ರಾಹುಲ್ ಗಾಂಧಿ ದಲ್ಲಾಳಿಗಳ ಕುಟುಂಬದಿಂದ ಬಂದವರು: ಪಾತ್ರಾ
ನವದೆಹಲಿ, ಅಕ್ಟೋಬರ್ 12: ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಆರೋಪಗಳೆಲ್ಲ ಸುಳ್ಳು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಒಂದು ದಲ್ಲಾಳಿಗಳ ಕುಟುಂಬದಿಂದ ಬಂದಿದ್ದಾರೆ. ಅವರ ತಂದೆ ಮತ್ತು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರು ರಕ್ಷಣಾ ಒಪ್ಪಂದಗಳಲ್ಲಿ ದಲ್ಲಾಳಿಯಾಗಿದ್ದರು ಎಂದು ಪಾತ್ರಾ ಹೇಳಿದ್ದಾರೆ.
2014 ರವರೆಗೂ ಈ ಕುಟುಂಬ ಎಲ್ಲಾ ರಕ್ಷಣಾ ಒಪ್ಪಂದಗಳಲ್ಲೂ ಹಣ ಮಾಡಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರನ್ನೂ ಇದೇ ಮನಸ್ಥಿತಿಯಿಂದ ನೋಡುತ್ತಿದೆ ಎಂದು ಪಾತ್ರಾ ಆರೋಪಿಸಿದರು.

ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಗುರುವಾರ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ ನಂತರ ಪ್ರತಿಯಾಗಿ ತಾವೂ ಪತ್ರಿಕಾಗೋಷ್ಠಿ ನಡೆಸಿದ ಸಂಬಿತ್ ಪಾತ್ರ, ರಾಹುಲ್ ಅವರ ಮೆಲೆ ಹರಿಹಾಯ್ದರು.
ರಾಹುಲ್ ಗಾಂಧಿ ಅವರು ತಮ್ಮ ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲು ದೇಶದ ಭದ್ರತೆಯ ವಿಷಯದಲ್ಲಿ ವೃಥಾ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಪತ್ರಿಕಾಗೋಷ್ಠಿಯ ತುಂಬ ಸುಳ್ಳೇ ತುಂಬಿದ್ದು ಎಂದು ಪಾತ್ರಾ ಹೇಳಿದ್ದಾರೆ.
ರಫೇಲ್ ಡೀಲ್ ನಲ್ಲಿ ಬಹುಕೋಟಿ ಭ್ರಷ್ಟಾಚಾರವಾಗಿದೆ ಮತ್ತು ಈ ದೇಶದ ಪ್ರಧಾನಿ ಒಬ್ಬ ಭ್ರಷ್ಟ ಎಂದು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದರು.
ರಫೇಲ್ ಯುದ್ಧ ವಿಮಾನ ಖರೀದಿಗಾಗಿ ಫ್ರಾನ್ಸ್ ನೊಂದಿಗೆ ಮಾಡಿಕೊಂಡ ಒಪ್ಪಂದದಲ್ಲಿ ಬಹುಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಹರಿಹಾಯುತ್ತಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications