ಫೇಸ್ ಬುಕ್ ನಲ್ಲಿ ಸ್ಯಾಮ್ ಪಿತ್ರೋಡಾಗೆ ರಾಹುಲ್ ಗಾಂಧಿ ತಪರಾಕಿ
ನವದೆಹಲಿ, ಮೇ 11: ಸಿಖ್ ಹತ್ಯಾಕಾಂಡದ ಕುರಿತು 'ಹುವಾ ತೋ ಹುವಾ'(ಆಗಿದ್ದು ಆಯ್ತು, ಏನಿವಾಗ?) ಎಂಬ ಹೇಳಿಕೆ ನೀಡಿದ್ದ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ.
"ನನ್ನ ಪ್ರಕಾರ ಸ್ಯಾಮ್ ಪಿತ್ರೋಡಾ ಅವರು ಹೇಳಿದ್ದು ಸಂಪೂರ್ಣವಾಗಿ ತಪ್ಪು. ಅದಕ್ಕಾಗಿ ಅವರು ಕ್ಷಮೆ ಕೇಳಲೇಬೇಕು. 1984 ರಲ್ಲಿ ಭೀಕರ ಹಿಂಸೆಗೆ ಕಾರಣವಾಗಿದ್ದು ಇಂದು ಅನಗತ್ಯ ದುರಂತ. ನ್ಯಾಯ ಸಿಗಬೇಕು. 1984 ರ ಹಿಂಸೆಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಮಾಜಿ ಪ್ರಧಾನಿ ನಮೋಹನ್ ಸಿಂಗ್ ಅವರು ಈ ಬಗ್ಗೆ ಕ್ಷಮೆ ಕೇಳಿದ್ದಾರೆ. ನನ್ನ ತಾಯಿ ಸೋನಿಯಾ ಗಾಂಧಿ ಅವರೂ ಕ್ಷಮೆ ಕೇಳಿದ್ದಾರೆ. ನಾವೆಲ್ಲರೂ ನಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇವೆ. 1984 ರ ಘಟನೆ ಹೀನಾತಿಹೀನ ದುರಂತ ಮತ್ತು ಅದು ಎಂದಿಗೂ ನಡೆಯಬಾರದಿತ್ತು ಎಂದು.

ಇದೀಗ ಸ್ಯಾಮ್ ಪಿತ್ರೋಡಾ ಹೇಳಿದ್ದನ್ನು ಎಂದಿಗೂ ಒಪ್ಪುವುದಕ್ಕೆ ಸಾಧ್ಯವಿಲ್ಲ. ಅದನ್ನು ನಾವು ವಿರೋಧಿಸುತ್ತೇವೆ. ಈ ಬಗ್ಗೆ ನಾನು ಅವರ ಬಳಿ ನೇರವಾಗಿಯೇ ಮಾತನಾಡಿದ್ದೇನೆ. ಅದಕ್ಕಾಗಿ ಅವರು ಕ್ಷಮೆ ಕೇಳಬೇಕು ಎಂದೂ ಹೇಳಿದ್ದೇನೆ" ಎಂದು ರಾಹುಲ್ಲ ಗಾಂಧಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಈಗಾಗಲೇ ತಮ್ಮ ಹೇಳಿಕೆಯ ಬಗ್ಗೆ ಕ್ಷಮೆ ಯಾಚಿಸಿರುವ ಕಾಂಗ್ರೆಸ್ ನ ಸಾಗರೋತ್ತರ ಅಧ್ಯಕ್ಷ ಸ್ಯಾಮ್ ಪಿತ್ರೋಡಾ, "ನನಗೆ ಹಿಂದಿ ಸರಿಯಾಗಿ ಬರುವುದಿಲ್ಲ. ನಾನು 'ಜೋ ಹುವಾ ವೋ ಬುರಾ ಹುವಾ'(ಅಂದು ಏನಾಗಿತ್ತೋ ಅದು ಖಂಡನೀಯ) ಎಂದು ಹೇಳಲು ಹೊರಟಿದ್ದೆ. ಆದರೆ ನನಗೆ ಬುರಾ ಎಂಬ ಪದ ನೆನಪಾಗಲಿಲ್ಲ. ಆದ್ದರಿಂದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ" ಎಂದಿದ್ದಾರೆ.
1984 ರ ಸಿಖ್ ದಂಗೆಯಲ್ಲಿ, ಸಿಖ್ಕರನ್ನು ಕೊಲ್ಲುವಂತೆ ಆದೇಶ ನೀಡಿದ್ದೇ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಸ್ಯಾಮ್ ಪಿತ್ರೋಡಾ, "ಆಗಿದ್ದೆಲ್ಲ ಆಗಿಹೋಯ್ತು, ಭೂತಕಾಲದ ಬಗ್ಗೆ ಮಾತನಾಡಿ ಏನು ಪ್ರಯೋಜನ(ಹುವಾ ತೋ ಹುವಾ)?" ಎಂದು ಪ್ರಶ್ನಿಸಿದ್ದರು.
ಅವರ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಈ ಬಗ್ಗೆ ಇಂದು ಹರ್ಯಾಣದಲ್ಲಿ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೊದಿ, "ಕಾಂಗ್ರೆಸ್ ನ ಹಿರಿಯ ನಾಯಕರು, ಗಾಂಧಿ ಕುಟುಂಬದ ಆಪ್ತರು ನೀಡಿದ ಹುವಾ ತೋ ಹುವಾ ಎಂಬ ಮೂರು ಪದ ಸಾಕು, ಕಾಂಗ್ರೆಸ್ಸಿಗರ ಮನಸ್ಥಿತಿ, ನಡವಳಿಕೆಯನ್ನು ಅರಿಯುವುದಕ್ಕೆ. ಅವರ ದುರಹಂಕಾರಕ್ಕೆ ಇದೇ ಸಾಕ್ಷಿ" ಎಂದಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications