ಮತದಾನೋತ್ತರ ಸಮೀಕ್ಷೆಯನ್ನು ತಿರಸ್ಕರಿಸಿದ ಪ್ರಿಯಾಂಕಾ ಗಾಂಧಿ
Recommended Video
ನವದೆಹಲಿ, ಮೇ 21: ಮತದಾನೋತ್ತರ ಸಮೀಕ್ಷೆ ಒಂದು ಗಾಳಿ ಸುದ್ದಿ ಇದನ್ನು ನಂಬಬೇಡಿ ಮೇ 23ರ ಫಲಿತಾಂಸದ ಬಗ್ಗೆ ಉತ್ತಮ ನಿರೀಕ್ಷೆ ಇಟ್ಟುಕೊಳ್ಳಿ ಎಂದು ಕಾರ್ಯಕರ್ತರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮನವಿ ಮಾಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಉತ್ತರ ಪ್ರದೇಶ ಸೇರಿ ದೇಶಾದ್ಯಂತ ಕಾಂಗ್ರೆಸ್ಗೆ ಮತ್ತೆ ಹೀನಾಯ ಸೋಲನ್ನು ಮತದಾನೋತ್ತರ ಸಮೀಕ್ಷೆಯಲ್ಲಿ ಉಲ್ಲೇಖಿಸಿದ್ದರಿಂದ ಪ್ರಿಯಾಂಕಾ ಈ ವಿಚಾರ ತಿಳಿಸಿದ್ದಾರೆ.
ಮೋದಿ ಬದಲು ಅಮಿತಾಬ್ ಬಚ್ಚನ್ ಅವರನ್ನು ಪ್ರಧಾನಿ ಮಾಡಬಹುದಿತ್ತು: ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ನ ಬಹುತೇಕ ನಾಯಕರು ಕೂಡ ಇದೇ ನಿಟ್ಟಿಲ್ಲಿ ಮಾತನಾಡಿದ್ದಾರೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೂಡ ಸಮೀಕ್ಷೆಯನ್ನು ಗಾಸಿಪ್ ಎಂದಿದ್ದಾರೆ. ಈಗ ಪ್ರಿಯಾಂಕಾ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕೇವಲ 2 ಸೀಟು ಗೆಲ್ಲಲಿದೆ ಅದರಲ್ಲೂ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿಗೆ ಗೆಲುವು ಸುಲಭವಲ್ಲ ಎನ್ನುವುದನ್ನೂ ಕೂಡ ಸಮೀಕ್ಷೆಗಳು ಹೇಳಿವೆ. ಈ ಬೆಳವಣಿಗೆ ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.
2019 ಎಕ್ಸಿಟ್ ಪೋಲ್ ಸರಾಸರಿ: 'ಚೌಕಿದಾರ್' ಮೋದಿ ಮತ್ತೊಮ್ಮೆ
ಸಮೀಕ್ಷೆಗಳು ವೈಜ್ಞಾನಿಕವಲ್ಲ, ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಸಮೀಕ್ಷೆಯಂತೆ ಭಾರತದ ನಡೆದ ಸಮೀಕ್ಷೆಗಳು ಕೂಡ ಸುಳ್ಳಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ.