ಸೀತಾರಾಂ ಯಚೂರಿಯನ್ನು ಭೇಟಿ ಮಾಡಿದ ರಾಜನಾಥ್, ನಾಯ್ಡು
ನವದೆಹಲಿ, ಜೂನ್ 16: ರಾಷ್ಟಪತಿ ಚುನಾವಣೆಗೆ ಇನ್ನೊಂದು ತಿಂಗಳಷ್ಟೇ ಬಾಕಿ ಉಳಿದಿದ್ದು, ಅಭ್ಯರ್ಥಿ ಆಯ್ಕೆಯ ಕುರಿತು ರಾಜಕೀಯ ಪಕ್ಷಗಳು ಬಿರುಸಿನ ಕಾರ್ಯ ಆರಂಭಿಸಿವೆ.
ಇಂದು (ಜೂನ್ 16) ಬೆಳಗ್ಗೆ ತಾನೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ಅವರನ್ನೂ ಭೇಟಿಯಾದರು.

ಭೇಟಿಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಯಚೂರಿ, 'ಅವರು (ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು) ರಾಷ್ಟ್ರಪತಿ ಅಭ್ಯರ್ಥಿಯ ಕುರಿತಂತೆ ತಮಗೆ ಬೆಂಬಲ ನೀಡುವಂತೆ ಕೇಳಿದ್ದಾರೆ. ಆದರೆ ಅಭ್ಯರ್ಥಿ ಹೆಸರನ್ನು ಮಾತ್ರ ಬಹಿರಂಗ ಪಡಿಸಿಲ್ಲ. ಅಭ್ಯರ್ಥಿಯ ಹೆಸರು ಗೊತ್ತಿಲ್ಲದೆ ಬೆಂಬಲ ನೀಡುವುದು ಕಷ್ಟ' ಎಂದು ಯಚೂರಿ ಹೇಳಿದರು.
ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವವರಿಗೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದರಲ್ಲದೆ, ಇನ್ನು ನಾಲ್ಕೈದು ದಿನದಲ್ಲಿ ರಾಷ್ಟ್ರಪತಿ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿ ಮತ್ತೆ ಭೇಟಿಯಾಗುವುದಾಗಿ ಸಿಂಗ್ ಮತ್ತು ನಾಯ್ಶು ಹೇಳಿದ್ದಾರೆಂದು ಪತ್ರಕರ್ತರಿಗೆ ಯಚೂರಿ ತಿಳಿಸಿದರು.
ರಾಷ್ಟ್ರಪತಿ ಚುನಾವಣೆ ಜುಲೈ 15 ರಂದು ನಡೆಯಲಿದ್ದು, ಜು.20 ರಂದು ಫಲಿತಾಂಶ ಹೊರಬೀಳಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications