ಸರ್ಕಾರಿ ಬಂಗಲೆ ಖಾಲಿ ಮಾಡಲು ಸಮಯ ಕೇಳಿದ್ರಾ ಪ್ರಿಯಾಂಕಾ?
ಲಕ್ನೌ, ಜುಲೈ 14: ಪ್ರಿಯಾಂಕಾ ಗಾಂಧಿ ವಾಸವಾಗಿರುವ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿತ್ತು. ಈ ನೋಟಿಸ್ ಅನ್ವಯ ಆಗಸ್ಟ್ 1ರೊಳಗೆ ಕಾಂಗ್ರೆಸ್ ನಾಯಕಿ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕಿದೆ.
ಆದರೆ, ದೆಹಲಿಯ ಲೋಧಿ ಎಸ್ಟೇಟ್ನ ಬಂಗಲೆ ಖಾಲಿ ಮಾಡಲು ಇನ್ನು ಸ್ವಲ್ಪ ದಿನ ಕಾಲಾವಕಾಶ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಿಯಾಂಕಾ ವಾದ್ರಾ ಮನವಿ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ.
ಈ ಸುದ್ದಿಯನ್ನು ಪ್ರಿಯಾಂಕಾ ಗಾಂಧಿ ಮಂಗಳವಾರ ನಿರಾಕರಿಸಿದ್ದಾರೆ. 'ನಾನು ಯಾರಿಗೂ ಸಮಯ ಕೊಡಿ ಎಂದು ಮನವಿ ಮಾಡಿಲ್ಲ' ಎಂದು ವದಂತಿಗಳಗೆ ತೆರೆ ಎಳೆದಿದ್ದಾರೆ. ಮುಂದೆ ಓದಿ...

ಮೋದಿಗೆ ಮನವಿ ಮಾಡಿದ್ರಾ ಪ್ರಿಯಾಂಕಾ?
ಎಸ್ಪಿಜಿ ಭದ್ರತೆ ನಿಯಮದಡಿ ದೆಹಲಿಯ ಲೋಧಿ ಎಸ್ಟೇಟ್ನಲ್ಲಿರುವ ಸರ್ಕಾರಿ ಬಂಗಲೆಯನ್ನು ಆಗಸ್ಟ್ 1ರೊಳಗೆ ಖಾಲಿ ಮಾಡುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿತ್ತು. ಆದರೆ, ಈ ಅವಧಿಯನ್ನು ಮತ್ತಷ್ಟು ದಿನ ವಿಸ್ತರಣೆ ಮಾಡಬೇಕೆಂದು ಪ್ರಧಾನಿ ಮೋದಿಗೆ ಪ್ರಿಯಾಂಕಾ ಮನವಿ ಮಾಡಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ, ಈ ಸುದ್ದಿ ಸುಳ್ಳು ಎಂದು ಪ್ರಿಯಾಂಕಾ ಸ್ಪಷ್ಟಪಡಿಸಿದ್ದಾರೆ.

ಇದು ನಕಲಿ ಸುದ್ದಿ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ ''ಇದು ನಕಲಿ ಸುದ್ದಿ. ನಾನು ಸರ್ಕಾರಕ್ಕೆ ಅಂತಹ ಯಾವುದೇ ಮನವಿ ಮಾಡಿಲ್ಲ. ಜುಲೈ 1 ರಂದು ನನಗೆ ಹಸ್ತಾಂತರಿಸಿದ ಪತ್ರದ ಪ್ರಕಾರ, ಆಗಸ್ಟ್ 1 ರೊಳಗೆ ನಾನು #35 ಲೂದಿ ಎಸ್ಟೇಟ್ನಲ್ಲಿರುವ ಸರ್ಕಾರಿ ವಸತಿಯನ್ನು ಖಾಲಿ ಮಾಡುತ್ತೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಬರ್ಟ್ ವಾದ್ರಾ ಸಹ ಅದೇ ಹೇಳಿದ್ದಾರೆ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ''ಇದು ಸುಳ್ಳು ಸುದ್ದಿ, ನಾವು ಅವಧಿ ವಿಸ್ತರಣೆಗೆ ಮನವಿ ಮಾಡಿಲ್ಲ. 30 ದಿನದೊಳಗೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ಅದರಂತೆ ಒಂದು ವಾರಕ್ಕೆ ಮುಂಚೆಯೇ ನಾವು ಮನೆ ಬಿಟ್ಟು ಹೊರಡುತ್ತೇವೆ'' ಎಂದು ಹೇಳಿದ್ದಾರೆ

1997ರಲ್ಲಿ ಲೂದಿ ಎಸ್ಟೇಟ್ ಬಂಗಲೆ ನೀಡಲಾಗಿತ್ತು
ಪ್ರಿಯಾಂಕಾ ಗಾಂಧಿಗೆ ಒದಗಿಸಲಾಗಿದ್ದ ಎಸ್ಪಿಜಿ ಭದ್ರತೆ ಹಾಗು ಝೆಡ್ + ಸೆಕ್ಯುರಿಟಿ ಹಿಂದಕ್ಕೆ ಪಡೆಯಲಾಗಿದೆ. ಹಾಗಾಗಿ, ಸರ್ಕಾರಿ ವಸತಿ ಸೌಲಭ್ಯ ಇರುವುದಿಲ್ಲ. ಪ್ರಿಯಾಂಕಾ ಗಾಂಧಿಯವರಿಗೆ ಫೆಬ್ರವರಿ 21, 1997 ರಂದು ಎಸ್ಪಿಜಿ ಭದ್ರತಾ ನೆಲೆಯಲ್ಲಿ ಲೋಧಿ ಎಸ್ಟೇಟ್ ಬಂಗಲೆ ನೀಡಲಾಗಿತ್ತು. ಎಸ್ಪಿಜಿ ಭದ್ರತೆ ಎನ್ನುವುದು ಮಾಜಿ ಪ್ರಧಾನಿ ಮತ್ತು ಕುಟುಂಬಸ್ಥರಿಗೆ ನಿರ್ದಿಷ್ಟ ಅವಧಿಯವರೆಗೂ ನೀಡಲಾಗುವುದು ಭದ್ರತಾ ನಿಯಮ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications