ಜಾತೀಯತೆಯನ್ನು ಮೂಟೆಕಟ್ಟಿ ಪಾತಾಳದಲ್ಲಿ ಹೂತುಹಾಕಬೇಕು: ಮೀರಾ ಕುಮಾರ್
ನವದೆಹಲಿ, ಜೂನ್ 27: 'ಜಾತಿಪದ್ಧತಿ ಭಾರತಕ್ಕಂಟಿರುವ ಶಾಪ. ಅದನ್ನು ಮೂಟೆಕಟ್ಟಿ, ಪಾತಾಳದಲ್ಲಿ ಹೂತುಹಾಕಬೇಕು. ರಾಷ್ಟ್ರಪತಿಯಾದರೆ ಅದೇ ನನ್ನ ಆದ್ಯ ಗುರಿ' ಎಂದು ಮಾಜಿ ಸ್ಪೀಕರ್ ಮೀರಾ ಕುಮಾರ್ ಹೇಳಿದರು.
ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಯುಪಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಮ್ಮತದಿಂದ ಆಯ್ಕೆಯಾದ ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರ್, ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿಕೊಂಡ ನಂತರ ಮೊಟ್ಟಮೊದಲ ಪತ್ರಿಕಾ ಗೋಷ್ಠಿಯನ್ನು ಇಂದು (ಜೂನ್ 27) ದೆಹಲಿಯಲ್ಲಿ ನಡೆಸಿದರು.
ಈ ಸಂದರ್ಭದಲ್ಲಿ ತಾವು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಕೈಗೊಳ್ಳಲಿರುವ ಪ್ರಮುಖ ಕಾರ್ಯಗಳ ಕುರಿತು ಅವರು ಮಾತನಾಡಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವ, ಜಾತಿಪದ್ಧತಿಯನ್ನು ನಿರ್ಮೂಲನೆ ಮಾಡುವ ಮತ್ತು ಬಡತನಕ್ಕೆ ಮುಕ್ತಾಯ ಹಾಡಿ ಆ ಮೂಲಕ ಒಗ್ಗಟ್ಟು ಸಾಧಿಸುವತ್ತ ತಮ್ಮ ಮೊದಲ ಗಮನ ಎಂದು ಅವರು ನುಡಿದರು.
ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಮೀರಾ ಕುಮಾರ್ ಅವರು ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರನ್ನು ಎದುರಿಸಲಿದ್ದಾರೆ. ಲೋಕಸಭೆಯ ಮೊದಲ ಮಹಿಳಾ ಸ್ಪೀಕರ್ ಎಂಬ ಹೆಗ್ಗಳಿಕೆ ಪಡೆದಿದ್ದ ಮೀರಾ ಅವರಿಗೆ ತಂದೆ ಜಗಜೀವನ್ ರಾಮ್ ಅವರ ಹೆಸರಿನ ಬಲವೂ ಇರುವುದರಿಂದ ಕೋವಿಂದ್ ಅವರನ್ನು ಎದುರಿಸಲು ಅವರೇ ಸಮರ್ಥ ವ್ಯಕ್ತಿ ಎಂಬ ನಿರ್ಧಾರಕ್ಕೆ ವಿಪಕ್ಷಗಳು ಬಂದು, ಅವರನ್ನೇ ಕಣಕ್ಕಿಳಿಸಿವೆ.
ಈ ಹಿನ್ನೆಲೆಯಲ್ಲಿ ಮೀರಾ ಕುಮಾರ್ ಇಂದು ನಡೆಸಿದ್ದ ಪತ್ರಿಕಾ ಗೋಷ್ಠಿ ಮಹತ್ವದ್ದೆನಿಸಿದೆ.

17 ಪಕ್ಷಗಳ ಬೆಂಬಲ ನಮ್ಮ ಕಡೆಗೆ
ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಒಟ್ಟು 17 ಪಕ್ಷಗಳು ಬೆಂಬಲ ಸೂಚಿಸಿವೆ ಎಂದ ಮೀರಾ ಕುಮಾರ್, ಗೆಲ್ಲುವ ಆಶಾಭಾವವನ್ನು ವ್ಯಕ್ತಪಡಿಸಿದರು. ಜೆಡಿ(ಯು) ಪಕ್ಷ, ರಾಮ್ ನಾಥ್ ಕೋವಿಂದ್ ಗೆ ಬೆಂಬಲ ಸೂಚಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ಇವೆಲ್ಲ ಸಹಜ ಎಂದರು.

ಆಂತರಿಕ ಪ್ರಜ್ಞೆಯಿಂದ ಬೆಂಬಲ ನೀಡಿ
ಈಗಾಗಲೇ ಸಂಸದರು ಮತ್ತು ಶಾಸಕರಿಗೆ ಪತ್ರ ಬರೆದಿರುವ ಮೀರಾ ಕುಮಾರ್ ತಮಗೆ ಆಂತರಿಕ ಪ್ರಜ್ಞೆಯಿಂದ ಮತನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸಾಬರಮತಿಯಿಂದ ಪ್ರಚಾರ
ಮಹಾತ್ಮಾ ಗಾಂಧಿಯವರ ಪಾದದ ಧೂಳಿನಿಂದ ಪವಿತ್ರವಾಗಿರುವ ಗುಜರಾತಿನ ಸಾಬರಮತಿ ಆಶ್ರಮದಿಂದ ತಮ್ಮ ಪ್ರಚಾರ ಕಾರ್ಯವನ್ನು ಆರಂಭಿಸುವುದಾಗಿ ಮೀರಾ ಕುಮಾರ್ ಇದೇ ಸಂದರ್ಭದಲ್ಲಿ ಹೇಳಿದರು.

ರಾಷ್ಟ್ರಪತಿ ಚುನಾವಣೆ ವೇಳಾಪಟ್ಟಿ
ಅಧಿಸೂಚನೆಯ ದಿನಾಂಕ: ಜೂನ್ 14, 2017
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 28
ನಾಮಪತ್ರ ಪರಿಶೀಲನೆ: ಜೂನ್ 29
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕ: ಜುಲೈ 1
ಚುನಾವಣಾ ದಿನಾಂಕ: ಜುಲೈ 17 (ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ)
ಫಲಿತಾಂಶದ ದಿನಾಂಕ: ಜುಲೈ 20
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications