ರಾಹುಲ್ ಗಾಂಧಿ ವ್ಯಂಗ್ಯದ ಬಲೆಗೆ ಸಿಕ್ಕಿದ 'ಕಪ್ಪುಹಣ ಮತ್ತು ಮೋದಿ!'
ನವದೆಹಲಿ, ಜೂನ್ 30: ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಿಚಾಯಿಸುವುದೇನು ಹೊಸ ವಿಷಯವಲ್ಲ. ಇದೀಗ ಸ್ವಿಸ್ ಬ್ಯಾಂಕಿನ ಕಪ್ಪು ಹಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ಮೋದಿಯವರನ್ನು ಲೇವಡಿ ಮಾಡಿದ್ದಾರೆ.
2017ರಲ್ಲಿ ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರು ಇರಿಸಿರುವ ಹಣದ ಪ್ರಮಾಣ ಶೇ 50ರಷ್ಟು ಹೆಚ್ಚಳವಾಗಿದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
'2018 ರಲ್ಲಿ ಸ್ವಿಸ್ ಬ್ಯಾಂಕಿನಲ್ಲಿರುವ ಠೇವಣಿಯೆಲ್ಲ ಅಧಿಕೃತ(ವೈಟ್ ಮನಿ) ಹಣವಾಗಲಿದ್ದು, ಕಪ್ಪು ಹಣ ಇರುವುದೇ ಇಲ್ಲ, ಆದ್ದರಿಂದ ಅದನ್ನು ತರುವ ಪ್ರಮೇಯವೇ ಬರುವುದಿಲ್ಲ' ಎಂದು ಮೋದಿ ಹೇಳಿದ್ದಾರೆ ಎಂದು ರಾಹುಲ್ ಲೇವಡಿ ಮಾಡಿ ಟ್ವೀಟಿಸಿದ್ದಾರೆ!

ರಾಹುಲ್ ಟ್ವೀಟ್ ನಲ್ಲೇನಿದೆ?
2014 ರಲ್ಲಿ ಮೋದಿ ಹೇಳಿದ್ದರು: ಸ್ವಿಸ್ ಬ್ಯಾಂಕಿನಿಂದ ಎಲ್ಲಾ ಕಪ್ಪುಹಣವನ್ನು ತಂದು ಪ್ರತಿ ಭಾರತೀಯನ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ.
2016 ರಲ್ಲಿ ಹೇಳಿದರು ಅಪನಗದೀಕರಣ ಎಲ್ಲಾ ಕಪ್ಪು ಹಣದ ಸಮಸ್ಯೆಯನ್ನು ನೀಗಿಸುತ್ತದೆ ಎಂದು.
|
ಬಿಜೆಪಿ ಏನೆನ್ನುತ್ತದೆ?
ಕಪ್ಪು ಹಣದ ಕುರಿತಂತೆ ಭಾರತ ಮತ್ತು ಸ್ವಿಟ್ಜರ್ಲೆಂಡ್ ನಡುವೆ ಒಪ್ಪಂದ ನಡೆದಿದ್ದು, ಮುಂದಿನ ಹಣಕಾಸು ವರ್ಷದ ಅಂತ್ಯದ ವೇಳೆಗೆ ಎಲ್ಲ ಮಾಹಿತಿ ಲಭ್ಯವಾಗಲಿವೆ ಎಂದು ಹಣಕಾಸು ಸಚಿವ ಪಿಯೂಷ್ ಗೋಯಲ್ ಹೇಳಿದ್ದರು. ಮುಂಬರುವ ಲೋಕಸಭಾ ಚುನಾವಣೆಯ ಹೊತ್ತಲ್ಲೇ ಈ ವರದಿಯೂ ಬಂದರೆ ಅದು ಆಡಳಿತ ಪಕ್ಷಕ್ಕೆ ಲಾಭವಾಗಲಿದೆ. ಆದರೆ ಇಷ್ಟು ದಿನ ಸುಮ್ಮನಿದ್ದು, ಚುನಾವಣೆಯ ವರ್ಷ ಈ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಬಿಜೆಪಿ ಹೇಳಿರುವುದು ವಿಪಕ್ಷಗಳನ್ನು ಕೆಂಡವಾಗಿಸಿದೆ. ಆದರೆ 'ಉಭಯ ದೇಶಗಳ ನಡುವೆ ಒಪ್ಪಂದ ಇದ್ದಿದ್ದೇ ಹಾಗೆ, ಸ್ವಿಸ್ ಹಣದ ಬಗ್ಗೆ ನಾವು ಈಗಾಗಲೇ ಸಾಕಷ್ಟು ಪ್ರಯತ್ನ ಮಾಡಿದ್ದೇವೆ' ಎಂದು ಬಿಜೆಪಿ ಸಮಜಾಯಿಷಿ ನೀಡಿದೆ.
|
ಕಪ್ಪು ಹಣವನ್ನು ನೀವೇ ಕಳಿಸಿ, ನೀವೇ ವಾಪಸ್ ತರಿಸುತ್ತೀರಾ?
ನೀವು ಕಪ್ಪು ಹಣ ವಾಪಸ್ ತರುವುದಾಗಿ ಪ್ರಾಮಿಸ್ ಮಾಡಿ ನಾಲ್ಕು ವರ್ಷಗಳು ಕಳೆದಿವೆ ಅರುಣ್ ಜೇಟ್ಲಿಯವರೇ. ಬ್ಲಾಕ್ ಮನಿಯನ್ನು ವಿದೇಶಗಳಿಗೆ ಕಳಿಸಲು ಸುಲಭವಾಗುವಂತೆ ಮಾಡಿದವರೇ ನೀವು. ಇದೀಗ ನೀವೇ ಅದನ್ನು ವಾಪಸ್ ತರುವುದಾಗಿ ಹೇಳುತ್ತೀರಾ? ನಿಮ್ಮನ್ನು ಇನ್ನು ಮುಂದೆ ಯಾರೂ ನಂಬುವುದಿಲ್ಲ ಎಂದಿದ್ದಾರೆ ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್.
|
ಅಪನಗದೀಕರಣದ ಹಣ ಎಲ್ಲಿ ಹೋಯ್ತು?
ಭಾರತೀಯರ ಕಪ್ಪು ಹಣ ಸ್ವಿಸ್ ಬ್ಯಾಂಕಿನಲ್ಲಿ ಶೇ.50 ರಷ್ಟು ಹೆಚ್ಚಾಗಿದೆಯಂತೆ. ಇದು ನನ್ನ ಅಭಿಪ್ರಾಯವಲ್ಲ. ಸ್ವಿಸ್ ಬ್ಯಾಂಕ್ ನೀಡಿದ ವರದಿ. ನರೇಂದ್ರ ಮೋದಿ ಮತ್ತು ಅರುಣ್ ಜೇಟ್ಲಿ ಅವರೇ ದಯವಿಟ್ಟು ಹೇಳಿ... ನಿಮ್ಮ ಅಪನಗದೀಕರಣದ ಹಣ ಎಲ್ಲಿ ಹೋಯಿತು? ಎಂದು ಪ್ರಶ್ನಿಸಿದ್ದಾರೆ ವಿಷ್ಣು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications