ಕೊರೊನಾ ನಿಯಂತ್ರಿಸಲು ಕೇಂದ್ರಕ್ಕೆ ರಾಹುಲ್ ಗಾಂಧಿ ಮಾಸ್ಟರ್ ಪ್ಲಾನ್!
ನವದೆಹಲಿ, ಏಪ್ರಿಲ್.26: ಕೊರೊನಾ ವೈರಸ್ ಸೋಂಕು ಹರಡುವಿಕೆ ಕಡಿವಾಣಕ್ಕೆ ಭಾರತ ಲಾಕ್ ಡೌನ್ ಒಂದೇ ಪರಿಹಾರ ಮಾರ್ಗವಲ್ಲ ಎಂದು ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಭಾನುವಾರ ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ದೇಶದಲ್ಲಿ ಪ್ರತಿನಿತ್ಯ ಕನಿಷ್ಠ 1 ಲಕ್ಷ ಜನರನ್ನು ಕೊರೊನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಸಾಮೂಹಿಕ ವೈದ್ಯಕೀಯ ತಪಾಸಣೆ ಕೂಡಾ ಸೋಂಕು ಪತ್ತೆ ಮತ್ತು ನಿವಾರಣೆಗೆ ಸೂಕ್ತ ಮಾರ್ಗವೆಂದು ತಜ್ಞರೇ ಒಪ್ಪಿಕೊಂಡಿದ್ದಾರೆ.
ಕೊರೊನಾ: ಮೋದಿ ಸರಕಾರ ಇನ್ನಾದರೂ ರಾಹುಲ್ ಗಾಂಧಿ ಮಾತಿಗೆ ಮನ್ನಣೆ ನೀಡಲಿ
ಭಾರತದಲ್ಲಿ ಸದ್ಯದ ಮಟ್ಟಿಗೆ ಪ್ರತಿನಿತ್ಯ 40,000 ಜನರನ್ನು ಕೊರೊನಾ ವೈರಸ್ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಈ ಸಂಖ್ಯೆಯನ್ನು 1 ಲಕ್ಷಕ್ಕೆ ಏರಿಕೆ ಮಾಡುವಂತೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
"ದೇಶದಲ್ಲಿ ತಪಾಸಣಾ ಕಿಟ್ ಗಳ ಅಭಾವವಿಲ್ಲ":
ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಅಗತ್ಯವಿರುವ ವೈದ್ಯಕೀಯ ಕಿಟ್ ಗಳ ಅಭಾವವಿಲ್ಲ. ಹೀಗಿರುವಾಗ ಸಾಧ್ಯವಾದಷ್ಟು ವೇಗಗತಿಯಲ್ಲಿ ವೈದ್ಯಕೀಯ ತಪಾಸಣೆ ನಡೆಸಬೇಕು. ಆ ಮೂಲಕ ಕೊರೊನಾ ವೈರಸ್ ಸೋಂಕು ಹರಡುವಿಕೆಯಿಂದ ಪ್ರಜೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಅಂತ್ಯ ಹಾಡಬೇಕಿದೆ ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ ದೇಶದಲ್ಲಿ ಭಾನುವಾರದ ವೇಳೆಗೆ 26,496 ಮಂದಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೂ 824 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು, 5,804 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.