ಸಂತಸ ಅರಳುವ ಸಮಯ, ಕೇಜ್ರಿವಾಲ್ ಕಾಲಿಗೆರಗಿದ ಭಗವಂತ ಸಿಂಗ್
ನವದೆಹಲಿ, ಮಾರ್ಚ್ 11: ಧುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ 48 ವರ್ಷದ ಭಗವಂತ ಸಿಂಗ್ ಮಾನ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗುತ್ತಿದ್ದಾರೆ.
ಪಂಚನದಿಗಳ ನಾಡು ಪಂಜಾಬ್ ರಾಜ್ಯದಲ್ಲಿ ಎಎಪಿ ತನ್ನ ಮೊದಲ ಪ್ರಯತ್ನದಲ್ಲೇ ಬಂಪರ್ ಹೊಡೆದಿದೆ. ಬಹುತೇಕ ಮಾರ್ಚ್ 16ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ, ಇಂದು ದೆಹಲಿಗೆ ತೆರಳಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ರನ್ನು ಭಗವಂತ್ ಭೇಟಿ ಮಾಡಿದರು.
2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಚುನಾವಣೆಯನ್ನು ಎದುರಿಸಿತ್ತು. ಆದರೆ ಸರ್ಕಾರ ರಚನೆ ಮಾಡುವಲ್ಲಿ ವಿಫಲವಾಗಿದೆ. ಈ ಬಾರಿ ಯಾವುದೇ ರಿಸ್ಕ್ ತೆಗೆದುಕೊಳ್ಳದೆ ಸಂಗ್ರೂರು ಸಂಸದರನ್ನು ಆಮ್ ಆದ್ಮಿ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಜನರ ಸಮೀಕ್ಷೆಯಿಂದ ಆಯ್ಕೆ ಮಾಡಿದ ಸಿಎಂ ಅಭ್ಯರ್ಥಿ ಎನಿಸಿಕೊಂಡಿದ್ದರು.
ಭಗವಂತ್ ಮನ್ ತಮ್ಮದೇ ಆದ ಚಾರಿಟಬಲ್ ಫೌಂಡೇಶನ್ ಅನ್ನು ಹೊಂದಿದ್ದಾರೆ, ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸಹಾಯ ಮಾಡುವ ಲೋಕ್ ಲೆಹರ್ ಫೌಂಡೇಶನ್ ಅದಾಗಿದೆ. ಈ ಹಿಂದೆ ಇರಾಕ್ನಿಂದ ಸಿಕ್ಕಿಬಿದ್ದ ಭಾರತೀಯರನ್ನು ಮರಳಿ ಕರೆತರಲು ಭಗವಂತ್ ಮಾನ್ ಕಾರ್ಯ ನಿರ್ವಹಿಸಿದ್ದರು.
#WATCH | Aam Aadmi Party CM candidate for Punjab Bhagwant Mann meets party convener Arvind Kejriwal and party leader Manish Sisodia, in Delhi pic.twitter.com/4WbTsMqPfM
— ANI (@ANI) March 11, 2022
ಕಾಮಿಡಿಯನ್-ನಟ-ರಾಜಕಾರಣಿಯಾಗಿ ಪರಿವರ್ತನೆಗೊಂಡ ಭಗವಂತ್ ಮಾನ್ ಹೆಚ್ಚಾಗಿ ವಿವಾದದ ವಿಚಾರಗಳಲ್ಲಿ ಸುದ್ದಿಯಾಗಿದ್ದಾರೆ. ಭಗವಂತ್ ಮಾನ್ ಒಂದು ದಶಕದ ಹಿಂದೆ 2011 ರಲ್ಲಿ ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್ ಮೂಲಕ ರಾಜಕೀಯ ಪ್ರವೇಶಿಸಿದರು. ಮೊದಲು 2012 ರಲ್ಲಿ ಪಂಜಾಬ್ನ ಲೆಹ್ರಾ ಕ್ಷೇತ್ರಕ್ಕೆ ಸ್ಪರ್ಧಿಸಿ, ಪರಾಭವವಗೊಂಡಿದ್ದರು.

ಬಳಿಕ 2014 ರಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಹಾಸ್ಯನಟ-ರಾಜಕಾರಣಿಯನ್ನು ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಭಗವಂತ್ ಮನ್ 2014 ರಲ್ಲಿ ಸಂಗ್ರೂರ್ ಕ್ಷೇತ್ರದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಿದ್ದರು. 2019 ರಲ್ಲಿ ಅದೇ ಸ್ಥಾನದಿಂದ ಮತ್ತೆ ಗೆಲುವು ಸಾಧಿಸಿದರು.
AAP's Punjab CM candidate Bhagwant Mann meets Delhi CM and party's national convener Arvind Kejriwal and party leader-Delhi Deputy CM Manish Sisodia in Delhi.
— ANI (@ANI) March 11, 2022
The party swept #PunjabElections2022 pic.twitter.com/k3VmZm04Wd
ಕೇಜ್ರಿ-ಭಗವಂತ್ ಸಮಾಗಮ
ಪಂಜಾಬ್ ರಾಜ್ಯ ಗೆಲುವು ಸಾಧಿಸಿದ ಬಳಿಕ ದೆಹಲಿಗೆ ತೆರಳಿ ಕೇಜ್ರಿವಾಲ್ ಅವರನ್ನು ಕಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಕೇಜ್ರಿವಾಲ್ ಜೊತೆಗಿದ್ದ ಮನೀಶ್ ಸಿಸೋಡಿಯಾ ಕೂಡಾ ಭಗವಂತ್ ಅವರನ್ನು ಸ್ವಾಗತಿ, ಅಪ್ಪಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ. ಕೇಜ್ರಿವಾಲ್ -ಮಾನ್ ಆಪ್ಪುಗೆ ವಿಡಿಯೋವೊಂದನ್ನು ಎಎನ್ಐ ಟ್ವೀಟ್ ಮಾಡಿದ್ದು, ವೈರಲ್ ಆಗುತ್ತಿದೆ. ಆದರೆ, ಬಹುತೇಕ ಗೇಲಿ ಮಾಡುವ ಕಾಮೆಂಟ್ ಗಳೇ ಬಂದಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications