ಮುಸ್ಲಿಂ ಪಾರ್ಟಿ: ರಾಹುಲ್ ಹೇಳಿಕೆಗೆ ಉರ್ದು ಪತ್ರಿಕೆ ಸಮಜಾಯಿಷಿ
ನವದೆಹಲಿ, ಜುಲೈ 17: 'ಕಾಂಗ್ರೆಸ್ ಒಂದು ಮುಸ್ಲಿಂ ಪಕ್ಷ' ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತಾನು ತಿರುಚಿಲ್ಲ. ಅವರು ಹೇಳಿದ್ದನ್ನೇ ನಾವು ಪ್ರಕಟಿಸಿದ್ದೇವೆ ಎಂದು 'ಇನ್ ಕ್ವಿಲಾಬ್' ಎಂಬ ಉರ್ದು ವೃತ್ತ ಪತ್ರಿಕೆ ಸಮಜಾಯಿಷಿ ನೀಡಿದೆ.
ಜು.11 ರಂದು ಮುಸ್ಲಿಂ ಪಂಡಿತರೊಂದಿಗೆ ಸಭೆ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಭೆಯಲ್ಲಿ 'ಕಾಂಗ್ರೆಸ್ ಮುಸ್ಲಿಂ ಪಕ್ಷ' ಎಂದಿದ್ದರು. ಇದನ್ನು ಆ ಸಭೆಯಲ್ಲಿ ಭಾಗವಹಿಸಿದ್ದ ಒಬ್ಬ ವ್ಯಕ್ತಿಯೇ ತಿಳಿಸಿದ್ದಾಗಿ ಪತ್ರಿಕೆ ಬರೆದುಕೊಂಡಿದೆ.
ಈ ಕುರಿತು ಸ್ಪಷ್ಟನೆ ನೀಡಿದ ಇನ್ ಕ್ವಿಲಾಬ್ ಪತ್ರಿಕೆಯ ಪತ್ರಕರ್ತ ಮುಮ್ತಾಜ್ ಅಲಾಮ್ ರಿಜ್ವಿ, ಈ ವರದಿಗೆ ನಾವು ಬದ್ಧರಾಗಿದ್ದೇವೆ. ನಾವು ಎಂದಿಗೂ ಮುಸ್ಲಿಂ ಪಾರ್ಟಿ ಎಂಬ ಪದವನ್ನು ಬಳಸಿಲ್ಲ. ಆದರೆ ಕಾಂಗ್ರೆಸ್ ಒಂದು ಮುಸ್ಲಿಮರಿಗಾಗಿ ಇರುವ ಪಕ್ಷ ಎಂದು ಬರೆದಿದ್ದೇವೆ. ಮಯಸ್ಲಿಮರು ಸಮಾಜದಲ್ಲಿ ದುರ್ಬಲ ವರ್ಗದವರಾಗಿದ್ದಾರೆ, ಅವರು ಈ ದೇಶದ ದಲಿತರ ಇನ್ನೊಂದು ಭಾಗವೆಂಬಂತಾಗಿದ್ದಾರೆ. ಆದ್ದರಿಂದ ಕಾಂಗ್ರೆಸ್ ಅವರ ಪರವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ರಿಜ್ವಿ ಹೇಳಿದ್ದಾರೆ.

ಈ ಹೇಳಿಕೆಯನ್ನು ದಿಗ್ವಿಜಯ್ ಸಿಂಗ್ ಸೇರಿದಂತೆ ಕಾಂಗ್ರೆಸ್ ಮುಖಂಡರೇ ಅಲ್ಲಗಳೆದಿದ್ದು, ಪತ್ರಿಕೆ ತಪ್ಪಾಗಿ ಅರ್ಥೈಸಿಕೊಂಡು ಬರೆದಿದೆ ಎಂದು ದೂರಿದ್ದರು. ಆದರೆ ಈ ಕುರಿತು ಸಮಜಾಯಷಿ ನೀಡಿ ಪತ್ರಿಕೆ ಮತ್ತೊಂದು ವರದಿಯನ್ನು ಪ್ರಕಟಿಸಿದೆ.
ರಾಹುಲ್ ಹೇಳಿಕೆಯ ವಿರುದ್ಧ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ರಾಹುಲ್ ಗಾಂಧಿ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದರು.
ರಾಹುಲ್ ಹೇಳಿಕೆಗೆ ಸಂಬಮಧಿಸಿದಂತೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ವಕ್ತಾರೆ ಪ್ರಿಯಾಂಕಾ ಚತುರ್ವೇದಿ, 'ರಾಹುಲ್ ಗಾಂಧಿ ಇಂಥ ಹೇಳಿಕೆ ನೀಡಿದ್ದು ಸುಳ್ಳು ಮತ್ತು ಮಾಧ್ಯಮಗಳು ನಾಚಿಕೆಗೇಡಿನ ಕೆಲಸ ಮಾಡಿವೆ. ಬಿಜೆಪಿ ಎಂದಿನಂತೆ ಇದನ್ನು ತನ್ನ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದೆ. ಇದು ದೇಶಕ್ಕೇ ಮಾಡುವ ಅವಮಾನ. ಇದರಿಂದ ನಮ್ಮ ಘನತೆಯೇನೂ ಕಡಿಮೆಯಾಗುವುದಿಲ್ಲ. ನಾವೆಂದಿಗೂ ಭಾರತದ ಪ್ರಜಾಪ್ರಭುತ್ವ ತತ್ವಗಳನ್ನು ಉಳಿಸಲು ಹೋರಾಡುತ್ತೇವೆ' ಎಂದು ಟ್ವೀಟ್ ಮಾಡಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications