ರಾಹುಲ್ ಗಾಂಧಿ ಉತ್ತರಾಖಂಡ್ 'ಟೆಂಟ್' ನಲ್ಲಿ ಪತ್ತೆ!
ನವದೆಹಲಿ, ಫೆ.25: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿದ್ದಾರೆ? ಎಂಬ ಪ್ರಶ್ನೆಗೆ ಉತ್ತರ ಉತ್ತರಾಖಂಡ್ ರಾಜ್ಯದಿಂದ ಬಂದಿದೆ. ಈ ಮಧ್ಯೆ ಈ ಸುದ್ದಿಯನ್ನು ಪರಿಶೀಲಿಸಿ ನೋಡುವುದು ಬಾಕಿಯಿದೆ.
ಲೋಕಸಭೆ ಕಲಾಪಕ್ಕೆ ಗೈರು ಹಾಜರಾದ ಕಾಂಗ್ರೆಸ್ ಯುವರಾಜ ಬೆಟ್ಟದ ತಪ್ಪಲಿನಲ್ಲಿ ಟೆಂಟ್ ಹಾಕಿಕೊಂಡು ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಸದಸ್ಯ ಜಗದೀಶ್ ಕುಮಾರ್ ಶರ್ಮ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಘೋಷಿಸಿದ್ದಾರೆ. ಆದರೆ, ಜಗದೀಶ್ ಟ್ವೀಟ್ ಮಾಡಿದ ಚಿತ್ರಗಳೆಲ್ಲ ಹಳೆ ಚಿತ್ರಗಳು ಎಂದು ಕಾಂಗ್ರೆಸ್ ಪಕ್ಷ ಸ್ಪಷ್ಟಪಡಿಸಿದೆ.

ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್ ಟಿಯುಸಿ) ಉಪಾಧ್ಯಕ್ಷ ಜಗದೀಶ್ ಕುಮಾರ್ ಶರ್ಮ ಅವರು ರಾಹುಲ್ ಗಾಂಧಿ ಅವರು ವಿದೇಶಕ್ಕೆ ತೆರಳಿಲ್ಲ. ಇಲ್ಲೇ ಉತ್ತರಾಖಂಡ್ ರಾಜ್ಯದ ಬೆಟ್ಟದ ತಪ್ಪಲಿನಲ್ಲಿದ್ದಾರೆ. ಪ್ರತಿವರ್ಷ ಉತ್ತರಾಖಂಡ್ ರಾಜ್ಯಕ್ಕೆ ಭೇಟಿ ನೀಡುತ್ತಾರೆ ಎಂದು ಶರ್ಮ ಹೇಳಿದ್ದಾರೆ.
— jagdishkumarsharma (@jagdishkumarsh4) February 24, 2015 ವಿದೇಶಿ ಪ್ರವಾಸದ ಸುದ್ದಿ:
ರಾಹುಲ್ ಗಾಂಧಿ ಅವರು ಥೈಲ್ಯಾಂಡ್ ಅಥವಾ ಸಿಂಗಪುರಕ್ಕೆ ತೆರಳುತ್ತಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಥಾಯ್ ಏರ್ ವೇಸ್ ನಲ್ಲಿ ಮಾರ್ಚ್ 9ಕ್ಕೆ ಬಿಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಆಗಿದೆ ಎನ್ನಲಾಗಿತ್ತು.
ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ನಡೆಯುವಾಗ ಕಾಂಗ್ರೆಸ್ ಯುವರಾಜ ಈ ರೀತಿ ಪ್ರವಾಸ ನಿರತರಾಗಿರುವ ಬಗ್ಗೆ ಹಿರಿಯ ಕಾಂಗ್ರೆಸ್ಸಿಗರಲ್ಲಿ ಅಸಮಾಧಾನ ಮೂಡಿಸಿದೆ.
— jagdishkumarsharma (@jagdishkumarsh4) February 24, 2015 ಲೋಕಸಭೆ ಚುನಾವಣೆ ಹಾಗೂ ದೆಹಲಿ ಚುನಾವಣೆ ಫಲಿತಾಂಶದ ಹೊಡೆತದಿಂದ ಇನ್ನೂ ಕಾಂಗ್ರೆಸ್ ಚೇತರಿಕೆ ಕಂಡಿಲ್ಲ. ಪರಿಸ್ಥಿತಿ ಹೀಗಿರುವಾಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಕೂಡಾ ಚರ್ಚೆ ನಡೆದಿದೆ. ಪ್ರಿಯಾಂಕಾ ಗಾಂಧಿ ಅವರನ್ನು ಕರೆ ತರುವಂತೆ ಕಾಂಗ್ರೆಸ್ಸಿನ ಒಂದು ಬಣ ಬಲವಾಗಿ ಆಗ್ರಹಿಸುತ್ತಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications