ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯಾರ್ಥಿಗಳ ಮೇಲೆ ಹಲ್ಲೆ: ಧರಣಿ ಕೂತ ಪ್ರಿಯಾಂಕಾ ಗಾಂಧಿ

|
Google Oneindia Kannada News

ನವದೆಹಲಿ, ಡಿಸೆಂಬರ್ 16: ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ದೆಹಲಿಯ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿ ಧರಣಿ ಪ್ರತಿಭಟನೆ ನಡೆಸಿದರು.

ದೆಹಲಿಯ ಇಂಡಿಯಾ ಗೇಟ್ ಮುಂದೆ ಧರಣಿ ಕೂತ ಪ್ರಿಯಾಂಕಾ ಗಾಂಧಿ, ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು 'ದೇಶದ ಆತ್ಮದ ಮೇಲೆ ನಡೆದ ಹಲ್ಲೆ' ಎಂದು ಬಣ್ಣಿಸಿದರು.

ಪೌರತ್ವದ 'ಪಂಜಿ'ಗೆ ಹೊತ್ತಿ ಉರಿದಿದ್ದು ಈಶಾನ್ಯವಷ್ಟೇ ಅಲ್ಲ ಪೌರತ್ವದ 'ಪಂಜಿ'ಗೆ ಹೊತ್ತಿ ಉರಿದಿದ್ದು ಈಶಾನ್ಯವಷ್ಟೇ ಅಲ್ಲ

ಪ್ರಿಯಾಂಕಾ ಗಾಂಧಿ ಜೊತೆಗೆ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್, ಅಹ್ಮದ್ ಪಟೇಲ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಟಾಪ್ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾದರು.

Priyanka Gandhi Sits On Road Protest Against CAA And Delhi Police

ಜಾಮಿಯಾ ಮಿಲ್ಲಾ ವಿವಿಯ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಂದೂ ಸಹ ಜಾಮಿಯಾ ಮಿಲ್ಲಾ ವಿದ್ಯಾರ್ಥಿಗಳು ಪೊಲೀಸರ ವಿರುದ್ಧ ಮತ್ತು ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ನರೇಂದ್ರ ಮೋದಿ ಸರಣಿ ಟ್ವೀಟ್ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ನರೇಂದ್ರ ಮೋದಿ ಸರಣಿ ಟ್ವೀಟ್

'ವಿದ್ಯಾರ್ಥಿಗಳ ಗ್ರಂಥಾಲಯದ ಒಳಕ್ಕೆ ನುಗ್ಗಿದಿರಿ, ಅವರನ್ನು ಎಳೆದು ಹೊರಕ್ಕೆ ತಂದು ಹಲ್ಲೆ ನಡೆಸಿದ್ದೀರಿ, ನಾನೂ ಸಹ ಮಕ್ಕಳ ತಾಯಿ, ದೃಶ್ಯಗಳನ್ನು ನೋಡಿ ಕರಳು ಕಿವುಚಿದಂತಾಗುತ್ತದೆ' ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

English summary
Congress leader Priyanka Gandhi sits for protest against Delhi police hit students. She said police entered university and trashed students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X