ಫೇಸ್ ಬುಕ್ ನಲ್ಲಿ ಸ್ಯಾಮ್ ಪಿತ್ರೋಡಾಗೆ ರಾಹುಲ್ ಗಾಂಧಿ ತಪರಾಕಿ
ನವದೆಹಲಿ, ಮೇ 11: ಸಿಖ್ ಹತ್ಯಾಕಾಂಡದ ಕುರಿತು 'ಹುವಾ ತೋ ಹುವಾ'(ಆಗಿದ್ದು ಆಯ್ತು, ಏನಿವಾಗ?) ಎಂಬ ಹೇಳಿಕೆ ನೀಡಿದ್ದ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ.
"ನನ್ನ ಪ್ರಕಾರ ಸ್ಯಾಮ್ ಪಿತ್ರೋಡಾ ಅವರು ಹೇಳಿದ್ದು ಸಂಪೂರ್ಣವಾಗಿ ತಪ್ಪು. ಅದಕ್ಕಾಗಿ ಅವರು ಕ್ಷಮೆ ಕೇಳಲೇಬೇಕು. 1984 ರಲ್ಲಿ ಭೀಕರ ಹಿಂಸೆಗೆ ಕಾರಣವಾಗಿದ್ದು ಇಂದು ಅನಗತ್ಯ ದುರಂತ. ನ್ಯಾಯ ಸಿಗಬೇಕು. 1984 ರ ಹಿಂಸೆಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಮಾಜಿ ಪ್ರಧಾನಿ ನಮೋಹನ್ ಸಿಂಗ್ ಅವರು ಈ ಬಗ್ಗೆ ಕ್ಷಮೆ ಕೇಳಿದ್ದಾರೆ. ನನ್ನ ತಾಯಿ ಸೋನಿಯಾ ಗಾಂಧಿ ಅವರೂ ಕ್ಷಮೆ ಕೇಳಿದ್ದಾರೆ. ನಾವೆಲ್ಲರೂ ನಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇವೆ. 1984 ರ ಘಟನೆ ಹೀನಾತಿಹೀನ ದುರಂತ ಮತ್ತು ಅದು ಎಂದಿಗೂ ನಡೆಯಬಾರದಿತ್ತು ಎಂದು.
ಸಿಖ್ ಹತ್ಯಾಕಾಂಡ ಕುರಿತ ಹೇಳಿಕೆ: ಸ್ಯಾಮ್ ಪಿತ್ರೋಡಾ ಕ್ಷಮೆ ಯಾಚನೆ
ಇದೀಗ ಸ್ಯಾಮ್ ಪಿತ್ರೋಡಾ ಹೇಳಿದ್ದನ್ನು ಎಂದಿಗೂ ಒಪ್ಪುವುದಕ್ಕೆ ಸಾಧ್ಯವಿಲ್ಲ. ಅದನ್ನು ನಾವು ವಿರೋಧಿಸುತ್ತೇವೆ. ಈ ಬಗ್ಗೆ ನಾನು ಅವರ ಬಳಿ ನೇರವಾಗಿಯೇ ಮಾತನಾಡಿದ್ದೇನೆ. ಅದಕ್ಕಾಗಿ ಅವರು ಕ್ಷಮೆ ಕೇಳಬೇಕು ಎಂದೂ ಹೇಳಿದ್ದೇನೆ" ಎಂದು ರಾಹುಲ್ಲ ಗಾಂಧಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಈಗಾಗಲೇ ತಮ್ಮ ಹೇಳಿಕೆಯ ಬಗ್ಗೆ ಕ್ಷಮೆ ಯಾಚಿಸಿರುವ ಕಾಂಗ್ರೆಸ್ ನ ಸಾಗರೋತ್ತರ ಅಧ್ಯಕ್ಷ ಸ್ಯಾಮ್ ಪಿತ್ರೋಡಾ, "ನನಗೆ ಹಿಂದಿ ಸರಿಯಾಗಿ ಬರುವುದಿಲ್ಲ. ನಾನು 'ಜೋ ಹುವಾ ವೋ ಬುರಾ ಹುವಾ'(ಅಂದು ಏನಾಗಿತ್ತೋ ಅದು ಖಂಡನೀಯ) ಎಂದು ಹೇಳಲು ಹೊರಟಿದ್ದೆ. ಆದರೆ ನನಗೆ ಬುರಾ ಎಂಬ ಪದ ನೆನಪಾಗಲಿಲ್ಲ. ಆದ್ದರಿಂದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ" ಎಂದಿದ್ದಾರೆ.
ಸ್ಯಾಮ್ ಪಿತ್ರೋಡಾ ಹೇಳಿಕೆಗೂ ತನಗೂ ಸಂಬಂಧವಿಲ್ಲ ಎಂದ ಕಾಂಗ್ರೆಸ್
1984 ರ ಸಿಖ್ ದಂಗೆಯಲ್ಲಿ, ಸಿಖ್ಕರನ್ನು ಕೊಲ್ಲುವಂತೆ ಆದೇಶ ನೀಡಿದ್ದೇ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಸ್ಯಾಮ್ ಪಿತ್ರೋಡಾ, "ಆಗಿದ್ದೆಲ್ಲ ಆಗಿಹೋಯ್ತು, ಭೂತಕಾಲದ ಬಗ್ಗೆ ಮಾತನಾಡಿ ಏನು ಪ್ರಯೋಜನ(ಹುವಾ ತೋ ಹುವಾ)?" ಎಂದು ಪ್ರಶ್ನಿಸಿದ್ದರು.
ಸ್ಯಾಮ್ ಪಿತ್ರೋಡಾ ಕಾಂಗ್ರೆಸ್ನ ಮಣಿ ಶಂಕರ್ ಅಯ್ಯರ್ ಆಗುತ್ತಿದ್ದಾರಾ?
ಅವರ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಈ ಬಗ್ಗೆ ಇಂದು ಹರ್ಯಾಣದಲ್ಲಿ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೊದಿ, "ಕಾಂಗ್ರೆಸ್ ನ ಹಿರಿಯ ನಾಯಕರು, ಗಾಂಧಿ ಕುಟುಂಬದ ಆಪ್ತರು ನೀಡಿದ ಹುವಾ ತೋ ಹುವಾ ಎಂಬ ಮೂರು ಪದ ಸಾಕು, ಕಾಂಗ್ರೆಸ್ಸಿಗರ ಮನಸ್ಥಿತಿ, ನಡವಳಿಕೆಯನ್ನು ಅರಿಯುವುದಕ್ಕೆ. ಅವರ ದುರಹಂಕಾರಕ್ಕೆ ಇದೇ ಸಾಕ್ಷಿ" ಎಂದಿದ್ದರು.