ರಾಷ್ಟ್ರಪತಿಗಳಿಂದ 2016ನೇ ಸಾಲಿನ 'ಪದ್ಮ ಪ್ರಶಸ್ತಿ' ಪ್ರದಾನ
ನವದೆಹಲಿ,ಮಾರ್ಚ್.28: ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಶ್ರೀಶ್ರೀ ರವಿಶಂಕರ್ ಗುರೂಜಿ, ಅನುಪಮ್ ಖೇರ್ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಸೇರಿದಂತೆ ಹಲವಾರು ಸಾಧಕರು ನವದೆಹಲಿಯಲ್ಲಿ ನಡೆದ ಪದ್ಮ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ನಾಡಿನ ಪ್ರತಿಷ್ಠಿತ ಪ್ರಶಸ್ತಿ ಪದ್ಮ ವಿಭೂಷಣಕ್ಕೆ 10, ಪದ್ಮ ಭೂಷಣಕ್ಕೆ 19 ಹಾಗೂ ಪದ್ಮಶ್ರೀ ಪ್ರಶಸ್ತಿಗೆ 83 ಮಂದಿ ಭಾಜನರಾಗಿದ್ದಾರೆ. ಇದರಲ್ಲಿ 19 ಜನ ಮಹಿಳಾ ಸಾಧಕಿಯರಿರುವುದು ಹೆಮ್ಮೆಯ ಸಂಗತಿಯಾಗಿದೆ.
ಪದ್ಮ ವಿಭೂಷಣ ಪ್ರಶಸ್ತಿಯನ್ನು ಯಾಮಿನಿ ಕೃಷ್ಣಮೂರ್ತಿ ನೃತ್ಯದಲ್ಲಿ, ನಟ ರಜನಿಕಾಂತ್ ಸಿನಿಮಾ ವಲಯದಲ್ಲಿ, ರಾಮೋಜಿ ರಾವ್ ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಪಡೆದಿದ್ದಾರೆ. ಪದ್ಮ ವಿಭೂಷಣಕ್ಕೆ ಒಟ್ಟು 10 ಮಂದಿ ಭಾಜನರಾಗಿದ್ದಾರೆ. ಅವಿನಾಶ್ ದೀಕ್ಷಿತ್ ಸಾಹಿತ್ಯ ಹಾಗೂ ಶಿಕ್ಷಣ-ಯುಎಸ್ಎ, ಧೀರೂಭಾಯಿ ಅಂಬಾನಿ ಮರಣೋತ್ತರ ಪ್ರಶಸ್ತಿ ಪಡೆದಿದ್ದಾರೆ. [ರಜನಿಕಾಂತ್, ರವಿಶಂಕರ್ ಗುರೂಜಿಗೆ ಪದ್ಮ ವಿಭೂಷಣ ಪ್ರಶಸ್ತಿ]
ಪದ್ಮ ಭೂಷಣ ಪ್ರಶಸ್ತಿಯು ಅನುಪಮ್ ಖೇರ್, ಸಾನಿಯಾ ಮಿರ್ಜಾ, ವಿನೋದ್ ರಾಯ್, ಸೈನಾ ನೆಹ್ವಾಲ್ ಸೇರಿದಂತೆ ಒಟ್ಟು 19 ಮಂದಿಗೆ ಸಂದಿದೆ. ಪದ್ಮಶ್ರೀ ಪ್ರಶಸ್ತಿಯನ್ನು ಪ್ರಿಯಾಂಕಾ ಛೋಪ್ರಾ, ತುಳಸಿದಾಸ್ ಬೋರ್ಕರ್, ಭಿಕುದಾನ್ ಗಾಧ್ವಿ, ಅಜಯ್ ಪಾಲ್ ಸಿಂಗ್ ಬಂಗಾ ಹೀಗೆ ಒಟ್ಟು 83 ಮಂದಿ ಸ್ವೀಕರಿಸಿದ್ದಾರೆ. ಈ ಪ್ರಶಸ್ತಿಗಳನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.

ರವಿಶಂಕರ್ ಗುರೂಜಿಗೆ ಪದ್ಮವಿಭೂಷಣ ಪ್ರಶಸ್ತಿ
ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀಶ್ರೀ ರವಿಶಂಕರ್ ಗುರೂಜಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆತಿದೆ. ಆಧ್ಯಾತ್ಮಿಕ ವಲಯದ ಮಹಾಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.

ಧೀರೂಬಾಯಿ ಅಂಬಾನಿಗೆ ಮರಣೋತ್ತರ ಪ್ರಶಸ್ತಿ
ದಿ. ಧೀರೂಬಾಯಿ ಅಂಬಾನಿ ಅವರಿಗೆ ಮರಣೋತ್ತರ ಪ್ರಶಸ್ತಿ ಲಭಿಸಿದ್ದು, ಅವರ ಪತ್ನಿಯಾದ ಕೊಕೀಲಾಬೇನ್ ಅಂಬಾನಿ ಪ್ರಶಸ್ತಿ ಸ್ವೀಕರಿಸಿದರು.

ಬ್ಯಾಡ್ಮಿಂಟನ್ ತಾರೆಯ ನಗು
ಬ್ಯಾಡ್ಮಿಂಟನ್ ತಾರೆಯಾದ ಹೈದರಾಬಾದ್ ಮೂಲದ ಸೈನಾ ನೆಹ್ವಾಲ್ ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆಗಾಗಿ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಸ್ವೀಕರಿಸುವಾಗ ಚಂದದ ನಗೆ ಬೀರಿದ್ದು ಹೀಗೆ

ನಟ ಅನುಪಮ್ ಖೇರ್ ಗೆ ಪದ್ಮಭೂಷಣ
ಬಾಲಿವುಡ್ ನಟ ಅನುಪಮ್ ಖೇರ್ ಅವರಿಗೆ ಸಿನಿಮಾ ಕ್ಷೇತ್ರದಲ್ಲಿ ತಮ್ಮ ಅಭಿನಯದ ಮೂಲಕ ವಿಶೇಷ ಛಾಪು ಮೂಡಿಸಿದ ಕಾರಣ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.

ಪದ್ಮಶ್ರೀ ಪ್ರಶಸ್ತಿ ಪಡೆದ ಅಜಯ್ ಪಾಲ್ ಸಿಂಗ್
ಅಜಯ್ ಪಾಲ್ ಸಿಂಗ್ ಅವರು ಉದ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಪಡೆದರು.

ಫಿಲ್ಮ್ ಮೇಕರ್ ಮಧೂರ್ ಭಂಡಾರ್ಕರ್
ಫಿಲ್ಮ್ ಮೇಕರ್ ಮಧೂರ್ ಭಂಡಾರ್ಕರ್ ಅವರಿಗೆ ಸಿನಿಮಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.

ಜಗನ್ಮೋಹನ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ
ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಜಗನ್ಮೋಹನ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ದೊರೆತಿದೆ.

ಅಜಯ್ ದೇವಾಗನ್ ಗೆ ಪದ್ಮಶ್ರೀ ಪ್ರಶಸ್ತಿ
ಬಾಲಿವುಡ್ ನಟನಾ ವಲಯದಲ್ಲಿ ಸಾಧನೆ ಮಾಡಿದ ಅಜಯ್ ದೇವಾಗನ್ ಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

ಜಗನ್ಮೋಹನ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ
ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಜಗನ್ಮೋಹನ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ದೊರೆತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications