ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ: ಮತ್ತಷ್ಟು ಪರಿಶೀಲನೆಗೆ ಮುಂದಾದ ಸುಪ್ರೀಂಕೋರ್ಟ್
ನವದೆಹಲಿ, ಆಗಸ್ಟ್ 17: ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಲ್ಲಿ ವಕೀಲ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದು, ಆಗಸ್ಟ್ 20ರಂದು ಅವರ ಶಿಕ್ಷೆ ಪ್ರಕಟವಾಗಲಿದೆ.
ಸುಪ್ರೀಂಕೋರ್ಟ್ನ ಹಿಂದಿನ ನ್ಯಾಯಮೂರ್ತಿಗಳು ಭ್ರಷ್ಟರಾಗಿದ್ದರು ಎಂದು ಹೇಳಿಕೆ ನೀಡಿದ್ದ ಪ್ರಶಾಂತ್ ಭೂಷಣ್, ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರು ಐಷಾರಾಮಿ ಬೈಕ್ನಲ್ಲಿ ಕುಳಿತ ಫೋಟೊವೊಂದಕ್ಕೆ ವ್ಯಂಗ್ಯದ ಟ್ವೀಟ್ ಮಾಡಿದ್ದರು. ಇದಕ್ಕೆ ಅವರು ವಿಷಾದ ವ್ಯಕ್ತಪಡಿಸಿದ್ದರೂ ಸುಪ್ರೀಂಕೋರ್ಟ್ ಅನ್ನು ಪರಿಗಣಿಸಿಲ್ಲ.
ಈ ನಡುವೆ ಸುಪ್ರೀಂಕೋರ್ಟ್, ನ್ಯಾಯಾಂಗ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಾಗ ಅದನ್ನು ಯಾವ ಸನ್ನಿವೇಶದಲ್ಲಿ ಮಾಡಲಾಗಿದೆ ಎನ್ನುವುದು ಸೇರಿದಂತೆ ವಿಶಾಲ ಪ್ರಶ್ನೆಗಳನ್ನು ಪರಿಶೀಲನೆ ಮಾಡುವುದಾಗಿ ತಿಳಿಸಿದೆ.

ಹಾಲಿ ಮತ್ತು ನಿವೃತ್ತ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಉದ್ಭವಿಸಿದಾಗ ಯಾವ ರೀತಿಯ ಪ್ರಕ್ರಿಯೆ ನಡೆಸಬೇಕಾಗುತ್ತದೆ ಎಂಬ ಬಗ್ಗೆಯೂ ಪರಿಶೀಲಿಸುವುದಾಗಿ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ ಹೇಳಿದೆ.
ನ್ಯಾಯಾಂಗದ ಮೇಲಿನ ಭ್ರಷ್ಟಾಚಾರಗಳ ಆರೋಪದ ಕುರಿತಾದ ಪ್ರಶ್ನೆಗಳ ಬಗ್ಗೆ ವಕೀಲರು ಯಾವ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಎಂಬುದನ್ನು ಮುಂದಿನ ವಾರ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ.
2009ರಲ್ಲಿ ತೆಹೆಲ್ಕಾ ಪತ್ರಿಕೆಗೆ ನೀಡಿದ್ದ ಸಂದರ್ಶನದಲ್ಲಿ ಪ್ರಶಾಂತ್ ಭೂಷಣ್, ಸುಪ್ರೀಂಕೋರ್ಟ್ನ 16 ನ್ಯಾಯಮೂರ್ತಿಗಳಲ್ಲಿ ಅರ್ಧದಷ್ಟು ಮಂದಿ ಭ್ರಷ್ಟರಾಗಿದ್ದರು ಎಂದು ಹೇಳಿದ್ದರು. ಇದರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು.
'ನಾವು ಈ ಪ್ರಕರಣವನ್ನು ಇಲ್ಲಿಗೇ ಮುಗಿಸಲು ಬಯಸಿದ್ದೆವು. ಆದರೆ ಮೂಲ ಪ್ರಶ್ನೆಯೆಂದರೆ, 1) ನೀವು ಮಾಧ್ಯಮದೊಂದಿಗೆ ಮಾತನಾಡಲು ಬಯಸಿದ್ದರೆ, 2) ನಿಮಗೆ ಯಾವುದೇ ನ್ಯಾಯಾಧೀಶರ ಬಗ್ಗೆ ಸಮಸ್ಯೆ ಇದ್ದರೆ, ಯಾವ ಪ್ರಕ್ರಿಯೆ ನಡೆಸಬೇಕು?, 3) ಯಾವ ಸಂದರ್ಭಗಳಲ್ಲಿ ಇಂತಹ ಆರೋಪಗಳನ್ನು ಮಾಡಬಹುದು ಎನ್ನುವುದೂ ಕೂಡ ಪ್ರಶ್ನೆಯಾಗುತ್ತದೆ' ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಹೇಳಿದ್ದಾರೆ.
ಭ್ರಷ್ಟಾಚಾರ ಎಂಬ ಪದ ಬಳಕೆಯು ನ್ಯಾಯಾಂಗ ನಿಂದನೆಗೆ ಗುರಿಯಾಗುವಷ್ಟು ಗಂಭೀರ ಅಪರಾಧವಾಗುವುದಿಲ್ಲ ಎಂದು ಹಿರಿಯ ವಕೀಲ ರಾಜೀವ್ ಧವನ್ ಹೇಳಿದ್ದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications