ಮುಸ್ಲಿಂ ಪಾರ್ಟಿ: ರಾಹುಲ್ ಹೇಳಿಕೆಗೆ ಉರ್ದು ಪತ್ರಿಕೆ ಸಮಜಾಯಿಷಿ
ನವದೆಹಲಿ, ಜುಲೈ 17: 'ಕಾಂಗ್ರೆಸ್ ಒಂದು ಮುಸ್ಲಿಂ ಪಕ್ಷ' ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತಾನು ತಿರುಚಿಲ್ಲ. ಅವರು ಹೇಳಿದ್ದನ್ನೇ ನಾವು ಪ್ರಕಟಿಸಿದ್ದೇವೆ ಎಂದು 'ಇನ್ ಕ್ವಿಲಾಬ್' ಎಂಬ ಉರ್ದು ವೃತ್ತ ಪತ್ರಿಕೆ ಸಮಜಾಯಿಷಿ ನೀಡಿದೆ.
ಜು.11 ರಂದು ಮುಸ್ಲಿಂ ಪಂಡಿತರೊಂದಿಗೆ ಸಭೆ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಭೆಯಲ್ಲಿ 'ಕಾಂಗ್ರೆಸ್ ಮುಸ್ಲಿಂ ಪಕ್ಷ' ಎಂದಿದ್ದರು. ಇದನ್ನು ಆ ಸಭೆಯಲ್ಲಿ ಭಾಗವಹಿಸಿದ್ದ ಒಬ್ಬ ವ್ಯಕ್ತಿಯೇ ತಿಳಿಸಿದ್ದಾಗಿ ಪತ್ರಿಕೆ ಬರೆದುಕೊಂಡಿದೆ.
ಈ ಕುರಿತು ಸ್ಪಷ್ಟನೆ ನೀಡಿದ ಇನ್ ಕ್ವಿಲಾಬ್ ಪತ್ರಿಕೆಯ ಪತ್ರಕರ್ತ ಮುಮ್ತಾಜ್ ಅಲಾಮ್ ರಿಜ್ವಿ, ಈ ವರದಿಗೆ ನಾವು ಬದ್ಧರಾಗಿದ್ದೇವೆ. ನಾವು ಎಂದಿಗೂ ಮುಸ್ಲಿಂ ಪಾರ್ಟಿ ಎಂಬ ಪದವನ್ನು ಬಳಸಿಲ್ಲ. ಆದರೆ ಕಾಂಗ್ರೆಸ್ ಒಂದು ಮುಸ್ಲಿಮರಿಗಾಗಿ ಇರುವ ಪಕ್ಷ ಎಂದು ಬರೆದಿದ್ದೇವೆ. ಮಯಸ್ಲಿಮರು ಸಮಾಜದಲ್ಲಿ ದುರ್ಬಲ ವರ್ಗದವರಾಗಿದ್ದಾರೆ, ಅವರು ಈ ದೇಶದ ದಲಿತರ ಇನ್ನೊಂದು ಭಾಗವೆಂಬಂತಾಗಿದ್ದಾರೆ. ಆದ್ದರಿಂದ ಕಾಂಗ್ರೆಸ್ ಅವರ ಪರವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ರಿಜ್ವಿ ಹೇಳಿದ್ದಾರೆ.

ಈ ಹೇಳಿಕೆಯನ್ನು ದಿಗ್ವಿಜಯ್ ಸಿಂಗ್ ಸೇರಿದಂತೆ ಕಾಂಗ್ರೆಸ್ ಮುಖಂಡರೇ ಅಲ್ಲಗಳೆದಿದ್ದು, ಪತ್ರಿಕೆ ತಪ್ಪಾಗಿ ಅರ್ಥೈಸಿಕೊಂಡು ಬರೆದಿದೆ ಎಂದು ದೂರಿದ್ದರು. ಆದರೆ ಈ ಕುರಿತು ಸಮಜಾಯಷಿ ನೀಡಿ ಪತ್ರಿಕೆ ಮತ್ತೊಂದು ವರದಿಯನ್ನು ಪ್ರಕಟಿಸಿದೆ.
ರಾಹುಲ್ ಹೇಳಿಕೆಯ ವಿರುದ್ಧ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ರಾಹುಲ್ ಗಾಂಧಿ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದರು.
ರಾಹುಲ್ ಹೇಳಿಕೆಗೆ ಸಂಬಮಧಿಸಿದಂತೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ವಕ್ತಾರೆ ಪ್ರಿಯಾಂಕಾ ಚತುರ್ವೇದಿ, 'ರಾಹುಲ್ ಗಾಂಧಿ ಇಂಥ ಹೇಳಿಕೆ ನೀಡಿದ್ದು ಸುಳ್ಳು ಮತ್ತು ಮಾಧ್ಯಮಗಳು ನಾಚಿಕೆಗೇಡಿನ ಕೆಲಸ ಮಾಡಿವೆ. ಬಿಜೆಪಿ ಎಂದಿನಂತೆ ಇದನ್ನು ತನ್ನ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದೆ. ಇದು ದೇಶಕ್ಕೇ ಮಾಡುವ ಅವಮಾನ. ಇದರಿಂದ ನಮ್ಮ ಘನತೆಯೇನೂ ಕಡಿಮೆಯಾಗುವುದಿಲ್ಲ. ನಾವೆಂದಿಗೂ ಭಾರತದ ಪ್ರಜಾಪ್ರಭುತ್ವ ತತ್ವಗಳನ್ನು ಉಳಿಸಲು ಹೋರಾಡುತ್ತೇವೆ' ಎಂದು ಟ್ವೀಟ್ ಮಾಡಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications