ಮೋದಿ ಮೌನ 'ಚುಡಾಯಿಸಿ' ಕವನ ಬರೆದ ರಾಹುಲ್ ಗಾಂಧಿ!
Recommended Video

ನವದೆಹಲಿ, ಅಕ್ಟೋಬರ್ 04: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೋ, ಇಲ್ಲವೋ ಗೊತ್ತಿಲ್ಲ. ಆದರೆ ಉತ್ತಮ ಕವಿಯಂತೂ ಆಗುತ್ತಾರೆ ಎಂಬಷ್ಟರ ಮಟ್ಟಿಗೆ ಟ್ವಿಟ್ಟರ್ ನಲ್ಲಿ ಪ್ರಾಸಬದ್ಧ ಕವನಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.
ಇತ್ತೀಚೆಗಷ್ಟೇ ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕವನವೊಂದನ್ನು ಗೀಚಿದ್ದ ರಾಹುಲ್ ಗಾಂಧಿ, ಇದೀಗ ಮತ್ತೊಂದು ಕವನ ಗೀಚಿದ್ದಾರೆ.
ಫ್ರಾನ್ಸ್ ಜೊತೆಗಿನ ರಫೇಲ್ ಯುದ್ಧ ವಿಮಾನ ಖರೀದಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದೇಕೆ ಎಂದು ಅವರು ತಮ್ಮ ಕವನದಲ್ಲಿ ಪ್ರಶ್ನಿಸಿದ್ದಾರೆ.
|
ರಾಹುಲ್ ಕವನದಲ್ಲಿ ಏನಿದೆ?
"ಭಾರತೀಯ ರೂಪಾಯಿ ಡಾಲರ್ ಎದುರು 73 ರೂಪಾಯಿಗೆ ಕುಸಿದಿದೆ. ಬೆಲೆ ಏರಿಕೆ ದೇಶದಲ್ಲಿ ದಂಗೆ ಎಬ್ಬಿಸಿದೆ. ತೈಲ ಮತ್ತು ಇಂಧನ ಬೆಲೆ ಗಗನಕ್ಕೇರಿದೆ. ಮಾರುಕಟ್ಟೆ ಕುಸಿಯುತ್ತಿದೆ. ಇಷ್ಟಾದರೂ 56 ಇಂಚಿನ ಎದೆ ಸೈಲೆಂಟ್ ಮೋಡಿನಲ್ಲಿರುವುದೇಕೆ? ನಿಮ್ಮ ಅಚ್ಚೇ ದಿನದ ಆಣೆ-ಪ್ರಮಾಣಗಳು ಏನಾದವು?" ಎಂದು ತಮ್ಮ ಕವನದಲ್ಲಿ ರಾಹುಲ್ ಪ್ರಶ್ನಿಸಿದ್ದಾರೆ. ಹಿಂದಿ ಭಾಷೆಯಲ್ಲಿರುವ ಈ ಕವನವನ್ನು ಪ್ರಾಸಬದ್ಧವಾಗಿ ಬರೆದ ರಾಹುಲ್ ತಾವೊಬ್ಬ ಉತ್ತಮ ಕವಿ ಎಂಬುದನ್ನು ಸಾಬೀತುಪಡಿಸಿದ್ದಾರೆ!
|
ಸಾಹೆಬ್ ಕಾ ಕಮಾಲ್ ದೇಖೋ...
ಕೆಲ ದಿನಗಳ ಹಿಂದೆ ಟ್ವಿಟ್ಟರ್ ನಲ್ಲಿ ಪದ್ಯ ಬರೆದಿದ್ದ ರಾಹುಲ್ ಗಾಂಧಿ, 'ಸಾಹೆಬ್ ಕಾ ಕಮಾಲ್ ದೇಖೋ...' ಎಂಬ ಸಾಲಿನಿಂದ ಪ್ರಧಾನಿ ಮೋದಿಯವರನ್ನು ಹಳಿದಿದ್ದರು. ರಫೇಲ್ ಡೀಲ್ ನಲ್ಲಿ ಹಗರಣವಾಗಿದ್ದರೂ, ರೂಪಾಯಿ ಮೌಲ್ಯ ಕುಸಿಯುತ್ತಿದ್ದರೂ, ತೈಲ ಬೆಲೆ ಏರುತ್ತಿದ್ದರೂ ಪ್ರಧಾನಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇದೇ ಸಾಹೇಬ ಮಾಡಿದ ಕಮಾಲು ಎಂದಿದ್ದರು ರಾಹುಲ್ ಗಾಂಧಿ!
|
ಮತ್ತೊಂದು ಪದ್ಯ
"ಮೋದಿ-ಅಂಬಾನಿಯವರ ಆಟ ನೋಡಿ, ತಮ್ಮ ಸ್ವಾರ್ಥಕ್ಕಾಗಿ ಎಚ್ ಎಎಲ್ ನಿಂದ ರಫೇಲ್ ಅನ್ನು ಕಿತ್ತುಕೊಂಡಿದ್ದಾರೆ. ಈ ದೇಶದ ಸೈನಿಕ ಬಲಿದಾನಕ್ಕೆ ಬೆಲೆ ಇಲ್ಲ. ರಕ್ಷಣಾ ಸಚಿವರು ರಜೆಯಲ್ಲಿದ್ದಾಗಲೇ, ಬಹುಮಹತ್ವದ ಒಪ್ಪಂದ ನಡೆದಿದೆ. ಈ ಮೂಲಕ ಮೋದಿ ಸರ್ಕಾರ ಜನರಿಗೆ ಮೋದ ಮಾಡುತ್ತಿದೆ" ಎಂದು ಅವರು ದೂರಿದ್ದರು.

ರಾಹುಲ್ ಪದ್ಯದಲ್ಲಿ ಇಣುಕುವ ರಫೇಲ್ ಡೀಲ್ ಏನು?
ಭಾರತವು ಫ್ರಾನ್ಸ್ ದೇಶದೊಂದಿಗೆ ಯುದ್ಧ ವಿಮಾನ ಖರೀದಿಗಾಗಿ ಮಾಡಿಕೊಂಡ ಒಪ್ಪಂದವೇ ರಫೇಲ್ ಡೀಲ್. ಆದರೆ ರಫೇಲ್ ಯುದ್ಧ ವಿಮಾನಗಳ ಬಿಡಿ ಭಾಗಗಳ ತಯಾರಿಕೆಯ ಜವಾಬ್ದಾರಿಯನ್ನು ಎಚ್ ಎಎಲ್ ಗೆ ನೀಡುವ ಬದಲು ಭಾರತ ರಿಲಯನ್ಸ್ ಡಿಫೆನ್ಸ್ ಇಂಡಸ್ಟ್ರೀಸ್ ಗೆ ಈ ಹೊಣೆ ನೀಡಿದ್ದು ವಿವಾದ ಸೃಷ್ಟಿಸಿದೆ. ರಫೇಲ್ ಗೆ ಸಂಬಂಧಿಸಿದಂತೆ ಬಹುಕೋಟಿ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ದೂರಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications