5 ಟ್ರಿಲಿಯನ್ ಆರ್ಥಿಕತೆ ಸ್ವರ್ಗದಿಂದ ಉತ್ಪತ್ತಿಯಾಗೊಲ್ಲ: ಪ್ರಣಬ್ ಮುಖರ್ಜಿ
ನವದೆಹಲಿ, ಜುಲೈ 19: ಲೋಕಸಭೆ ಚುನಾವಣೆಯ ನಂತರ ಪರೋಕ್ಷವಾಗಿ ಎನ್ ಡಿ ಎ ಸರ್ಕಾರವನ್ನು ಹೊಗಳಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇದೀಗ ಸರ್ಕಾರವನ್ನು ಟೀಕಿಸುವಂಥ ಹೇಳಿಕೆ ನೀಡಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಲ್ಲೇಖಿಸಿದ 5 ಟ್ರಿಲಿಯನ್ ಆರ್ಥಿಕತೆಯ ಬಗ್ಗೆ ಮಾತನಾಡಿದ ಪ್ರಣಬ್ ದಾ, "ಐದು ಟ್ರಿಲಿಯನ್ ಆರ್ಥಿಕತೆ ಸ್ವರ್ಗದಿಂದ ಉತ್ಪತ್ತಿಯಾಗೊಲ್ಲ. ಹಿಂದಿನ ಸರ್ಕಾರಗಳು ಅದಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿವೆ ಎಂಬುದನ್ನು ಮರೆಯಬಾರದು" ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ ಹೇಳಿದರು.
"ಬಜೆಟ್ ಮಂಡಿಸುವ ಸಂದರ್ಭದಲ್ಲಿ ವಿತ್ತ ಸಚಿವರು 2024 ರ ಹೊತ್ತಿಗೆ ಭಾರತವು 5 ಟ್ರಿಲಿಯನ್ ಆರ್ಥಿಕತೆಯನ್ನು ಹೊಂದಿದ ದೇಶವಾಗಲಿದೆ ಎಂದಿದ್ದಾರೆ. ಆದರೆ ಅದು ಸ್ವರ್ಗದಿಂದ ಉತ್ಪತ್ತಿಯಾಗೋಲ್ಲ. ಅದಕ್ಕೆ ಒಮದು ಭದ್ರ ಬುನಾದಿ ಬೇಕು. ಅದನ್ನು ಬ್ರಿಟಿಷರು ಹಾಕಿಕೊಟ್ಟಿಲ್ಲ. ಆದರೆ ಸ್ವಾತಂತ್ರ್ಯಾನಂತರ ಬಂದ ಸರ್ಕಾರಗಳು ಅದನ್ನು ಹಾಕಿಕೊಟ್ಟಿವೆ" ಎಂದು ಅವರು ಹೇಳಿದರು.

"ಕಳೆದ 55 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಸರ್ಕಾರವು ದೇಶವನ್ನು ನಿರ್ಲಕ್ಷ್ಯಿಸಿತ್ತು ಎಂದು ಆರೋಪಿಸುವವರಿಗೆ ಗೊತ್ತಿರಲಿ, ಇಂದು ಭಾರತ ಐದು ಟ್ರಿಲಿಯನ್ ಆರ್ಥಿಕತೆಯ ಬಗ್ಗೆ ಮಾತನಾಡುತ್ತಿದ್ದರೆ ಅದಕ್ಕೆ ಕಾಂಗ್ರೆಸ್ ಸರ್ಕಾರದ ಕೊಡುಗೆ ಸಾಕಷ್ಟಿದೆ. ಒಂದು ಯೋಜನಾಬದ್ಧವಾಗಿ ಆರ್ಥಿಕತೆಯನ್ನು ಕಟ್ಟುವಲ್ಲಿ ನಮ್ಮ ಹಿರಿಯ ನಾಯಕರು ನಂಬಿಕೆ ಇರಿಸಿದ್ದರು. ಆದರೆ ಇಂದು ಯೋಜನಾ ಆಯೋಗವನ್ನೇ ಮುಚ್ಚಲಾಗಿದೆ" ಎಂದು ಪ್ರಣಬ್ ಮುಖರ್ಜಿ ಹೇಳಿದರು.
"ಕಾಂಗ್ರೆಸ್ ಸರ್ಕಾರ ನಡೆಸುವ ಮೊದಲು ಶೂನ್ಯದಲ್ಲಿದ್ದ ಆರ್ಥಿಕತೆಯನ್ನು 1.8 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡಿದ ಕೀರ್ತಿ ಪಕ್ಷದ್ದು. ನಮ್ಮ ಮಾಜಿ ಪ್ರಧಾನಿ ಜವಹರಲಾಲ್ ನೆಹರು, ಮನಮೋಹನ್ ಸಿಂಗ್ ಮತ್ತು ನರಸಿಂಹ ರಾವ್ ಅವರು ಈ ದೇಶದ ಆರ್ಥಿಕತೆಗೆ ಗಟ್ಟಿ ಅಡಿಪಾಯ ಹಾಕಿಕೊಟ್ಟರು" ಎಂದು ಮುಖರ್ಜಿ ನೆನಪಿಸಿಕೊಂಡರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications