ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ವಲಸಿಗರು ಅನ್ನೋದಾ?
ದೆಹಲಿ, ಡಿಸೆಂಬರ್.01: ಭಾರತದಲ್ಲಿ ನಾಗರಿಕ ಕಾಯ್ದೆ ಜಾರಿಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನಾಯಕರೊಬ್ಬರು ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. ಈ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ವಲಸಿಗರು ಎನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಹೌದು, ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಇಬ್ಬರೂ ವಲಸಿಗರೇ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರ್ ಹೇಳಿದ್ದಾರೆ. ಗುಜರಾತ್ ಮೂಲದ ಈ ಇಬ್ಬರು ನಾಯಕರು ದೆಹಲಿಗೆ ವಲಸೆ ಬಂದಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಭಾರತ ಕೇವಲ ಒಂದು ಧರ್ಮಕ್ಕೆ ಸೀಮಿತವಾಗಿರುವ ದೇಶವಲ್ಲ ಎಂದಿರುವ ಅಧೀರ್ ರಂಜನ್ ಚೌಧರಿ, ಕೇಂದ್ರ ಸರ್ಕಾರದ ನಾಗರಿಕ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಾಗರಿಕ ಮಸೂದೆ ಮೂಲಕ ದೇಶವನ್ನು ಧರ್ಮದ ಆಧಾರದಲ್ಲಿ ಕೇಂದ್ರ ಸರ್ಕಾರ ಇಬ್ಭಾಗಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ದೆಹಲಿಗೆ ವಲಸೆ ಬಂದವರೇ ಈ ಗುಜರಾತಿಗಳು!
ಭಾರತದಲ್ಲಿ ಹಿಂದೂಗಳೂ ಇದ್ದಾರೆ, ಮುಸ್ಲೀಂರೂ ಇದ್ದಾರೆ. ಈ ದೇಶ ಎರಡೂ ಧರ್ಮದ ಜನರಿಗೆ ಸೇರಿದ್ದಾಗಿದೆ. ಒಂದು ಸಮುದಾಯವನ್ನು ಹೊರಗಟ್ಟುವ ಅಧಿಕಾರ ಇಲ್ಲಿ ಯಾರಿಗೂ ಇಲ್ಲ. ಆದರೆ, ಕೇಂದ್ರ ಸರ್ಕಾರ ಹಿಂದೂಗಳನ್ನಷ್ಟೇ ಉಳಿಸಿಕೊಂಡು ಮುಸ್ಲಿಂರನ್ನು ದೇಶದಿಂದ ಹೊರ ಕಳುಹಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಅಧೀರ್ ರಂಜನ್ ಹೇಳಿಕೆಯಲ್ಲಿ ಶಾ ಮಾತು ಪ್ರಸ್ತಾಪ
ಇದಕ್ಕೂ ಮುನ್ನ ರಾಜ್ಯಸಭೆಯಲ್ಲಿ ಮಾತನಾಡಿದ ಅಮಿತ್ ಶಾ ಹೇಳಿಕೆಯನ್ನೂ ಕೂಡಾ ಅಧೀರ್ ರಂಜನ್ ಪ್ರಸ್ತಾಪಿಸಿದರು. ಕೇಂದ್ರ ಸರ್ಕಾರದ ನಾಗರಿಕ ಕಾಯ್ದೆ ದೇಶದ ಹಿಂದೂಗಳು, ಬುದ್ಧರು, ಜೈನರು, ಪಾರ್ಸಿಗಳು, ಕ್ರಿಶ್ಚಿಯನ್ನರು, ಸಿಖ್ಖ್ ರಿಗೆ ಅನುಕೂಲಕರವಾಗಲಿದೆ ಎಂದು ಹೇಳಿದ್ದಾರೆ. ಅಂದರೆ, ಭಾರತವನ್ನು ಪಾಕಿಸ್ತಾನ್, ಬಾಂಗ್ಲಾದೇಶ, ಅಫ್ಘಾನಿಸ್ತಾನ್ ದಿಂದ ದೇಶಕ್ಕೆ ಆಗಮಿಸಿರುವ ವಲಸಿಗರನ್ನು ಧರ್ಮದ ಆಧಾರದಲ್ಲಿ ವಿಂಗಡಿಸುತ್ತಿದ್ದಾರೆ ಎಂದು ದೂರಿದ್ದಾರೆ.

ವಿದೇಶಗಳಲ್ಲಿ ನಮ್ಮ ಭಾರತೀಯರೇ ವಲಸಿಗರು!
ವಿಶ್ವದಲ್ಲಿ ಅತಿಹೆಚ್ಚು ವಲಸಿಗರು ಎಂದರೆ ಭಾರತೀಯರೇ ಆಗಿದ್ದಾರೆ. ಹಲವು ರಾಷ್ಟ್ರಗಳಲ್ಲಿ ಭಾರತದ ಅದೆಷ್ಟೋ ಲಕ್ಷ ಲಕ್ಷ ಜನರು ಉದ್ಯೋಗಕ್ಕಾಗಿ ತೆರಳಿದ್ದಾರೆ. ಅಲ್ಲಿಯೇ ನೆಲೆಸಿದ್ದು, ಭಾರತಕ್ಕೆ ಕೋಟಿ ಕೋಟಿ ರೂಪಾಯಿ ಹಣವನ್ನು ದುಡಿದುಕೊಂಡು ಬಂದಿದ್ದಾರೆ. ಇನ್ನು ಅದೆಷ್ಟು ಜನರು ಇಲ್ಲಿ ವಾಸಿಸಿರುವ ತಮ್ಮವರಿಗಾಗಿ ನೀಡುತ್ತಿದ್ದಾರೆ. ಆ ಮೂಲಕ ನಮ್ಮ ದೇಶಕ್ಕೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದಾರೆ. ಆದರೆ, ಅಂಥ ವಲಸಿಗರ ಬಗ್ಗೆ ವಿದೇಶಗಳಲ್ಲಿ ಯಾವುದೇ ಕಾನೂನುಗಳನ್ನು ವಿದೇಶಗಳು ಜಾರಿಗೊಳಿಸಿಲ್ಲ. ಭಾರತದಲ್ಲಿ ಬದುಕಲು ಬಂದವರಿಗೆ ಮಾತ್ರ ಏಕೆ ಈ ನಾಗರಿಕ ಕಾಯ್ದೆ ಬೇಕು ಎಂದು ರಂಜನ್ ಪ್ರಶ್ನೆ ಮಾಡಿದ್ದಾರೆ.

ಭಾರತದ ನಾಗರಿಕ ಮಸೂದೆಯಲ್ಲಿ ಇರುವುದೇನು?
ಕೇಂದ್ರ ಸರ್ಕಾರದ ನಾಗರಿಕ ಮಸೂದೆಯನ್ನು ಕಳೆದ 2019ರ ಜನವರಿ 8ರಂದು ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ಬಾಂಗ್ಲಾದೇಶ, ಪಾಕಿಸ್ತಾನ್, ಅಫ್ಘಾನಿಸ್ತಾನ್ ದಿಂದ ಭಾರತಕ್ಕೆ ಆಗಮಿಸಿ ನೆಲೆ ಕಂಡುಕೊಂಡಿರುವ ಜನರಿಗೆ ದೇಶದ ನಾಗರಿಕ ಸೌಲಭ್ಯ ಒದಗಿಸುವುದು ಮಸೂದೆಯ ಉದ್ದೇಶ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಡಿಸೆಂಬರ್.31, 2014ರೊಳಗೆ ದೇಶಕ್ಕೆ ವಲಸೆ ಬಂದಿರುವ ವಲಸಿಗರಿಗೆ ಇದು ಅನ್ವಯವಾಗಲಿದೆ. ಆದರೆ, ಮುಸ್ಲಿಮೇತರ ವಲಸಿಗರ ಬಗ್ಗೆ ಮಾತ್ರ ಮಸೂದೆಯಲ್ಲಿ ಉಲ್ಲೇಖಿಸಿದ್ದು, ಇದೊಂದು ಧರ್ಮಾಧಾರಿತ ವಿಂಗಡಣೆ ಎನ್ನುವುದು ವಿರೋಧ ಪಕ್ಷಗಳ ಆರೋಪವಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications