ಗರಿಷ್ಠ ಮತದಾನದ ದಾಖಲೆ ಬರೆದ ರಾಷ್ಟ್ರಪತಿ ಚುನಾವಣೆ
ನವದೆಹಲಿ, ಜುಲೈ 18: ಭಾರತದ ರಾಷ್ಟ್ರಪತಿ ಹುದ್ದೆಗಾಗಿ ನಿನ್ನೆ(ಜು.17) ನಡೆದ ಚುನಾವಣೆ ಇದುವರೆಗಿನ ರಾಷ್ಟ್ರಪತಿ ಚುನಾವಣೆಗಳಲ್ಲೇ ಅತ್ಯಂತ ಹೆಚ್ಚಿನ ಮತದಾನದ ದಾಖಲೆ ಬರೆದಿದೆ.
ರಾಷ್ಟ್ರಪತಿ ಹುದ್ದೆಗೆ ಸುಮಾರು ಶೇ.99 ರಷ್ಟು ಮತದಾನವಾಗಿದ್ದು, ಇದು ಇದುವರೆಗಿನ ಗರಿಷ್ಠ ಮತದಾನವೆನ್ನಿಸುತ್ತದೆ ಎಂದು ಲೋಕಸಭಾ ಪ್ರಧಾನ ಕಾರ್ಯದರ್ಶಿ ಅನೂಪ್ ಮಿಶ್ರಾ ಹೇಳಿದ್ದಾರೆ.

ಅರುಣಾಚಲ ಪ್ರದೇಶ, ಛತ್ತೀಸ್ ಗಢ, ಅಸ್ಸಾಂ, ಗುಜರಾತ್, ಬಿಹಾರ್, ಹರ್ಯಾಣ, ಹಿಮಾಚಲ ಪ್ರದೇಶ್, ಜಾರ್ಖಂಡ್, ನಾಗಾಲ್ಯಾಂಡ್, ಉತ್ತರಾಖಂಡ್, ಪುದುಚೇರಿಗಳಲ್ಲಿ ಶೇ.100 ರಷ್ಟು ಮತದಾನವಾಗಿದೆ.
ಪಾರ್ಲಿಮೆಂಟ್ ಹೌಸ್ ನಲ್ಲಿ ಶೇ.99 ರಷ್ಟು ಮತದಾನವಾಗಿದ್ದು, ಇಲ್ಲಿ ಮೊದಲ ಮತ ಹಾಕಿದ್ದು ಪ್ರಧಾನಿ ನರೇಂದ್ರ ಮೋದಿ!
ಕೋಲ್ಕತ್ತಾದಲ್ಲಿ ಮತಚಲಾಯಿಸಿದ ತೃಣಮೂಲ ಕಾಂಗ್ರೆಸ್ ಸಂಸದರು, ತಾವೆಲ್ಲರೂ ಮೀರಾ ಕುಮಾರ್ ಅವರಿಗೆ ಮತದಾನ ಮಾಡುವ ಮೂಲಕ ಕೇಂದ್ರ ಸರ್ಕಾರದ ಬಗೆಗಿನ ನಮ್ಮ ಪ್ರತಿಭಟನೆಯನ್ನು ಈ ರೀತಿ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ.
ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ತಾವು ಮೀರಾ ಕುಮಾರ್ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದರಲ್ಲದೆ, ಯಾರಿಗೆ ಬೆಂಬಲ ನೀಡಬೇಕು ಎಂಬುದು ನಮ್ಮ ಪಕ್ಷದ ಸದಸ್ಯರ ವಿವೇಚನೆಗೆ ಬಿಟ್ಟಿದ್ದು ಎಂದಿದ್ದರು.
ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್, ರಾಷ್ಟ್ರಪತಿ ಚುನಾವಣೆಯನ್ನು ಎರಡು ಸಿದ್ಧಾಂತಗಳ ನಡುವಿನ ಸ್ಪರ್ಧೆ ಎಂದು ವ್ಯಾಖ್ಯಾನಿಸಿದ್ದಾರೆ.
ಜುಲೈ 20, ಗುರುವಾರದಂದು ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ದೇಶದ ಪ್ರಥಮ ಪ್ರಜೆ ಯಾರಾಗಲಿದ್ದಾರೆ ಎಂಬುದು ಖಚಿತವಾಗಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications