ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾಂಕ್ ನೇಮಕಾತಿ:ಕನ್ನಡಿಗರ ಪರ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಮನವಿ

|
Google Oneindia Kannada News

ನವದೆಹಲಿ, ಜೂನ್ 20: ಸ್ಥಳೀಯ ಮತ್ತು ಗ್ರಾಮೀಣ ಬ್ಯಾಂಕ್‌ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಕುರಿತು 2014 ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಮತ್ತೆ ಹೊರಡಿಸಬೇಕು ಎಂದು ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಮತ್ತು ಶೋಭಾ ಕರಂದ್ಲಾಜೆ ಅವರು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರಿಗೆ ಇಂದು ಮನವಿ ಮಾಡಿದರು.

ಐಬಿಪಿಎಸ್‌ ಆರ್‌ಆರ್‌ಬಿ (ಸ್ಥಳೀಯ ಮತ್ತು ಗ್ರಾಮೀಣ ಬ್ಯಾಂಕ್‌ ನೇಮಕಾತಿ) ಅರ್ಜಿ ಸಲ್ಲಿಸುವವರು 10ನೇ ತರಗತಿ ವರೆಗೆ ಮಾತೃಭಾಷೆಯಲ್ಲಿ ಅಭ್ಯಾಸ ಮಾಡಿರಬೇಕು ಎಂದು 2014 ರಲ್ಲಿ ಹೊರಡಿಸಿದ್ದ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು, ಆದರೆ ಆ ನಂತರ ಅದನ್ನು ಬದಲಾವಣೆ ಮಾಡಲಾಗಿತ್ತು. ಹಾಗಾಗಿ ಸಂಸದರು ಈ ಮನವಿ ಸಲ್ಲಿಸಿದ್ದಾರೆ.

ನವದೆಹಲಿ: ಮುಂಗಾರು ಅಧಿವೇಶನದ ಮೊದಲ ದಿನ ಕನ್ನಡಿಗರ ಮಿಂಚು! ನವದೆಹಲಿ: ಮುಂಗಾರು ಅಧಿವೇಶನದ ಮೊದಲ ದಿನ ಕನ್ನಡಿಗರ ಮಿಂಚು!

ಈ ಬಗ್ಗೆ ಪ್ರತಾಪ್ ಸಿಂಹ ಅವರು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಚಿತ್ರದಲ್ಲಿ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ಇದ್ದಾರೆ. ಅದೇ ಚಿತ್ರದಲ್ಲಿ ಬಿ.ವೈ.ರಾಘವೇಂದ್ರ, ಜಿ.ಎಂ.ಸಿದ್ದೇಶ್ವರ ಅವರು ಸಹ ಪಕ್ಕದಲ್ಲಿ ಕುಳಿತಿದ್ದಾರೆ.

Prathap Simha, Tejasvi Surya, Shobha Karandlaje met Nirmala Sitharam

ಪ್ರತಾಪ್ ಸಿಂಹ ಅವರು ಈ ಹಿಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೂ ಇದೇ ಮನವಿಯನ್ನು ಸಲ್ಲಿಸಿದ್ದರು. ಆದರೆ ಆಗ ಯಾವುದೇ ಪ್ರತಿಕ್ರಿಯೆ ದೊರೆತಿರಲಿಲ್ಲ. ಈಗಲೂ ಸಹ ಪ್ರತಾಪ್ ಸಿಂಹ ಅವರು ಮನವಿ ನೀಡಿದ್ದರೂ ಸಹ ಈಗಾಗಲೇ ಹಳೆಯ ನಿಯಮದಂತೆಯೇ ಅಧಿಸೂಚನೆಯನ್ನು ಹೊರಡಿಸಲಾಗಿದೆ.

English summary
Prathap Simha and Tejaswi Surya appraised abt IBPS problem. We requested her to reinstate the 2014 notification which made knowledge of native language study till 10th grade mandatory to apply for RRB examinations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X