ನವದೆಹಲಿ ಹಿಂಸಾಚಾರ: ಪೊಲೀಸರ ವಾಹನಕ್ಕೆ ಬೆಂಕಿ
ನವದೆಹಲಿ, ಡಿಸೆಂಬರ್ 20: ಪೌರತ್ವ ಕಾಯ್ದೆ ಮತ್ತು ಎನ್ಆರ್ಸಿ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಹಿಂಸಾಚಾರವೂ ಮುಂದುವರೆದಿದೆ.
ದರಿಯಾಗಂಜ್, ಜಾಮಿಯಾ ಮಸೀದಿ ಪ್ರದೇಶ ಸೇರಿದಂತೆ ಹಲವು ಕಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸ್ ಚೌಕಿಗೆ ಸಹ ಪ್ರತಿಭಟನಾಕರರು ಬೆಂಕಿ ಹಚ್ಚಿಸಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಅಶ್ರುವಾಯು ಪ್ರಯೋಗವೂ ನಡೆದಿದೆ. ದೆಹಲಿಯಲ್ಲಿ ಪೊಲೀಸರು-ಪ್ರತಿಭಟನಾಕಾರರು ಎದುರುಬದುರಾಗಿದ್ದು, ಪರಸ್ಪರ ಕಲ್ಲು ತೂರಾಟ ಸಹ ನಡೆದಿದೆ.

ಜಾಮಿಯಾ ಮಸೀದಿ ಬಳಿ ಬೆಳಿಗ್ಗೆಯಿಂದಲೂ ಶಾಂತಿಯುತವಾಗಿಯೇ ನಡೆಯುತ್ತಿತ್ತು. ಆದರೆ ಸಂಜೆ ವೇಳೆಗೆ ಪ್ರತಿಭಟನಾಕಾರನ್ನು ಸೇರಿಕೊಂಡ ಈಶಾನ್ಯ ರಾಜ್ಯಗಳಿಂದ ಬಂದು ದೆಹಲಿಯಲ್ಲಿ ನೆಲೆಸಿರುವ ದೊಡ್ಡ ಗುಂಪೊಂದು ಸ್ಥಳಕ್ಕೆ ಬಂದು ಪ್ರತಿಭಟನೆಗೆ ಶುರುಮಾಡಿತು.
ನಂತರ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ ಡಿಸಿಪಿ ಕಚೇರಿ ಮುಂದೆ ನಿಲ್ಲಿಸಿದ್ದ ಗಾಡಿಗೆ ಬೆಂಕಿ ಹಚ್ಚಲಾಯಿತು. ನಂತರ ಪೊಲೀಸರು ಅಶ್ರುವಾಯು, ಲಾಠಿಚಾರ್ಜ್ ಮಾಡುವ ಮೂಲಕ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.












Click it and Unblock the Notifications