ವಿಶ್ವ ಚಾಂಪಿಯನ್ ಕನಸು ಕಾಣುತ್ತಿರುವ ಬಾಲಕನಿಗೆ ರಾಷ್ಟ್ರಪತಿ ನೆರವು
ದೆಹಲಿ, ಜುಲೈ 31: ಜಗತ್ತಿನ ಖ್ಯಾತ ಸೈಕಲಿಸ್ಟ್ ಆಗಬೇಕೆಂಬ ಕನಸು ಕಾಣುತ್ತಿರುವ ರಿಯಾಜ್ಗೆ ಈದ್ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೈಕಲ್ ಉಡುಗೊರೆಯಾಗಿ ನೀಡಿದ್ದಾರೆ.
ಮೂಲತಃ ಬಿಹಾರದ ಮಧುಬನಿ ಜಿಲ್ಲೆಗೆ ಸೇರಿದ ರಿಯಾಜ್ ಪ್ರಸ್ತುತ ದೆಹಲಿಯ ಆನಂದ್ ವಿಹಾರದಲ್ಲಿ ಸರ್ವೋದಯ ಬಾಲ ವಿದ್ಯಾಲಯದಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಸೈಕಲಿಸ್ಟ್ ಆಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ.
ರಿಯಾಜ್ ಪೋಷಕರು, ಇಬ್ಬರು ಸಹೋದರಿಯರು ಮತ್ತು ಸಹೋದರರನ್ನು ಒಳಗೊಂಡ ಕುಟುಂಬ ಮಧುಬಾನಿಯಲ್ಲಿ ವಾಸವಾಗಿದ್ದರೆ, ರಿಯಾಜ್ ಘಜಿಯಾಬಾದ್ ಮಹಾರಾಜಪುರದಲ್ಲಿ ಬಾಡಿಗೆ ವಸತಿಗೃಹದಲ್ಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.

2017ರಲ್ಲಿ ದೆಹಲಿ ರಾಜ್ಯ ಸೈಕ್ಲಿಂಗ್ ಚಾಂಪಿಯನ್ಶಿಪ್ನಲ್ಲಿ ರಿಯಾಜ್ ಕಂಚಿನ ಪದಕ ಗೆದಿದ್ದರು. ಗುವಾಹಟಿಯಲ್ಲಿ ನಡೆದ ಶಾಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಹಾಗೂ ರಾಷ್ಟ್ರಮಟ್ಟದಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು ಎಂದು ಗಾಜಿಯಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.
ದುರದೃಷ್ಟವಶಾತ್ ಅಂದ್ರೆ ರಿಯಾಜ್ ತನ್ನ ಅಭ್ಯಾಸಕ್ಕಾಗಿ ಬಾಡಿಗೆ ಸೈಕಲ್ ಮೇಲೆ ಅವಲಂಬಿತವಾಗಿದ್ದರು. ಈ ವಿಚಾರವನ್ನು ಮಾಧ್ಯಮಗಳ ಮೂಲಕ ತಿಳಿದುಕೊಂಡ ರಾಷ್ಟ್ರಪತಿ, ರಿಯಾಜ್ ಕಸನು ನನಸು ಮಾಡಿಕೊಳ್ಳಲು ಸಹಾಯವಾಗಲಿ ಎಂಬ ಕಾರಣಕ್ಕೆ ಸೈಕಲ್ ಉಡುಗೊರೆಯಾಗಿ ನೀಡಿದ್ದಾರೆ.

ಈ ವಿಚಾರನ್ನು ರಾಷ್ಟ್ರಪತಿ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, 'ರಾಷ್ಟ್ರ ನಿರ್ಮಾಣಕ್ಕಾಗಿ ಯುವಕರಿಗೆ ಪ್ರೇರೇಪಿಸುವ ಉದ್ದೇಶ. ಸೈಕ್ಲಿಸ್ಟ್ ಆಗಿ ಉತ್ತಮ ಸಾಧನೆ ಮಾಡುವ ಕನಸು ಕಾಣುತ್ತಿರುವ ಶಾಲಾ ಬಾಲಕ ರಿಯಾಜ್ಗೆ ರೇಸಿಂಗ್ ಬೈಸಿಕಲ್ ಉಡುಗೊರೆಯಾಗಿ ನೀಡಿದರು. ಆತನೊಬ್ಬ ಅಂತಾರಾಷ್ಟ್ರೀಯ ಮಟ್ಟದ ಚಾಂಪಿಯನ್ ಆಗಲಿ ಎಂದು ಶುಭಹಾರೈಸಿದರು' ಎಂದು ತಿಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications