ಪುಲ್ವಾಮಾ ದಾಳಿ LIVE :ಯುದ್ಧದಂಥ ಸನ್ನಿವೇಶ, ಗಡಿಯಲ್ಲಿ ಪಾಕ್ ಸೈನಿಕರು
ನವದೆಹಲಿ, ಫೆಬ್ರವರಿ 16: "ದೊಡ್ಡ ತಪ್ಪು ಮಾಡಿದ್ದೀರಿ, ಅದಕ್ಕೆ ಅದಕ್ಕಿಂತ ಹೆಚ್ಚು ಬೆಲೆ ತೆರುತ್ತೀರಿ" ಎಂದು ಉಗ್ರರಿಗೆ ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವಂತಿಪೊರದಲ್ಲಿ ನಡೆದ ರಣಹೇಡಿಗಳ ಹೇಯಕೃತ್ಯದಿಂದ 44 ಸೈನಿಕರು ಹುತಾತ್ಮರಾಗಿದ್ದರು. ಸದ್ಯಕ್ಕೆ ಐವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆಯಾದರೂ, ಈ ಕೃತ್ಯ ಭಾರತದ ಇತಿಹಾಸದಲ್ಲೇ ಅತ್ಯಂತ ಹೇಯ ಎನ್ನಿಸಿದೆ.
19 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ದಾಳಿ
ಇಡೀ ದೇಶವೂ ಭಾರತಕ್ಕೆ ಬೆನ್ನೆಲುಬಾಗುವ ಭರವಸೆ ನೀಡಿದೆ. ಇಂದು ಬೆಳಿಗ್ಗೆ ಸಂಪುಟ ಸಮಿತಿ ಸಭೆ ನಡೆಸಿದ ನರೇಂದ್ರ ಮೋದಿ ಭಾರತದ ಮುಂದಿನ ನಡೆ ಏನು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾಯಕರು ತಮ್ಮೆಲ್ಲ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಯೋಧರ ಬಲಿದಾನಕ್ಕೆ ಮರುಗಿದ್ದಾರೆ.
ವಿಡಿಯೋ: ಅತ್ಮಾಹುತಿ ದಾಳಿಗೂ ಮುನ್ನ ಜೈಷ್ ಉಗ್ರ ಆದಿಲ್ ಹೇಳಿದ್ದೇನು?
ಈ ಕೃತ್ಯಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಸಿಆರ್ ಪಿಎಫ್(ಕೇಂದ್ರ ಮೀಸಲು ಪೊಲೀಸ್ ಪಡೆ) ಟ್ವೀಟ್ ಸಹ ಮಾಡಿದೆ. ಪುಲ್ವಾಮಾ ಘಟನೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
#WATCH Police in #Pulwama appeals to locals to leave the site of Pulwama encounter. Four 55 Rashtriya Rifles personnel have lost their lives & one injured and two terrorists neutralised in the ongoing operation. (Visuals deferred by unspecified time) #JammuAndKashmir pic.twitter.com/q2X13OitXX
— ANI (@ANI) February 18, 2019