Get Updates
Get notified of breaking news, exclusive insights, and must-see stories!

ಮಾನನಷ್ಟ ಮೊಕದ್ದಮೆ:ಎಂಜೆ ಅಕ್ಬರ್, ಪ್ರಿಯಾ ರಾಜಿ ಸಂಧಾನಕ್ಕೆ ನಕಾರ

ನವದೆಹಲಿ: ನವೆಂಬರ್ 24: ಮೀಟೂ(#MeToo) ಅಭಿಯಾನದಲ್ಲಿ ಪರಸ್ಪರ ಆರೋಪ, ಪ್ರತ್ಯಾರೋಪಗಳನ್ನು ಮಾಡಿಕೊಂಡಿದ್ದ ಪತ್ರಕರ್ತೆ ಪ್ರಿಯಾ ರಮಣಿ ಹಾಗೂ ಕೇಂದ್ರ ಮಾಜಿ ಸಚಿವ ಎಂಜೆ ಅಕ್ಬರ್ ರಾಜಿ ಸಂಧಾನ ಒಪ್ಪಿಗೆ ಇಲ್ಲ ಎಂದು ಹೇಳಿದ್ದಾರೆ.

ತಮ್ಮ ವಿರುದ್ಧ ಆರೋಪ ಹೊರಿಸಿದ್ದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಎಂಜೆ ಅಕ್ಬರ್ ದೆಹಲಿ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಮಣಿ ಪರ ವಕೀಲರು ಅಕ್ಬರ್ ಗೆ ಬೇಕಾದರೆ ಅವರು ಪ್ರಕರಣವನ್ನು ವಾಪಸ್ ಪಡೆಯಲಿ ಎಂದು ಹೇಳಿದ್ದಾರೆ.

ಪ್ರಕರಣದ ಅಂತಿಮ ಹಂತದ ವಿಚಾರಣೆ ನಡೆಸುತ್ತಿರುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೇ ಭಾನುವಾರದಂದೂ ಎರಡೂ ಪಕ್ಷದವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಮುಂದಾಗುವ ಸಾಧ್ಯತೆಗಳಿವೆಯೇ ಎಂದು ಪ್ರಶ್ನಿಸಿತ್ತು.

Priya Ramani, MJ Akbar Refuse Settlement In Criminal Defamation Case

ಅಕ್ಬರ್ ಪರ ವಾದ ಮಂಡಿಸಿದ ಗೀತಾ ಲುಥ್ರಾ, ರಮಣಿ ಅವರು ತಮ್ಮ ಆರೋಪಗಳ ಬಗ್ಗೆ ಪಶ್ಚಾತ್ತಾಪ ಹೊಂದಿದ್ದರೆ, ತಮ್ಮ ಕಕ್ಷಿದಾರರಿಗೆ ಪ್ರಕರಣ ವಾಪಸ್ ಪಡೆಯುವುದಕ್ಕೆ ಸಲಹೆ ನೀಡುವುದನ್ನು ಪರಿಗಣಿಸುತ್ತೇನೆ ಎಂದು ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+