ಕಾಸರಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೊಲೆಗೆ ರಾಹುಲ್ ಆಕ್ರೋಶ
ನವದೆಹಲಿ, ಫೆ.18: ಕರ್ನಾಟಕ-ಕೇರಳ ಗಡಿಯ ಕಾಸರಗೋಡಿನಲ್ಲಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದಾರೆ.
ಕಾಸರಗೋಡಿನಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆ
ಈ ಕುರಿತು ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ಹಂತಕರಿಗೆ ಶಿಕ್ಷೆ ಕೊಡಿಸುವವರೆಗೆ ನಮ್ಮ ಪಕ್ಷ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ, ಕಾಸರಗೋಡುವಿನಲ್ಲಿ ನಮ್ಮ ಯುವ ಕಾಂಗ್ರೆಸ್ ಕುಟುಂಬದ ಇಬ್ಬರು ಸದಸ್ಯರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹತರಾದ ಯುವಕರ ಕುಟುಂಬಗಳಿಗೆ ಕಾಂಗ್ರೆಸ್ ನೈತಿಕ ಬೆಂಬಲ ನೀಡಲಿದ ಎಂದಿದ್ದಾರೆ.
The brutal murder of two members of our Youth Congress family in Kasargod, Kerala is shocking. The Congress Party stands in solidarity with the families of these two young men & I send them my deepest condolences. We will not rest till the murderers are brought to justice.
— Rahul Gandhi (@RahulGandhi) February 18, 2019
ಭಾನುವಾರ ರಾತ್ರಿ ಕರ್ನಾಟಕ-ಕೇರಳ ಗಡಿಯ ಕಾಸರಗೋಡಿನಲ್ಲಿ ದುಷ್ಕರ್ಮಿಗಳು ಕೃಪೇಶ್ ಮತ್ತು ಶರತ್ ಲಾಲ್ ಎಂಬ ಯುವ ಕಾರ್ಯಕರ್ತರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.
ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ಕಾಂಗ್ರೆಸ್ ಇಂದು ಕೇರಳ ಬಂದ್ಗೆ ಕರೆ ಕೊಟ್ಟಿದ್ದು, ವಿವಿಧೆಡೆ ಹರತಾಳ ನಡೆಯುತ್ತಿದೆ. ಕೃಪೇಶ್ ಮತ್ತು ಶರತ್ಲಾಲ್ ಹತ್ಯೆಗೆ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಿ ಕಾಸರಗೋಡು ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಪ್ರತಿಭಟನೆ ಮೆರವಣಿಗೆ ನಡೆಸಿದೆ.
ಹಂತಕರನ್ನು ಕಾನೂನಿಗೆ ಒಪ್ಪಿಸುವ ವರೆಗೆ ತನಕ ಪಕ್ಷ ವಿಶ್ರಾಂತಿ ಪಡೆಯುವುವುದಿಲ್ಲ ಎಂದು ಹೇಳಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆಯನ್ನು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲ ಉಗ್ರವಾಗಿ ಖಂಡಿಸಿದ್ದಾರೆ.