ಕಾರ್ನಾಡ್ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ
Recommended Video
ನವದೆಹಲಿ, ಜೂನ್ 10: ಸೋಮವಾರ ಬೆಳಿಗ್ಗೆ ನಿಧನರಾದ ಹಿರಿಯ ಸಾಹಿತಿ, ನಾಟಕಕಾರ, ನಟ, ನಿರ್ದೇಶಕ ಗಿರೀಶ್ ಕರ್ನಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ
ಕಾರ್ನಾಡ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿರುವ ಮೋದಿ ಅವರು, ಕಾರ್ನಾಡರ ಕೊಡುಗೆಗಳನ್ನು ಸ್ಮರಿಸಿ ಟ್ವೀಟ್ ಮಾಡಿದ್ದಾರೆ.
ಎಲ್ಲ ವಿಭಾಗಗಳಲ್ಲಿಯೂ ತೊಡಗಿಸಿಕೊಂಡಿದ್ದ ಗಿರೀಶ್ ಕಾರ್ನಾಡ್ ಅವರನ್ನು ಅವರ ಬಹುಮುಖಿ ತೊಡಗಿಸಿಕೊಳ್ಳುವಿಕೆಯಿಂದ ಸ್ಮರಿಸಿಕೊಳ್ಳುತ್ತೇವೆ. ತಮಗೆ ಆಪ್ತವಾದ ವಿಚಾರಗಳ ಬಗ್ಗೆ ಅವರು ಅತ್ಯಂತ ಉತ್ಕಟತೆಯಿಂದ ಮಾತನಾಡುತ್ತಿದ್ದರು. ಅವರ ಕಾರ್ಯಗಳು ಹಲವು ವರ್ಷಗಳು ಕಳೆದರೂ ಜನಪ್ರಿಯವಾಗಿಯೇ ಇರುತ್ತವೆ. ಅವರ ಸಾವಿನಿಂದ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Girish Karnad will be remembered for his versatile acting across all mediums. He also spoke passionately on causes dear to him. His works will continue being popular in the years to come. Saddened by his demise. May his soul rest in peace.
— Narendra Modi (@narendramodi) 10 June 2019
ಹಲವು ಕಾಲದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಾರ್ನಾಡ್ (81) ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ನಿಧನರಾದರು. ಸಾಹಿತ್ಯ, ರಂಗಭೂಮಿ, ಸಿನಿಮಾ ಹೀಗೆ ಅನೇಕ ವಲಯಗಳಲ್ಲಿ ಗುರುತಿಸಿಕೊಂಡಿದ್ದ ಅವರು, ತಮ್ಮ ಪ್ರಗತಿಪರ, ಸೈದ್ಧಾಂತಿಕ ನಿಲುವುಗಳಿಂದ ಕೂಡ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದ್ದರು.