ಜಾತೀಯತೆಯನ್ನು ಮೂಟೆಕಟ್ಟಿ ಪಾತಾಳದಲ್ಲಿ ಹೂತುಹಾಕಬೇಕು: ಮೀರಾ ಕುಮಾರ್
ನವದೆಹಲಿ, ಜೂನ್ 27: 'ಜಾತಿಪದ್ಧತಿ ಭಾರತಕ್ಕಂಟಿರುವ ಶಾಪ. ಅದನ್ನು ಮೂಟೆಕಟ್ಟಿ, ಪಾತಾಳದಲ್ಲಿ ಹೂತುಹಾಕಬೇಕು. ರಾಷ್ಟ್ರಪತಿಯಾದರೆ ಅದೇ ನನ್ನ ಆದ್ಯ ಗುರಿ' ಎಂದು ಮಾಜಿ ಸ್ಪೀಕರ್ ಮೀರಾ ಕುಮಾರ್ ಹೇಳಿದರು.
ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಯುಪಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಮ್ಮತದಿಂದ ಆಯ್ಕೆಯಾದ ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರ್, ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿಕೊಂಡ ನಂತರ ಮೊಟ್ಟಮೊದಲ ಪತ್ರಿಕಾ ಗೋಷ್ಠಿಯನ್ನು ಇಂದು (ಜೂನ್ 27) ದೆಹಲಿಯಲ್ಲಿ ನಡೆಸಿದರು.
ಈ ಸಂದರ್ಭದಲ್ಲಿ ತಾವು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಕೈಗೊಳ್ಳಲಿರುವ ಪ್ರಮುಖ ಕಾರ್ಯಗಳ ಕುರಿತು ಅವರು ಮಾತನಾಡಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವ, ಜಾತಿಪದ್ಧತಿಯನ್ನು ನಿರ್ಮೂಲನೆ ಮಾಡುವ ಮತ್ತು ಬಡತನಕ್ಕೆ ಮುಕ್ತಾಯ ಹಾಡಿ ಆ ಮೂಲಕ ಒಗ್ಗಟ್ಟು ಸಾಧಿಸುವತ್ತ ತಮ್ಮ ಮೊದಲ ಗಮನ ಎಂದು ಅವರು ನುಡಿದರು.
ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಮೀರಾ ಕುಮಾರ್ ಅವರು ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರನ್ನು ಎದುರಿಸಲಿದ್ದಾರೆ. ಲೋಕಸಭೆಯ ಮೊದಲ ಮಹಿಳಾ ಸ್ಪೀಕರ್ ಎಂಬ ಹೆಗ್ಗಳಿಕೆ ಪಡೆದಿದ್ದ ಮೀರಾ ಅವರಿಗೆ ತಂದೆ ಜಗಜೀವನ್ ರಾಮ್ ಅವರ ಹೆಸರಿನ ಬಲವೂ ಇರುವುದರಿಂದ ಕೋವಿಂದ್ ಅವರನ್ನು ಎದುರಿಸಲು ಅವರೇ ಸಮರ್ಥ ವ್ಯಕ್ತಿ ಎಂಬ ನಿರ್ಧಾರಕ್ಕೆ ವಿಪಕ್ಷಗಳು ಬಂದು, ಅವರನ್ನೇ ಕಣಕ್ಕಿಳಿಸಿವೆ.
ಈ ಹಿನ್ನೆಲೆಯಲ್ಲಿ ಮೀರಾ ಕುಮಾರ್ ಇಂದು ನಡೆಸಿದ್ದ ಪತ್ರಿಕಾ ಗೋಷ್ಠಿ ಮಹತ್ವದ್ದೆನಿಸಿದೆ.

17 ಪಕ್ಷಗಳ ಬೆಂಬಲ ನಮ್ಮ ಕಡೆಗೆ
ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಒಟ್ಟು 17 ಪಕ್ಷಗಳು ಬೆಂಬಲ ಸೂಚಿಸಿವೆ ಎಂದ ಮೀರಾ ಕುಮಾರ್, ಗೆಲ್ಲುವ ಆಶಾಭಾವವನ್ನು ವ್ಯಕ್ತಪಡಿಸಿದರು. ಜೆಡಿ(ಯು) ಪಕ್ಷ, ರಾಮ್ ನಾಥ್ ಕೋವಿಂದ್ ಗೆ ಬೆಂಬಲ ಸೂಚಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ಇವೆಲ್ಲ ಸಹಜ ಎಂದರು.

ಆಂತರಿಕ ಪ್ರಜ್ಞೆಯಿಂದ ಬೆಂಬಲ ನೀಡಿ
ಈಗಾಗಲೇ ಸಂಸದರು ಮತ್ತು ಶಾಸಕರಿಗೆ ಪತ್ರ ಬರೆದಿರುವ ಮೀರಾ ಕುಮಾರ್ ತಮಗೆ ಆಂತರಿಕ ಪ್ರಜ್ಞೆಯಿಂದ ಮತನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸಾಬರಮತಿಯಿಂದ ಪ್ರಚಾರ
ಮಹಾತ್ಮಾ ಗಾಂಧಿಯವರ ಪಾದದ ಧೂಳಿನಿಂದ ಪವಿತ್ರವಾಗಿರುವ ಗುಜರಾತಿನ ಸಾಬರಮತಿ ಆಶ್ರಮದಿಂದ ತಮ್ಮ ಪ್ರಚಾರ ಕಾರ್ಯವನ್ನು ಆರಂಭಿಸುವುದಾಗಿ ಮೀರಾ ಕುಮಾರ್ ಇದೇ ಸಂದರ್ಭದಲ್ಲಿ ಹೇಳಿದರು.

ರಾಷ್ಟ್ರಪತಿ ಚುನಾವಣೆ ವೇಳಾಪಟ್ಟಿ
ಅಧಿಸೂಚನೆಯ ದಿನಾಂಕ: ಜೂನ್ 14, 2017
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 28
ನಾಮಪತ್ರ ಪರಿಶೀಲನೆ: ಜೂನ್ 29
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕ: ಜುಲೈ 1
ಚುನಾವಣಾ ದಿನಾಂಕ: ಜುಲೈ 17 (ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ)
ಫಲಿತಾಂಶದ ದಿನಾಂಕ: ಜುಲೈ 20
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications