ಆಸ್ಪತ್ರೆಯಿಂದ ರಾಷ್ಟ್ರಪತಿ ಭವನಕ್ಕೆ ಮರಳಿದ ರಾಮನಾಥ್ ಕೋವಿಂದ್
ನವದೆಹಲಿ, ಏಪ್ರಿಲ್ 12: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸುಮಾರು ಎರಡು ವಾರಗಳ ಆಸ್ಪತ್ರೆ ವಾಸದ ಬಳಿಕ ಸೋಮವಾರ ರಾಷ್ಟ್ರಪತಿ ಭವನಕ್ಕೆ ಹಿಂದಿರುಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೈಪಾಸ್ ಸರ್ಜರಿಗೆ ಒಳಗಾಗಿದ್ದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
'ನನ್ನ ಶಸ್ತ್ರಚಿಕಿತ್ಸೆ ಬಳಿಕ ನಾನು ರಾಷ್ಟ್ರಪತಿ ಭವನಕ್ಕೆ ಮರಳಿದ್ದೇನೆ. ನಿಮ್ಮೆಲ್ಲರ ಹಾರೈಕೆ ಮತ್ತು ಪ್ರಾರ್ಥನೆಗಳು, ಏಮ್ಸ್ ಹಾಗೂ ಸೇನೆಯ ಆರ್ಆರ್ ಆಸ್ಪತ್ರೆಯ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿ ನೀಡಿದ ಅತೀವ ಕಾಳಜಿಯಿಂದ ನನ್ನ ತ್ವರಿತ ಚೇತರಿಕೆ ಸಾಧ್ಯವಾಗಿದೆ. ಅದಕ್ಕಾಗಿ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮನೆಗೆ ಮರಳಲು ಸಂತೋಷವಾಗುತ್ತಿದೆ' ಎಂದು ಕೋವಿಂದ್ ಅವರು ಟ್ವೀಟ್ ಮಾಡಿದ್ದಾರೆ.
ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮಾರ್ಚ್ 30ರಂದು ಕೋವಿಂದ್ ಅವರಿಗೆ ಹೃದಯದ ಬೈಪಾಸ್ ಸರ್ಜರಿ ನಡೆಸಲಾಗಿತ್ತು. ಏಪ್ರಿಲ್ 3ರಂದು ಅವರನ್ನು ಐಸಿಯುದಿಂದ ವಿಶೇಷ ಕೊಠಡಿಗೆ ರವಾನಿಸಲಾಗಿತ್ತು.

ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾರ್ಚ್ 26ರಂದು ಕೋವಿಂದ್ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಹೃದಯದಲ್ಲಿ ಸಮಸ್ಯೆ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಮರುದಿನ ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
'ಬೈಪಾಸ್ ಸರ್ಜರಿ ಬಳಿಕ ನಾನು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದೇನೆ. ವೈದ್ಯರು ಹಾಗೂ ಆರೈಕೆದಾರರ ಅಮೋಘ ಬದ್ಧತೆಗೆ ಧನ್ಯವಾದಗಳು. ಶೀಘ್ರವೇ ಚೇತರಿಸಿಕೊಳ್ಳುವಮತೆ ನಾಗರಿಕರು, ಭಾರತದ ಹಾಗು ವಿದೇಶದ ನಾಯಕರು ರವಾನಿಸಿದ ಸಂದೇಶಗಳಿಂದ ನಾನು ಮುದಗೊಂಡಿದ್ದೇನೆ. ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಗಳನ್ನು ಪದಗಳಲ್ಲಿ ವರ್ಣಿಸುವುದು ಕಷ್ಟವಾಗುತ್ತದೆ' ಎಂದು ಕೋವಿಂದ್ ಅವರು ಕಳೆದ ವಾರ ತಿಳಿಸಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications