'5 ವರ್ಷಗಳಲ್ಲಿ 2ನೇ ಬಾರಿ ಅಣುವಿಕಿರಣ ಸೋರಿಕೆ'
ನವದೆಹಲಿ, ಮೇ.29: ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಶ್ ಏರ್ವೇಸ್ ವಿಮಾನದಲ್ಲಿದ್ದ ಪ್ಯಾಕೇಜ್ ನಿಂದ ಅಣುವಿಕಿರಣ ಸೋರಿಕೆಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಕಳೆದ ಐದು ವರ್ಷಗಳಲ್ಲಿ ಎರಡನೇ ಬಾರಿಗೆ ಈ ರೀತಿ ಘಟನೆ ನಡೆದಿದೆ.
ವಿಮಾನದಲ್ಲಿದ್ದ ಮೆಡಿಕಲ್ ಕಿಟ್ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಔಷಧದಿಂದ ರೇಡಿಯೊ ಆಕ್ಟಿವ್ ವಿಕಿರಣ ಸೋರಿಕೆಯಾಗಿದೆ. ಈ ಹಿನ್ನಲೆಯಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಫೋರ್ಟಿಸ್ ಆಸ್ಪತ್ರೆಯ ರೋಗಿಗಳ ಚಿಕಿತ್ಸೆಗಾಗಿ ಈ ಕಿಟ್ ತರಲಾಗುತ್ತಿತ್ತು. ಘಟನೆ ನಡೆಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಎನ್ಡಿಆರ್ಎಫ್ ಪಡೆ ಮತ್ತು ಅಣು ಶಕ್ತಿ ಆಯೋಗದ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ವಿಮಾನ ನಿಲ್ದಾಣದಲ್ಲಿ ಉಂಟಾಗಿದ್ದ ಆತಂಕದ ವಾತಾವರಣ ಈಗ ತಿಳಿಯಾಗಿದೆ. ವಿಕಿರಣ ಸೋರಿಕೆ ಬಗ್ಗೆ ವಿವರಣೆ ಕೋರಿ ಫೋರ್ಟಿಸ್ ಆಸ್ಪತ್ರೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ರಾಜ್ನಾಥ್ ಸಿಂಗ್ ಹೇಳಿಕೆ: ರೇಡಿಯೋ ಆಕ್ಟಿವ್ ವಿಕಿರಣ ಉಪಕರಣವಿದ್ದ 10 ಪ್ಯಾಕೆಟ್ ಗಳನ್ನು ವಿಶೇಷ ಮೆಡಿಕಲ್ ಕಿಟ್ ಗಳ ಪೈಕಿ 4 ಪ್ಯಾಕ್ ಗಳಲ್ಲಿ ವಿಕಿರಣ ಸೋರಿಕೆಯಾಗಿತ್ತು. ಈಗ ವಿಕಿರಣ ಪ್ರಸಾರವನ್ನು ತಡೆಯಲಾಗಿದೆ. ಜನತೆ ಆತಂಕಪಡಬೇಕಾಗಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
2010ರಲ್ಲೂ ಸೋರಿಕೆಯಾಗಿತ್ತು: ದೆಹಲಿಯ ಮಾಯಾಪುರಿ ಪ್ರದೇಶದಲ್ಲಿ 2010ರಲ್ಲಿ ಇದೇ ರೀತಿ ಪ್ರಕರಣ ನಡೆದಿತ್ತು. ಕೈಗಾರಿಕಾ ಪ್ರದೇಶದಲ್ಲಿ ವಿಕಿರಣ ಸೋರಿಕೆಯಿಂದ ಅನೇಕ ಜನರು ಗಾಯಗೊಂಡಿದ್ದರು, ಉಸಿರಾಟದ ತೊಂದರೆಯಿಂದ ಓರ್ವ ವ್ಯಕ್ತಿ ಮೃತಪಟ್ಟಿದ್ದ. ಅಣುವಿಕಿರಣ ಪದಾರ್ಥ ಕೋಬಾಲ್ಟ್ 60 ಸೋರಿಕೆಯಾದ ಪರಿಣಾಮ ಸಮಸ್ಯೆ ಉಂಟಾಗಿತ್ತು. ಈಗ ಮತ್ತೊಮ್ಮೆ ಇಂಥದ್ದೇ ಸಮಸ್ಯೆ ಎದುರಾಗಿದ್ದು, ಅಣು ವಿಕಿರಣ ಸೋರಿಕೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. (ಒನ್ ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications