ರಫೇಲ್ ಯುದ್ಧವಿಮಾನ ಖರೀದಿ: ಕೇಂದ್ರದ ಮುಂದೆ ರಾಹುಲ್ ಗಾಂಧಿಯ 3 ಪ್ರಶ್ನೆಗಳು
ನವದೆಹಲಿ, ಜುಲೈ 30: ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದೆದುರು ಮತ್ತೆ ಮೂರು ಪ್ರಶ್ನೆಗಳನ್ನಿಟ್ಟಿದ್ದಾರೆ.
ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ಜೊತೆಗೆ 59,000 ಕೋಟಿ ರೂ.ಗಳ ರಫೇಲ್ ಒಪ್ಪಂದ ಮಾಡಿಕೊಂಡು ಅದಕ್ಕೆ ಉದ್ಯಮಿ ಅನಿಲ್ ಅಂಬಾನಿಯನ್ನು ಮಧ್ಯವರ್ತಿಯನ್ನಾಗಿ ನೇಮಕ ಮಾಡಿದ ದಿನದಿಂದ, ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಎದುರು ಅನೇಕ ಪ್ರಶ್ನೆಗಳನ್ನು ಮುಂದಿಡುತ್ತಲೇ ಬಂದಿದ್ದಾರೆ.

ರಾಹುಲ್ ಗಾಂಧಿ ಕೇಳಿದ ಮೂರು ಪ್ರಶ್ನೆಗಳು:
1) ಪ್ರತಿ ವಿಮಾನಕ್ಕೆ 526 ಕೋಟಿ ರೂ ಬದಲು 1670 ಕೋಟಿ ರೂ. ವೆಚ್ಚ ಮಾಡಿದ್ದೇಕೆ?
2) 126 ಯುದ್ಧ ವಿಮಾನಗಳ ಬದಲು ಕೇವಲ 36 ವಿಮಾನಗಳನ್ನು ಏಕೆ ಖರೀದಿಸಲಾಗುತ್ತಿದೆ ?
3) 30,000 ಕೋಟಿ ರಫೇಲ್ ಗುತ್ತಿಗೆಯನ್ನು ಹೆಚ್ಎಎಲ್ ಬದಲು ಅನಿಲ್ ಅಂಬಾನಿಗೆ ನೀಡಿದ್ದೇಕೆ ಎನ್ನುವ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ಉದ್ಯಮಿ ಅನಿಲ್ ಅಂಬಾನಿ ಅವರ ಅನನುಭವಿ ರಕ್ಷಣಾ ಕಂಪೆನಿಗೆ ರಫೇಲ್ ಒಪ್ಪಂದವನ್ನು ನೀಡಲು ಅನುಕೂಲವಾಗುವಂತೆ ಪ್ರಧಾನಿ ಮೋದಿ ನೋಡಿಕೊಂಡಿದ್ದಾರೆ. ಅಲ್ಲದೆ, ಅಧಿಕ ವೆಚ್ಚದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಕಳೆದ ಹಲವು ವರ್ಷಗಳಿಂದ ರಾಹುಲ್ ಗಾಂಧಿ ಟೀಕೆ ಮಾಡುತ್ತಲೇ ಇದ್ದಾರೆ. ಈ ನಡುವೆ ರಫೇಲ್ ಸಂಬಂಧ ಕೆಲವು ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳುವಾಗಿದೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.
Congratulations to IAF for Rafale.
— Rahul Gandhi (@RahulGandhi) July 29, 2020
Meanwhile, can GOI answer:
1) Why each aircraft costs ₹1670 Crores instead of ₹526 Crores?
2) Why 36 aircraft were bought instead of 126?
3) Why was bankrupt Anil given a ₹30,000 Crores contract instead of HAL?
ಟ್ವೀಟ್ ಮೂಲಕ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಮೂರು ಪ್ರಶ್ನೆಗಳನ್ನು ಮುಂದಿಟ್ಟಿರುವ ರಾಹುಲ್ ಗಾಂಧಿ, ರಫೇಲ್ ಯುದ್ಧ ವಿಮಾನಕ್ಕಾಗಿ ಭಾರತೀಯ ವಾಯುಪಡೆಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಕೂಡ ಇದೇ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications