ಗುಜರಾತ್-ರಾಜಸ್ಥಾನದ ಪ್ರವಾಹ ಪೀಡಿದ ಪ್ರದೇಶಕ್ಕೆ ಭೇಟಿ ನೀಡಲಿರುವ ರಾಗಾ
ನವದೆಹಲಿ, ಆಗಸ್ಟ್ 2: ಪ್ರವಾಹದಿಂದ ತತ್ತರಿಸಿರುವ ಗುಜರಾತ್ ಮತ್ತು ರಾಜಸ್ಥಾನಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಆಗಸ್ಟ್ 4 ರಂದು ಭೇಟಿ ನೀಡಲಿದ್ದಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಳೆದ ಹಲವು ದಿನಗಳಿಂದ ಗುಜರಾತ್ ಮತ್ತು ರಾಜಸ್ಥಾನದ ಹಲವು ಭಾಗಗಳಲ್ಲಿ ನಡೆಯುತ್ತಿರುವ ಸತತ ಮಳೆಗೆ ಪ್ರವಾಹ ತಲೆದೂರಿದ್ದು, ರಾಜಸ್ಥಾನದಲ್ಲಿ ಇದುವರೆಗೂ ಸುಮಾರು 17 ಜನ ಅಸುನೀಗಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಸಹ ಗುಜರಾತಿಗೆ ಭೇಟಿ ನೀಡಿ ಪ್ರವಾಹ ಸಮತಸ್ಥರಿಗೆ ಸಾಂತ್ವನ ಹೇಳಿದ್ದಲ್ಲದೆ, ಪ್ರವಾಹದಲ್ಲಿ ಅಸುನೀಗಿದವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಮತ್ತು ಗಂಭಿರ ಗಾಯಗೊಂಡವರ ಚಿಕಿತ್ಸೆಗಾಗಿ 50 ಸಾವಿರ ರೂ. ನೀಡುವುದಾಗಿಯೂ ಘೋಷಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.












Click it and Unblock the Notifications