ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಸರಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೊಲೆಗೆ ರಾಹುಲ್ ಆಕ್ರೋಶ

|
Google Oneindia Kannada News

ನವದೆಹಲಿ, ಫೆ.18: ಕರ್ನಾಟಕ-ಕೇರಳ ಗಡಿಯ ಕಾಸರಗೋಡಿನಲ್ಲಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದಾರೆ.

ಕಾಸರಗೋಡಿನಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆ ಕಾಸರಗೋಡಿನಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆ

ಈ ಕುರಿತು ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಹಂತಕರಿಗೆ ಶಿಕ್ಷೆ ಕೊಡಿಸುವವರೆಗೆ ನಮ್ಮ ಪಕ್ಷ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ, ಕಾಸರಗೋಡುವಿನಲ್ಲಿ ನಮ್ಮ ಯುವ ಕಾಂಗ್ರೆಸ್ ಕುಟುಂಬದ ಇಬ್ಬರು ಸದಸ್ಯರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹತರಾದ ಯುವಕರ ಕುಟುಂಬಗಳಿಗೆ ಕಾಂಗ್ರೆಸ್ ನೈತಿಕ ಬೆಂಬಲ ನೀಡಲಿದ ಎಂದಿದ್ದಾರೆ.

ಭಾನುವಾರ ರಾತ್ರಿ ಕರ್ನಾಟಕ-ಕೇರಳ ಗಡಿಯ ಕಾಸರಗೋಡಿನಲ್ಲಿ ದುಷ್ಕರ್ಮಿಗಳು ಕೃಪೇಶ್ ಮತ್ತು ಶರತ್ ಲಾಲ್ ಎಂಬ ಯುವ ಕಾರ್ಯಕರ್ತರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

Rahul express his anger on congress workers murder in Kasaragodu

ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ಕಾಂಗ್ರೆಸ್ ಇಂದು ಕೇರಳ ಬಂದ್‌ಗೆ ಕರೆ ಕೊಟ್ಟಿದ್ದು, ವಿವಿಧೆಡೆ ಹರತಾಳ ನಡೆಯುತ್ತಿದೆ. ಕೃಪೇಶ್ ಮತ್ತು ಶರತ್‍ಲಾಲ್ ಹತ್ಯೆಗೆ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಿ ಕಾಸರಗೋಡು ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಪ್ರತಿಭಟನೆ ಮೆರವಣಿಗೆ ನಡೆಸಿದೆ.

ಹಂತಕರನ್ನು ಕಾನೂನಿಗೆ ಒಪ್ಪಿಸುವ ವರೆಗೆ ತನಕ ಪಕ್ಷ ವಿಶ್ರಾಂತಿ ಪಡೆಯುವುವುದಿಲ್ಲ ಎಂದು ಹೇಳಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆಯನ್ನು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲ ಉಗ್ರವಾಗಿ ಖಂಡಿಸಿದ್ದಾರೆ.

English summary
Two Youth Congress Workers Hacked To Death In Kerala, Aicc president Rahul gandhi express his anger over murder by his tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X