ಅಣ್ಣಾ ಹೋರಾಟ ಯುಪಿಎ ಉರುಳಿಸಲು ಬಿಜೆಪಿಗೆ ದಾಳವಾಯ್ತು: ಪ್ರಶಾಂತ್ ಭೂಷಣ್
ನವದೆಹಲಿ, ಸೆ. 15: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರ ಪ್ರಬಲ ಜನ ಲೋಕಪಾಲ ಮಸೂದೆ ಕರಡು ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ವಕೀಲರಾದ ಪ್ರಶಾಂತ್ ಭೂಷಣ್ ಅವರು ಭ್ರಷ್ಟಾಚಾರ ವಿರುದ್ಧ ಹೋರಾಟ(ಐಎಸಿ)ದ ಹಿಂದೆ ಬಿಜೆಪಿ ಹಾಗೂ ಆರೆಸ್ಸೆಸ್ ನೆರಳಿತ್ತು, ಈ ಹೋರಾಟವು ಅಂದಿನ ಯುಪಿಎ ಸರ್ಕಾರ ಬೀಳಿಸಲು ದಾಳವಾಗಿ ಬಳಕೆಯಾಗಿತ್ತು ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.
ಪರಿಸರ ಯೋಜನೆಗಳಲ್ಲಿ ಅವ್ಯವಹಾರ, ಭ್ರಷ್ಟಾಚಾರಿಗಳ ವಿರುದ್ಧ ಅನೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ದಾಖಲಿಸಿದ ಪ್ರಶಾಂತ್ ಅವರು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ಐಎಸಿ, ಎಎಪಿ ಬಗ್ಗೆ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಐಎಸಿ ಮೂಲಕ ಅರವಿಂದ್ ಕೇಜ್ರಿವಾಲ್ ಅವರು ರಾಜಕೀಯವಾಗಿ ಬೆಳೆದು ಇಂದು ದೆಹಲಿ ಮುಖ್ಯಮಂತ್ರಿಯಾಗಿದ್ದಾರೆ. ನನಗೆ ಎರಡು ವಿಷಯದ ಬಗ್ಗೆ ವಿಷಾದವಿದೆ. ಬಿಜೆಪಿ -ಆರೆಸ್ಸೆಸ್ ತಮ್ಮ ರಾಜಕೀಯ ಉದ್ದೇಶಕ್ಕಾಗಿ ಅಣ್ಣಾ ಅವರ ಈ ಅಭಿಯಾನಕ್ಕೆ ಹೆಚ್ಚು ಬೆಂಬಲ ನೀಡಿದ್ದು ತಿಳಿಯದೇ ಹೋಯಿತು. ಅಣ್ಣಾ ಹೋರಾಟ ಯುಪಿಎ ಉರುಳಿಸಲು ಬಿಜೆಪಿಗೆ ದಾಳವಾಯಿತು ಎಂದು ಪ್ರಶಾಂತ್ ಭೂಷಣ್ ಹೇಳಿದರು.

ಈ ಬಗ್ಗೆ ಅಣ್ಣಾ ಹಜಾರೆ ಅವರಿಗೂ ಗೊತ್ತಾಗಿರಲಿಲ್ಲ ಅನ್ನಿಸುತ್ತದೆ. ನನಗೆ ಈಗಂತೂ ಈ ಬಗ್ಗೆ ಸಂಶಯವೇ ಇಲ್ಲ, ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಎನ್ಡಿಎ ಅಧಿಕಾರಕ್ಕೆ ತರಲು ಆರೆಸ್ಸೆಸ್- ಬಿಜೆಪಿ ಈ ಅಭಿಯಾನವನ್ನು ಬಳಸಿಕೊಂಡವು. ಆದರೆ, ಈ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ಗೊತ್ತಾಗಿತ್ತು. ಅರವಿಂದ್ ರಾಜಕೀಯ ನಡೆಗಳನ್ನು ಆರಂಭದಲ್ಲೇ ಅರ್ಥ ಮಾಡಿಕೊಳ್ಳುವಲ್ಲಿ ನಾನು ವಿಫಲನಾಗಿದ್ದು ನನ್ನ ಎರಡನೇ ವಿಷಾದ ಎಂದು ರಾಜದೀಪ್ ಸರ್ದೇಸಾಯಿ ಜೊತೆ ಮಾತನಾಡುತ್ತಾ ಹೇಳಿದರು.
2015ರಲ್ಲಿ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ರನ್ನು ಆಮ್ ಆದ್ಮಿ ಪಕ್ಷದಿಂದ ಹೊರ ಹಾಕಲಾಯಿತು. ಯೋಗೇಂದ್ರ ಅವರು ಸ್ವರಾಜ್ ಇಂಡಿಯಾ ಎಂಬ ಹೊಸ ರಾಜಕೀಯ ಪಕ್ಷ ಕಟ್ಟಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications