ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳೊಂದಿಗೆ ರಾಹುಲ್ ಮಹತ್ವದ ಸಭೆ
Recommended Video

ನವದೆಹಲಿ, ಡಿಸೆಂಬರ್ 13: ಛತ್ತೀಸ್ ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳ ಜೊತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು(ಡಿ.13) ಮಹತ್ವದ ಸಭೆ ನಡೆಸಲಿದ್ದಾರೆ.
ನವದೆಹಲಿಯಲ್ಲಿ ಸಭೆ ನಡೆಯಲಿದ್ದು, ಗುರುವಾರ ಸಂಜೆಯ ಒಳಗೆ ಮೂರು ರಾಜ್ಯಗಳ ಮುಖ್ಯಮಂತ್ರಿ ಅಭ್ಯರ್ಥಿಗಳು ಯಾರೆಂಬ ಕುರಿತು ಅಂತಿಮ ನಿರ್ಣಯ ಹೊರಬೀಳಲಿದೆ.
ಮಧ್ಯಪ್ರದೇಶದಲ್ಲಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ನಡುವಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಬಿರುಸಿನ ಪೈಪೋಟಿ ನಡೆಯುತ್ತಿದೆ.

ರಾಜಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ನಡುವೆ ಸಿಎಂ ಹುದ್ದೆಗಾಗಿ ಸ್ಪರ್ಧೆ ನಡೆಯುತ್ತಿದೆ.
ಛತ್ತೀಸ್ ಗಢದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭುಪೇಶ್ ಬಾಘೇಲ್ ಮತ್ತು ಪಕ್ಷದ ಮುಖಂಡ ಟಿ ಎಸ್ ಸಿಘ್ದಿಯೋ ನಡುವೆ ಪೈಪೋಟಿ ಎದ್ದಿದೆ.
ಇರುವ ಮೂರು ರಾಜ್ಯಗಳಿಗೆ ಆರು ಜನ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದು, ಅಂತಿಮ ನಿರ್ಣಯ ರಾಹುಲ್ ಗಾಂಧಿ ಅವರಿಗೆ ಬಿಟ್ಟಿದ್ದು ಎನ್ನಲಾಗಿದೆ.
ಆದರೆ ರಾಹುಲ್ ಗಾಂಧಿ ಅವರು ಈಗಾಗಲೇ ಈ ಮೂರೂ ರಾಜ್ಯಗಳ ಸುಮಾರು 7.3 ಲಕ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ವಾಯ್ಸ್ ಮೆಸೇಜ್ ಕಳಿಸಿದ್ದು, ಕಾರ್ಯಕರ್ತರೇ ಮುಖ್ಯಮಂತ್ರಿ ಹುದ್ದೆಗೆ ಹೆಸರು ಸೂಚಿಸುವಂತೆ ಮನವಿ ಮಾಡಿದ್ದಾರೆ. ಈ ಆಯ್ಕೆ ಗೌಪ್ಯವಾಗಿರಲಿದ್ದು, ಕಾರ್ಯಕರ್ತರ ಹೆಸರನ್ನು ಎಲ್ಲಿಯೂ ಬಹಿರಂಗ ಪಡಿಸುವುದಿಲ್ಲ ಎಂಬ ಅಭಯವನ್ನೂ ರಾಹುಲ್ ಗಾಂಧಿ ನೀಡಿದ್ದಾರೆ.
ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ 114 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಇತರರೊಂದಿಗೆ ಸೇರಿ ಸರ್ಕಾರ ರಚಿಸುತ್ತಿದ್ದರೆ, ರಾಜಸ್ಥಾನದಲ್ಲೂ 99(200) ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ರಚಿಸುತ್ತಿದೆ. ಛತ್ತೀಸ್ ಗಢದ 90 ಕ್ಷೇತ್ರಗಳಲ್ಲಿ 68 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ. ಇದರೊಟ್ಟಿಗೆ ತೆಲಂಗಾಣ ಮತ್ತು ಮಿಜೋರಾಂ ನಲ್ಲೂ ವಿಧಾನಸಭಾ ಚುನಾವಣೆ ನಡೆದಿತ್ತು. ಎಲ್ಲಾ ಐದು ರಾಜ್ಯಗಳ ಚುನಾವಣೆ ಫಲಿತಾಂಶ ಡಿಸೆಂಬರ್ 11 ರಂದು ಹೊರಬಿದ್ದಿತ್ತು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications