ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ ಯಾರಿಗೆ ಗೊತ್ತಾ?
ನವದೆಹಲಿ, ಮೇ 9: ಲೋಕಸಭಾ ಚುನಾವಣೆಗೆ ಇನ್ನೊಂದೇ ಒಂದು ಹಂತದ ಮತದಾನ ಬಾಕಿಯಿದೆ. ಮೇ 12ರಂದು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಅಂದು ದಕ್ಷಿಣ ಕೊಲ್ಕತಾ ಲೋಕಸಬಾ ಕ್ಷೇತದಲ್ಲಿ ಮತದಾನ ಜರುಗಲಿದೆ. ಆಯ್ತು ಅದರಲ್ಲೇನು ವಿಶೇಷ ಅನ್ನುತ್ತೀರಾ?
ವಿಶೇಷ ಇದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇದೇ ಲೋಕಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದಾರೆ. ಇನ್ನೂ ವಿಶೇಷ ಏನೆಂದರೆ ಸ್ಥಿತಪ್ರಜ್ಞರಾಗಿ/ಪಕ್ಷಾತೀತವಾಗಿ/ರಾಜಕೀಯೇತರವಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಮ್ಮ ಐಡೆಂಟಿಟಿಯನ್ನು ಉಳಿಸಿಕೊಳ್ಳಲು ಇಚ್ಛಿಸಿದ್ದು, ತಮ್ಮ ಮತದಾನ ಹಕ್ಕನ್ನು ಚಲಾಯಿಸದಿರಲು ನಿರ್ಧರಿಸಿದ್ದಾರೆ.
President sticks to precedence:

ಈ ಸಂಬಂಧ ಇಂದು ಶುಕ್ರವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪ್ರಣಬ್ ಮುಖರ್ಜಿ ಅವರು postal ballot ಮೂಲಕ ಮತದಾನ ಮಾಡುವಂತಾಗಲು ರಾಷ್ಟ್ರಪತಿ ಕಾರ್ಯಾಲಯವು ಈ ಹಿಂದೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿತ್ತು. ಆದರೆ ಈ ಹಿಂದಿನ ರಾಷ್ಟ್ರಪತಿಗಳು ಯಾರೂ ಚುನಾವಣೆಗಳಲ್ಲಿ ಮತದಾನ ಮಾಡಿರುವ ಸಂಪ್ರದಾಯ ಇಲ್ಲ ಎಂಬುದನ್ನು ತಿಳಿದುಕೊಂಡ 14ನೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮತ ಹಾಕುವ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.
'ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಜಕೀಯವಾಗಿ ತಟಸ್ಥರಾಗಿರಲು ಇಚ್ಛಿಸಿದ್ದಾರೆ. ಹಾಗಾಗಿ ಅವರು ಮತದಾನ ಪ್ರಕ್ರಿಯೆಯಲ್ಲಿ ಅವರು ಪಾಲ್ಗೊಳ್ಳುವುದಿಲ್ಲ' ಎಂದು ರಾಷ್ಟ್ರಪತಿಗಳ ಮಾಧ್ಯಮ ಕಾರ್ಯದರ್ಶಿ ವೇಣು ರಾಜಮೋನಿ ಅವರು ನವದೆಹಲಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.
South Kolkata ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಲಾ ರಾಯ್ ಮತ್ತು ಬಿಜೆಪಿ ಪರ ತಥಾಗತ ರಾಯ್, ತೃಣಮೂಲ ಕಾಂಗ್ರೆಸ್ ವತಿಯಿಂದ ಸುಬ್ರತಾ ಬಕ್ಷಿ ಹಾಗೂ ಸಿಪಿಎಂ ನಿಂದ ಪ್ರೊ. ನಂದಿನಿ ಮುಖರ್ಜಿ ಮಧ್ಯೆ ತೀವ್ರ ಹಣಾಹಣಿ ನಡೆದಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications