ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಲಾಕೋಟ್ ವೈಮಾನಿಕ ದಾಳಿ ಮಾಹಿತಿ ಸೋರಿಕೆ: ವಿಪಕ್ಷಗಳ ಆರೋಪ

|
Google Oneindia Kannada News

ನವದೆಹಲಿ,ಜನವರಿ 17: ಬಾಲಾಕೋಟ್ ವೈಮಾನಿಕ ದಾಳಿ ಮಾಹಿತಿ ಸೋರಿಕೆಯಾಗಿತ್ತು ಎಂದು ವಿಪಕ್ಷ ನಾಯಕರು ಆರೋಪಿಸಿದ್ದಾರೆ.

ಹಾಗೆಯೇ ತನಿಖೆ ನಡೆಸಬೇಕು ಎಂದು ಒತ್ತಾಯಿಸಿರುವ ಅವರು, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಹಾಗೂ ಬಿಎಆರ್ ಸಿ ಯ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸ್ ಆಪ್ ಚಾಟ್ ನಲ್ಲಿ ಬಾಲಾಕೋಟ್ ವೈಮಾನಿಕ ದಾಳಿ ನಡೆಯುವುದಕ್ಕೂ 3 ದಿನಗಳ ಮುನ್ನವೇ ವೈಮಾನಿಕ ದಾಳಿ ಬಗ್ಗೆ ಪ್ರಸ್ತಾಪವಾಗಿರುವುದರ ಬಗ್ಗೆ ತನಿಖೆಯಾಗಬೇಕೆಂದು ಕಾಂಗ್ರೆಸ್ ಸೇರಿದಂತೆ ಹಲವು ವಿಪಕ್ಷಗಳು ಆಗ್ರಹಿಸುತ್ತಿವೆ.

ವಿಪಕ್ಷಗಳು ಇದನ್ನು ಮಹತ್ವದ ಸೇನಾ ಮಾಹಿತಿಯ ಸೋರಿಕೆ ಎಂದು ಆರೋಪಿಸುತ್ತಿದ್ದು ಈ ಕುರಿತು ತನಿಖೆಯಾಗಬೇಕೆಂಬ ಬಗ್ಗೆಯೂ ಆಗ್ರಹಿಸಿವೆ. ವಾಟ್ಸಾಪ್ ಚಾಟ್ ಗಳು ಮುಂಬೈ ಪೊಲೀಸರ ಚಾರ್ಟ್ ಶೀಟ್ ನ ಭಾಗವಾಗಿವೆ.

Probe Balakot Air Strike Info Leak: Opposition

ಪುಲ್ವಾಮ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಫೆ.26 ರಂದು ವೈಮಾನಿಕ ದಾಳಿ ನಡೆದಿತ್ತು. ಆದರೆ ಅರ್ನಬ್ ಗೋಸ್ವಾಮಿ ಹಾಗೂ ಪಾರ್ಥೋ ದಾಸ್ ಗುಪ್ತಾ ನಡುವಿನ ಫೆ.23 ರ ವಾಟ್ಸ್ ಆಪ್ ಚಾಟ್ ನಲ್ಲಿ ವೈಮಾನಿಕ ದಾಳಿ ಮಾದರಿಯ ದೊಡ್ಡ ದಾಳಿ ನಡೆಯಬಹುದು ಎಂಬ ಬಗ್ಗೆ ಉಲ್ಲೇಖಿಸಲಾಗಿತ್ತು.

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾಗದ ಬಾಲಾಕೋಟ್​ ಎಂಬಲ್ಲಿರುವ ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಅಪಾರ ಸಂಖ್ಯೆಯಲ್ಲಿ ಜೆಷ್​ ಎ ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ಮೃತಪಟ್ಟಿದ್ದಾರೆ ಎಂದು ಭಾರತ ಹೇಳಿತ್ತು. ಆದರೆ, ಭಾರತದ ದಾಳಿಯಿಂದ ಯಾರೊಬ್ಬರು ಮೃತಪಟ್ಟಿಲ್ಲ ಎಂದು ಪಾಕಿಸ್ತಾನ ವಾದಿಸಿತ್ತು.

English summary
Opposition parties, mainly the Congress, have demanded an investigation into the purported WhatsApp chat between Republic TV editor Arnab Goswami and former BARC CEO Partho Dasgupta in which the former is alleged to have told the incarcerated executive that India would strike at Pakistan three days before the actual airstrike against terror targets at Balakot in Pakistan occupied Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X