ಮೋದಿ ಮೌನವೇಕೆ? ಏಕೆ ಅಡಗಿಕೊಂಡಿದ್ದಾರೆ? ಪಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಲಡಾಖ್, ಜೂನ್ 17: ಚೀನಾ ಮತ್ತು ಭಾರತದ ನಡುವೆ ಘರ್ಷಣೆ ನಡೆದಿದೆ, 20 ಮಂದಿ ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಪ್ರಧಾನಿ ಮೋದಿ ಏಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
Recommended Video
ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ಘರ್ಷಣೆಯಲ್ಲಿ 20 ಯೋಧರ ಮೃತಪಟ್ಟಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಯಾವ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಕೇಳುತ್ತಿದ್ದಾರೆ.
Why is the PM silent?
— Rahul Gandhi (@RahulGandhi) June 17, 2020
Why is he hiding?
Enough is enough. We need to know what has happened.
How dare China kill our soldiers?
How dare they take our land?
ಈ ಕುರಿತು ಬುಧವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ''ಮೋದಿ ಏಕೆ ಮೌನವಾಗಿದ್ದಾರೆ? ಅವರು ಏಕೆ ಅಡಗಿಕೊಂಡಿದ್ದಾರೆ? ಸಾಕಾಗಿದೆ, ಚೀನಾ ವಿಚಾರದಲ್ಲಿ ಏನಾಗುತ್ತಿದೆ ಎಂಬುದು ನಮಗೆ ಗೊತ್ತಾಗಬೇಕಿದೆ.....
'ಸರ್ಕಾರದ ಗುತ್ತಿಗೆಗಳಿಂದ ಚೀನಾ ನಿಷೇಧಿಸಿ, ಹುತಾತ್ಮ ಯೋಧರನ್ನು ಗೌರವಿಸಿ'
ನಮ್ಮ ಯೋಧರನ್ನು ಕೊಲ್ಲಲು ಚೀನಾ ಎಷ್ಟು ಧೈರ್ಯ?
ನಮ್ಮ ಭೂಮಿಯನ್ನು ವಶಪಡಿಸಿಕೊಳ್ಳಲು ಎಷ್ಟು ಧೈರ್ಯ?'' ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.
ಸೋಮವಾರ ನಡೆದ ಈ ಘರ್ಷಣೆಯಲ್ಲಿ ಚೀನಾದ ಸುಮಾರು 43 ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ ಹಾಗೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ, ಈ ಕುರಿತು ಚೀನಾ ಅಧಿಕೃತ ಹೇಳಿಕೆ ನೀಡಿಲ್ಲ.
ಇಂತಹ ಸಂದರ್ಭದಲ್ಲಿ ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಹಾಗೂ ಈ ಘಟನೆಗೆ ಸಂಬಂಧಿಸಿದಂತೆ ನಿಖರವಾದ ಮಾಹಿತಿ ನೀಡುವಂತೆ ಪ್ರತಿಪಕ್ಷಗಳು ಪ್ರಧಾನಿ ಅವರನ್ನು ಒತ್ತಾಯಿಸಿವೆ.