ಪ್ರಧಾನಿ ಪ್ರಕಾರ; ಭಾರತೀಯರನ್ನು ಕಾಡುತ್ತಿದೆಯಾ ಆ 'ಅಗೋಚರ ಶತ್ರು'?
ನವದೆಹಲಿ, ಜೂನ್.01: ವಿಶ್ವವನ್ನೇ ಕಾಡುತ್ತಿರುವ ನೊವೆಲ್ ಕೊರೊನಾ ವೈರಸ್ ಮಹಾಮಾರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಹೊಸ ರೀತಿಯಲ್ಲಿ ವಾಖ್ಯಾನಿಸಿದ್ದಾರೆ. ಕೊವಿಡ್-19 ಎಂಬುದು ಅಗೋಚರ ಶತ್ರು ಎಂದು ಮೋದಿ ಹೇಳಿದ್ದಾರೆ.
Recommended Video
ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ರಜತ ಮಹೋತ್ಸವ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ರಾಜೀವ್ ಗಾಂಧಿ ವಿಶ್ವವಿದ್ಯಾಲಯವು ವೈದ್ಯಕೀಯ ತರಬೇತಿ ಕ್ಷೇತ್ರದಲ್ಲಿ ಅದ್ಭುತ ಕೆಲಸವನ್ನು ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದರು. ನಂತರದಲ್ಲಿ ಕಣ್ಣಿಗೆ ಕಾಣದ ಅಗೋಚರ ಶತ್ರುವಾಗಿರುವ ಕೊರೊನಾ ವೈರಸ್ ವಿರುದ್ಧ ನಮ್ಮ ವಾರಿಯರ್ಸ್ ಸಮರ್ಥವಾಗಿ ಎದುರಿಸಲಿದ್ದಾರೆ ಎಂದು ಹೇಳಿದರು.
ವಿಶ್ವ ಕಂಡ ಎರಡು ಜಾಗತಿಕ ಯುದ್ಧಗಳು ಸೃಷ್ಟಿಸಿದಕ್ಕಿಂತ ಹೆಚ್ಚಿನ ಬಿಕ್ಕಟ್ಟನ್ನು ಕೊರೊನಾ ವೈರಸ್ ಸೃಷ್ಟಿ ಮಾಡುತ್ತಿದೆ. ಈ ಹಿಂದೆ ಎರಡು ಜಾಗತಿಕ ಯುದ್ಧಗಳು ನಡೆದ ನಂತರ ವಿಶ್ವದ ಸ್ಥಿತಿಗತಿಗಳೇ ಬದಲಾಗಿ ಬಿಟ್ಟಿದ್ದವು. ಕೊವಿಡ್-19 ಬಿಕ್ಕಟ್ಟು ನಿವಾರಣೆ ನಂತರವೂ ಜಗತ್ತು ಮತ್ತೊಂದು ಹಂತಕ್ಕೆ ಬಂದು ನಿಂತಿರುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಕೊರೊನಾ ವಾರಿಯರ್ಸ್ ಗೆ ಪ್ರಧಾನಿ ಕೃತಜ್ಞತೆ
ನೊವೆಲ್ ಕೊರೊನಾ ವೈರಸ್ ರೀತಿಯ ಬಿಕ್ಕಟ್ಟನ್ನು ಎದುರಿಸಲು ಹೆಗಲು ಕೊಟ್ಟು ನಿಂತಿರುವ ವೈದ್ಯರು, ನರ್ಸ್, ವೈದ್ಯಕೀಯ ಸಿಬ್ಬಂದಿ, ವೈಜ್ಞಾನಿಕ ಸಮುದಾಯಕ್ಕೆ ಇಡೀ ಜಗತ್ತು ಕೃತಜ್ಞತೆ ಸಲ್ಲಿಸುವ ಸಂದರ್ಭ ಇದಾಗಿದೆ. ಕೊರೊನಾ ವಾರಿಯರ್ಸ್ ಗೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಕೃತಜ್ಞತೆ ಸಲ್ಲಿಸಿದರು.

ಬುದ್ಧಿವಂತಿಕೆಯ ಹೋರಾಟದ ಬಗ್ಗೆ ಪ್ರಧಾನಿ ಉಲ್ಲೇಖ
ಕೊರೊನಾ ವೈರಸ್ ಸೋಂಕು ಹರಡುವಿಕೆಯು ಜಗತ್ತನ್ನು ಬಾಧಿಸುತ್ತಿದೆ. ಇಂಥ ಸಂದಿಗ್ಘ ಪರಿಸ್ಥಿತಿಯಲ್ಲಿಯೂ ಕೂಡಾ ಭಾರತವು ವೈಜ್ಞಾನಿಕ ಸಮುದಾಯ, ವೈದ್ಯರು ಸೇರಿದಂತೆ ಕೊರೊನಾ ವಾರಿಯರ್ಸ್ ನ್ನು ಮುಂದಿಟ್ಟುಕೊಂಡು ಕೊರೊನಾ ವೈರಸ್ ವಿರುದ್ಧ ಬುದ್ಧಿವಂತಿಕೆಯಿಂದ ಹೋರಾಟ ನಡೆಸುತ್ತಿದೆ ಎಂದು ಮೋದಿ ತಿಳಿಸಿದರು.

ಯೋಧರಿಗೆ ವೈದ್ಯಕೀಯ ಸಿಬ್ಬಂದಿಯ ಹೋಲಿಕೆ
ದೇಶದೊಳಗೆ ಲಗ್ಗೆ ಇಟ್ಟಿರುವ ಕೊರೊನಾ ವೈರಸ್ ಎಂಬ ಅಗೋಚರ ಶಕ್ತಿಯ ವಿರುದ್ಧ ಭಾರತೀಯರನ್ನು ರಕ್ಷಿಸುವುದಕ್ಕೆ ವೈದ್ಯರು, ನರ್ಸ್ ಗಳು ಹಾಗೂ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಗಡಿಯಲ್ಲಿ ದೇಶ ರಕ್ಷಣೆಗೆ ಯೋಧರು ಪಣ ತೊಟ್ಟಿದ್ದರೆ, ದೇಶದೊಳಗೆ ಪ್ರಜೆಗಳನ್ನು ರಕ್ಷಿಸಲು ಯೋಧರ ಸಮವಸ್ತ್ರವಿಲ್ಲದೇ ವೈದ್ಯರು ಯೋಧರಂತೆ ಶ್ರಮಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅಗೋಚರ ಶತ್ರುವಿನ ವಿರುದ್ಧ ಅಜೇಯ ಹೋರಾಟ
ಕೊರೊನಾ ವೈರಸ್ ಕಣ್ಣಿಗೆ ಕಾಣದ ಅಗೋಚರ ಶತ್ರುವಿನಂತೆ ಭಾರತೀಯರನ್ನು ಕಾಡುತ್ತಿದೆ. ಆದರೆ ಅಗೋಚರ ಶತ್ರುವಿನ ವಿರುದ್ಧ ವೈದ್ಯರು, ನರ್ಸ್ ಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಅಜೇಯವಾಗಿ ಹೋರಾಟ ನಡೆಸುತ್ತಿದ್ದಾರೆ. ಈ ಯುದ್ಧದಲ್ಲಿ ನಮ್ಮ ಕೊರೊನಾ ವಾರಿಯರ್ಸ್ ಖಂಡಿತವಾಗಿಯೂ ಗೆಲವು ಸಾಧಿಸುತ್ತಾರೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications