟ್ರಪತಿ ಬದಲು 'ರಾಷ್ಟ್ರಪತ್ನಿ' ಎಂದು ಅಧಿರ್ ರಂಜನ್ ಚೌಧರಿ ಅವರು ಹೇಳಿರುವುದು ರಾಷ್ಟ್ರಕ್ಕೆ ಮಾಡಿದ ಅವಮಾನ ಎಂದು ದೂರಿದರು.
ಕಾಂಗ್ರೆಸ್ ಈ ಮೂಲಕ ಆದಿವಾಸಿಗಳಿಗೆ ಅವಮಾನ ಮಾಡುತ್ತಿದೆ. ಈ ಬಗ್ಗೆ ಕ್ಷಮೆಯಾಚಿಸುವಂತೆ ಅಧೀರ್ ಅವರಿಗೆ ಕಾಂಗ್ರೆಸ್ ಹೇಳುವ ಬದಲು ಅವರ ಹೇಳಿಕೆಯನ್ನು ಕೈ ನಾಯಕರು ಬೆಂಬಲಿಸುತ್ತಿರುವಂತೆ ಕಾಣುತ್ತದೆ. ಸೋನಿಯಾ ಗಾಂಧಿ ಅವರೇ ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಪ್ರಲ್ಹಾದ್ ಜೋಶಿ ಈ ವೇಳೆ ಆಗ್ರಹಿಸಿದರು.
Recommended Video
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications